Akshay Kumar: ಗಣಿಗಾರಿಕೆ ಕುರಿತು ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಗೆಲುವಿಗಾಗಿ ಟೈಟಲ್​ ಬದಲಾವಣೆ ಮಾಡಿದ ಚಿತ್ರತಂಡ?

The Great Indian Rescue: ಅಕ್ಷಯ್​ ಕುಮಾರ್​ ಅವರು ಬಯೋಪಿಕ್​ಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿ​ದ್ದಾರೆ. ರಿಯಲ್​ ಲೈಫ್​ ಘಟನೆಗಳನ್ನು ಆಧರಿಸಿದ ಸಿನಿಮಾಗಳಲ್ಲಿ ಅವರು ಹೆಚ್ಚಾಗಿ ನಟಿಸುತ್ತಾರೆ.

Akshay Kumar: ಗಣಿಗಾರಿಕೆ ಕುರಿತು ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಗೆಲುವಿಗಾಗಿ ಟೈಟಲ್​ ಬದಲಾವಣೆ ಮಾಡಿದ ಚಿತ್ರತಂಡ?
ಅಕ್ಷಯ್ ಕುಮಾರ್
Follow us
|

Updated on:May 11, 2023 | 7:20 PM

ಬಹಳ ವೇಗವಾಗಿ ಸಿನಿಮಾ ಕೆಲಸಗಳನ್ನು ಮುಗಿಸೋದು ಅಕ್ಷಯ್​ ಕುಮಾರ್ (Akshay Kumar)​ ಅವರ ರೂಢಿ. ಹಾಗಾಗಿ ಪ್ರತಿ ವರ್ಷ ಅವರ 4-5 ಸಿನಿಮಾಗಳು ಬಿಡುಗಡೆ ಆಗುತ್ತವೆ. ಈ ಅವಸರದ ಕಾರಣದಿಂದ ಕೆಲವೊಮ್ಮೆ ಅವರು ಎಡವಿದ್ದೂ ಉಂಟು. ಹಾಗಂತ ಅಕ್ಷಯ್​ ಕುಮಾರ್​ ಅವರ ವೇಗಕ್ಕೆ ಬ್ರೇಕ್​ ಬಿದ್ದಿಲ್ಲ. ಈಗಲೂ ಕೂಡ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. 2023ರಲ್ಲಿ ಅಕ್ಷಯ್​ ಕುಮಾರ್​ ಅಭಿನಯದ ‘ಸೆಲ್ಫಿ’ ಸಿನಿಮಾ ತೆರೆಕಂಡಿತು. ಆದರೆ ಆ ಚಿತ್ರ ಗೆಲುವು ಕಾಣಲಿಲ್ಲ. ಈಗ ಅವರ ಮುಂಬರುವ ಸಿನಿಮಾಗಳಿಗಾಗಿ ಫ್ಯಾನ್ಸ್​ ಕಾದಿದ್ದಾರೆ. ಆ ಪೈಕಿ ‘ಕ್ಯಾಪ್ಸೂಲ್​ ಗಿಲ್​’ (Capsule Gill) ಚಿತ್ರದ ಬಗ್ಗೆ ಹೆಚ್ಚು ನಿರೀಕ್ಷೆ ಇದೆ. ಈ ಸಿನಿಮಾದ ಬಗ್ಗೆ ಒಂದು ಗಾಸಿಪ್​ ಕೇಳಿಬಂದಿದೆ. ಬಿಡುಗಡೆಗೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಈ ಚಿತ್ರದ ಟೈಟಲ್​ ಬದಲಾವಣೆ ಮಾಡಲಾಗಿದೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ. ‘ದಿ ಗ್ರೇಟ್​ ಇಂಡಿಯನ್​ ರೆಸ್ಕ್ಯೂ’ (The Great Indian Rescue) ಎಂದು ಶೀರ್ಷಿಕೆ ಇಡಲಾಗಿದೆ ಎಂದು ಹೇಳಲಾಗುತ್ತಿದೆ. ಗಣಿಗಾರಿಕೆ ಕುರಿತು ಈ ಸಿನಿಮಾ ಮೂಡಿಬರುತ್ತಿದೆ.

ಅಕ್ಷಯ್​ ಕುಮಾರ್​ ಅವರು ಬಯೋಪಿಕ್​ಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿ​ದ್ದಾರೆ. ರಿಯಲ್​ ಲೈಫ್​ ಘಟನೆಗಳನ್ನು ಆಧರಿಸಿದ ಸಿನಿಮಾಗಳಲ್ಲಿ ಅವರು ಹೆಚ್ಚಾಗಿ ನಟಿಸುತ್ತಾರೆ. ಈಗ ‘ದಿ ಗ್ರೇಟ್​ ಇಂಡಿಯನ್​ ರೆಸ್ಕ್ಯೂ’ ಸಿನಿಮಾದಲ್ಲೂ ಅಂಥದ್ದೇ ಒಂದು ಕಥಾಹಂದರ ಇರಲಿದೆ. 1989ರಲ್ಲಿ ನಡೆದ ಒಂದು ಗಣಿ ದುರಂತದ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುವುದು. ಅದರಲ್ಲಿ ಅಕ್ಷಯ್​ ಕುಮಾರ್​ ಅವರು ಮೈನಿಂಗ್​ ಇಂಜಿನಿಯರ್​ ಜಸ್ವಂತ್​ ಸಿಂಗ್​ ಗಿಲ್​ ಪಾತ್ರವನ್ನು ಮಾಡುತ್ತಿದ್ದಾರೆ. ಜಸ್ವಂತ್​ ಸಿಂಗ್​ ಗಿಲ್​ ಅವರು 65 ಜನರ ಪ್ರಾಣ ಉಳಿಸಿದ ಕಥೆಯನ್ನು ಈ ಸಿನಿಮಾ ವಿವರಿಸಲಿದೆ.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಜತೆ ವಿದೇಶ ಸುತ್ತಿದ ಮೌನಿ ರಾಯ್​

ಇದನ್ನೂ ಓದಿ
Image
Salman Khan: ಶ್ರೀಮಂತರ ಮದುವೆಯಲ್ಲಿ ಡ್ಯಾನ್ಸ್​ ಮಾಡಿದ ಅಕ್ಷಯ್​, ಸಲ್ಲು: ಇದಕ್ಕಾಗಿ ಪಡೆದ ಹಣ ಎಷ್ಟು?
Image
Lionel Messi Biopic: ‘ಲಿಯೋನೆಲ್‌ ಮೆಸ್ಸಿ ಬಯೋಪಿಕ್​ನಲ್ಲಿ ಅಕ್ಷಯ್​ ಕುಮಾರ್​ ನಟಿಸಬೇಕು’; ಮೀಮ್ಸ್​ ವೈರಲ್​
Image
Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ
Image
Akshay Kumar: ಸತತ ಸೋಲಿನ ಬಳಿಕ ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾ ಮಾಡಲು ಮುಂದಾದ ನಟ ಅಕ್ಷಯ್​ ಕುಮಾರ್​

‘ಕ್ಯಾಪ್ಸೂಲ್​ ಗಿಲ್​’ ಎಂಬುದಕ್ಕಿಂತಲೂ ‘ದಿ ಗ್ರೇಟ್​ ಇಂಡಿಯನ್​ ರೆಸ್ಕ್ಯೂ’ ಎಂಬ ಶೀರ್ಷಿಕೆಯೇ ಈ ಸಿನಿಮಾಗೆ ಸೂಕ್ತ ಆಗಲಿದೆ ಎಂದು ಚಿತ್ರತಂಡ ಅಭಿಪ್ರಾಯ ಪಟ್ಟಿದೆ. ಹಾಗಾಗಿ ಶೀರ್ಷಿಕೆ ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ವರದಿ ಆಗಿದೆ. ಆದರೆ ಚಿತ್ರತಂಡದಿಂದ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬಹಿರಂಗ ಆಗಬೇಕಿದೆ.

ಇದನ್ನೂ ಓದಿ: Akshay Kumar: ‘ಸೆಲ್ಫೀ’ ಹೀನಾಯ ಸೋಲು; ‘ಎಲ್ಲ ತಪ್ಪು ನನ್ನದೇ’ ಎಂದು ಹೊಣೆ ಹೊತ್ತುಕೊಂಡ ಅಕ್ಷಯ್​ ಕುಮಾರ್​

ಈ ಸಿನಿಮಾದ ಬಿಡುಗಡೆ ಬಗ್ಗೆ ಒಂದಷ್ಟು ಗೊಂದಲಗಳು ಇವೆ. ‘ಸೂರರೈ ಪೋಟ್ರು’ ಸಿನಿಮಾದ ಹಿಂದಿ ರಿಮೇಕ್​ನಲ್ಲೂ ಅಕ್ಷಯ್​ ಕುಮಾರ್​ ಅವರು ನಟಿಸಿದ್ದಾರೆ. ಸೆಪ್ಟೆಂಬರ್​ 1ರಂದು ಆ ಚಿತ್ರ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನವೇ ‘ದಿ ಗ್ರೇಟ್​ ಇಂಡಿಯನ್​ ರೆಸ್ಕ್ಯೂ’ ಬಿಡುಗಡೆ ಆಗಬಹುದು ಎಂದು ಹೇಳಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:20 pm, Thu, 11 May 23

Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...