AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​; ಸುತ್ತುವರಿದ ಅಭಿಮಾನಿಗಳು

Jama Masjid: ಅಕ್ಷಯ್​ ಕುಮಾರ್​ ಅವರು ಜಾಮಾ ಮಸೀದಿ ಬಳಿ ಬಂದಾಗ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅವರ ಜೊತೆ ಬಾಡಿ ಗಾರ್ಡ್ಸ್​ ಕೂಡ ಇದ್ದರು. ಈ ವಿಡಿಯೋ ವೈರಲ್​ ಆಗಿದೆ.

Akshay Kumar: ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​; ಸುತ್ತುವರಿದ ಅಭಿಮಾನಿಗಳು
ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 05, 2023 | 10:06 PM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ದೇಶದ ವಿವಿಧ ಲೊಕೇಷನ್​ಗಳಲ್ಲಿ ಅವರು ಶೂಟಿಂಗ್​ ಮಾಡುತ್ತಿದ್ದಾರೆ. ವೇಗವಾಗಿ ಸಿನಿಮಾ ಕೆಲಸಗಳನ್ನು ಮುಗಿಸುವಲ್ಲಿ ಅಕ್ಷಯ್​ ಕುಮಾರ್​ ಎತ್ತಿದ ಕೈ. ಅನಗತ್ಯವಾಗಿ ಅವರು ಬಿಡುವು ಪಡೆದುಕೊಳ್ಳುವುದಿಲ್ಲ. ಈಗ ಅವರು ದೆಹಲಿಯ ಜಾಮಾ ಮಸೀದಿ (Jama Masjid) ಬಳಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರು ಸಡನ್​ ಆಗಿ ಕಾಣಿಸಿಕೊಂಡಿದ್ದು ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ತಮ್ಮ ನೆಚ್ಚಿನ ನಟನನ್ನು ನೋಡಲು ಜನರು (Akshay Kumar Fans) ಸುತ್ತುವರಿದಿದ್ದಾರೆ. ನೆರೆದಿದ್ದ ಎಲ್ಲ ಅಭಿಮಾನಿಗಳ ಕಡೆಗೆ ಅಕ್ಷಯ್​ ಕುಮಾರ್​ ಕೈ ಬೀಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಹೊಸ ಸಿನಿಮಾದ ಚಿತ್ರೀಕರಣದ ಸಲುವಾಗಿ ಅಕ್ಷಯ್​ ಕುಮಾರ್​ ಅವರು ಜಾಮಾ ಮಸೀದಿ ಬಳಿ ಬಂದಾಗ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅವರು ಕಾರು ಹತ್ತುವವರೆಗೂ ಬಾಡಿ ಗಾರ್ಡ್ಸ್​ ಜೊತೆಯಲ್ಲೇ ಇದ್ದರು. ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಎಷ್ಟೇ ಸಿನಿಮಾಗಳು ಸೋತರೂ ಕೂಡ ಅವರ ಬಗ್ಗೆ ಜನರಿಗೆ ಇರುವ ಕ್ರೇಜ್​ ಕಮ್ಮಿ ಆಗಿಲ್ಲ. ಅಷ್ಟರಮಟ್ಟಿಗೆ ಅವರು ಹವಾ ಕ್ರಿಯೇಟ್​ ಮಾಡಿದ್ದಾರೆ.

ಬರೀ ಸಿನಿಮಾದಲ್ಲಿ ಮಾತ್ರವಲ್ಲದೇ ನಿಜ ಜೀವನದಲ್ಲೂ ಕೂಡ ಅಕ್ಷಯ್​ ಕುಮಾರ್​ ಅವರು ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಪ್ರತಿದಿನ ಅವರು ವ್ಯಾಯಾಮ ತಪ್ಪಿಸುವುದಿಲ್ಲ. ಕ್ರೀಡೆ ಬಗ್ಗೆಯೂ ಅವರಿಗೆ ಸಖತ್​ ಆಸಕ್ತಿ ಇದೆ. ಇತ್ತೀಚೆಗೆ ಅವರು ಪೊಲೀಸರ ಜೊತೆ ವಾಲಿಬಾಲ್​ ಆಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿತ್ತು. ಶೂಟಿಂಗ್​ ಸಲುವಾಗಿ ಡೆಹರಾಡೂನ್​ಗೆ ತೆರಳಿದ್ದ ಅಕ್ಷಯ್​ ಕುಮಾರ್​ ಅವರು ಬಿಡುವಿನ ವೇಳೆ ವಾಲಿಬಾಲ್​ ಆಡಿದ್ದರು. ಅವರ ಪಂದ್ಯವನ್ನು ನೋಡಲು ಸ್ಟೇಡಿಯಂನಲ್ಲಿ ಜನರು ನೆರೆದಿದ್ದರು.

OMG 2: ಶೀಘ್ರದಲ್ಲೇ ರಿಲೀಸ್​ ಆಗಲಿದೆ ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’ ಸಿನಿಮಾ; ಒಟಿಟಿಯಲ್ಲೋ? ಚಿತ್ರಮಂದಿರವೋ?

ಅಕ್ಷಯ್​ ಕುಮಾರ್​ ಅವರು ಆಗಾಗ ಟ್ರೋಲ್​ ಆಗುತ್ತಾರೆ ಕೂಡ. ಚಿಕ್ಕ ಪುಟ್ಟ ಕಾರಣಕ್ಕೂ ಅವರನ್ನು ಟೀಕೆ ಮಾಡಲಾಗುತ್ತದೆ. ಇತ್ತೀಚೆಗೆ ಅವರು ದುಬಾರಿ ಬೆಲೆಯ ಬ್ಯಾಗ್​ ಧರಿಸಿದ್ದಕ್ಕೆ ಟ್ರೋಲ್​ ಆಗಿದ್ದರು. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅಕ್ಷಯ್​ ಕುಮಾರ್​ ಅವರು ಐಷಾರಾಮಿ ಜೀವನ ನಡೆಸುತ್ತಾರೆ. ಕೆಲವೇ ದಿನಗಳ ಹಿಂದೆ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಆ ವೇಳೆ ಅವರು ಧರಿಸಿದ್ದ ಬ್ಯಾಗ್​ ಮೇಲೆ ಎಲ್ಲರ ಕಣ್ಣು ಬಿದ್ದಿತ್ತು. ಆ ಬ್ಯಾಗ್​ ಬೆಲೆ 30 ಸಾವಿರ ರೂಪಾಯಿ. ಇಷ್ಟು ದುಬಾರಿ ಬ್ಯಾಗ್​ ಅವಶ್ಯಕತೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದರು. ‘ನಿರ್ಮಾಪಕರಿಗೆ ನೂರಾರು ಕೋಟಿ ರೂಪಾಯಿ ನಷ್ಟ ಮಾಡುವ ಅಕ್ಷಯ್​ ಕುಮಾರ್​ ಈಗ ಶೋಕಿ ಜೀವನ ನಡೆಸುತ್ತಿದ್ದಾರೆ’ ಎಂದೆಲ್ಲ ಕಮೆಂಟ್​ ಮಾಡಲಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ