AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಖ್ಯಾತ ನಿರ್ಮಾಪಕನ ಚಿತ್ರದಿಂದ ಅಕ್ಷಯ್ ಕುಮಾರ್ ಔಟ್​; ಕೈತಪ್ಪಿತು ದೊಡ್ಡ ಬಜೆಟ್ ಸಿನಿಮಾ

ಅಕ್ಷಯ್ ಅವರು ಮೇಜರ್ ಇಯನ್ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಈಗ ಅಕ್ಷಯ್ ಕುಮಾರ್ ಅವರು ಸಿನಿಮಾದಿಂದ ಹೊರ ನಡೆದಿದ್ದಾರೆ.

Akshay Kumar: ಖ್ಯಾತ ನಿರ್ಮಾಪಕನ ಚಿತ್ರದಿಂದ ಅಕ್ಷಯ್ ಕುಮಾರ್ ಔಟ್​; ಕೈತಪ್ಪಿತು ದೊಡ್ಡ ಬಜೆಟ್ ಸಿನಿಮಾ
ಅಕ್ಷಯ್​ ಕುಮಾರ್
TV9 Web
| Edited By: |

Updated on: Jan 06, 2023 | 1:45 PM

Share

ಅಕ್ಷಯ್ ಕುಮಾರ್ (Akshay Kumar)  ಅವರಿಗೆ ಇತ್ತೀಚೆಗೆ ಯಾಕೋ ಅದೃಷ್ಟ ಕೈಕೊಟ್ಟಂತಿದೆ. ಒಂದು ಕಡೆ ಸಾಲು ಸಾಲು ಚಿತ್ರಗಳು ಸೋಲುತ್ತಿವೆ. ಮತ್ತೊಂದು ಕಡೆ ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕೆ ಟೀಕೆಗೆ ಒಳಗಾಗುತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಅಕ್ಷಯ್ ಕುಮಾರ್ ವೃತ್ತಿಜೀವನಕ್ಕೆ ಸಾಕಷ್ಟು ಹಿನ್ನಡೆ ಆಗುತ್ತಿದೆ. ಈಗ ಅವರು ಖ್ಯಾತ ನಿರ್ಮಾಪಕನ ಸಿನಿಮಾದಿಂದ ಔಟ್ ಆಗಿದ್ದಾರೆ. ಇದು ಅಕ್ಷಯ್ ಕುಮಾರ್ ಅವರ ಅಭಿಮಾನಿಗಳ ಪಾಲಿಗೆ ಬೇಸರ ತರಿಸಿದೆ. ಹೀಗೆ ಆದರೆ ಮುಂದೇನು ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ.

ಆನಂದ್ ಎಲ್​. ರೈ ಅವರು ‘ಗೋರ್ಖಾ’ ಹೆಸರಿನ ಸಿನಿಮಾ ನಿರ್ಮಾಣ ಮಾಡುತ್ತಿದ್ದರು. ಭಾರತದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಮೇಜರ್ ಇಯನ್ ಕಾರ್ಡೊಜೋ ಅವರ ಜೀವನ ಆಧರಿಸಿ ಈ ಸಿನಿಮಾ ಸಿದ್ಧಗೊಳ್ಳುತ್ತಿತ್ತು. ಅಕ್ಷಯ್ ಅವರು ಮೇಜರ್ ಇಯನ್ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಈಗ ಅಕ್ಷಯ್ ಕುಮಾರ್ ಅವರು ಸಿನಿಮಾದಿಂದ ಹೊರ ನಡೆದಿದ್ದಾರೆ.

ಬಯೋಪಿಕ್ ಅನ್ನು ಮಾಡುವುದರಲ್ಲಿ ಅಕ್ಷಯ್ ಕುಮಾರ್ ಎತ್ತಿದ ಕೈ. ಅವರು ಹಲವು ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ‘ಗೋರ್ಖಾ’ ಕೂಡ ಬಯೋಪಿಕ್ ಆಗಿತ್ತು. ಆದರೆ, ಈ ಚಿತ್ರ ಈಗ ನಿಂತಿದೆ. ಇದಕ್ಕೆ ತಾಂತ್ರಿಕ ಸಮಸ್ಯೆ ಕಾರಣ ಎಂದು ಆನಂದ್ ರೈ ಹೇಳಿದ್ದಾರೆ. ಆದರೆ, ನಿರ್ಮಾಪಕರೊಂದಿಗೆ ಮೂಡಿದ ವೈಮನಸ್ಸಿನಿಂದ ಅಕ್ಷಯ್ ಔಟ್ ಆಗಿದ್ದಾರೆ ಎಂದು ಸುದ್ದಿ ಆಗಿದೆ.

ಆದರೆ, ಇದನ್ನು ಆನಂದ್ ಅವರು ತಳ್ಳಿ ಹಾಕಿದ್ದಾರೆ. ‘ಅಕ್ಷಯ್ ಕುಮಾರ್ ಅವರು ಸಿನಿಮಾದಿಂದ ಹೊರನಡೆದಿದ್ದಾರೆ ಎಂಬುದು ಸುಳ್ಳು. ಸಿನಿಮಾದ ಕಥೆಯ ಬಗ್ಗೆ ಅನೇಕ ಅನುಮಾಗಳು ಇದ್ದವು. ಆ ಬಗ್ಗೆ ಸ್ಪಷ್ಟನೆ ತೆಗೆದುಕೊಳ್ಳಬೇಕಿದೆ’ ಎಂದಿದ್ದಾರೆ ಆನಂದ್. ಬಯೋಪಿಕ್ ಮಾಡುವಾಗ ಹೆಚ್ಚು ಎಚ್ಚರಿಕೆ ಬೇಕು. ಸಣ್ಣ ಮಾಹಿತಿಯನ್ನು ತಿರುಚಿದರೂ ಸಾಕಷ್ಟು ಸಮಸ್ಯೆ ಆಗುತ್ತದೆ. ಈ ರಿಸ್ಕ್ ಬೇಡ ಎಂಬ ಕಾರಣಕ್ಕೆ ಅಕ್ಷಯ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.  

ಇದನ್ನೂ ಓದಿ: ಸಾಲು ಸಾಲು ಆಫರ್ ಕಳೆದುಕೊಂಡ ಅಕ್ಷಯ್ ಕುಮಾರ್; ದುರಾಸೆಯೇ ಕಾರಣ ಎಂದ ಫ್ಯಾನ್ಸ್

ಅಕ್ಷಯ್ ಕುಮಾರ್ ಕೈಯಿಂದ ಹಲವು ಸಿನಿಮಾಗಳು ಕೈತಪ್ಪುತ್ತಿವೆ. ‘ಭೂಲ್ ಭುಲಯ್ಯ’ ಸರಣಿಯಿಂದ ಅಕ್ಷಯ್ ಔಟ್ ಆದರು. ‘ಹೇರಾ ಫೇರಿ’ ಸರಣಿಯಲ್ಲೂ ಅಕ್ಷಯ್ ಇಲ್ಲ. ‘ವೆಲ್​ಕಮ್​’ ಸರಣಿಯಿಂದಲೂ ಅಕ್ಷಯ್​ಗೆ ಗೇಟ್ ಪಾಸ್ ನೀಡಲಾಗಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ