AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನ ‘ಕೇಸರಿ 2’ ಗಳಿಸಿದ್ದೆಷ್ಟು? ಗೆದ್ದರಾ ಅಕ್ಷಯ್ ಕುಮಾರ್

Kesari 2 box office collection: ಅಕ್ಷಯ್ ಕುಮಾರ್ ನಟನೆಯ ‘ಕೇಸರಿ 2’ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಿನಿಮಾ ದೇಶಪ್ರೇಮದ ಕತೆ ಹೊಂದಿದೆ. ಸಿನಿಮಾ ನೋಡಿದ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಕೇಸರಿ 2’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ ಹಣವೆಷ್ಟು? ಅಕ್ಷಯ್ ಕುಮಾರ್ ಗೆದ್ದರಾ? ಇಲ್ಲಿದೆ ಮಾಹಿತಿ...

ಮೊದಲ ದಿನ ‘ಕೇಸರಿ 2’ ಗಳಿಸಿದ್ದೆಷ್ಟು? ಗೆದ್ದರಾ ಅಕ್ಷಯ್ ಕುಮಾರ್
Kesari 2
ಮಂಜುನಾಥ ಸಿ.
|

Updated on: Apr 19, 2025 | 8:20 AM

Share

ಸತತ ಸೋಲುಗಳನ್ನೇ ಕಾಣುತ್ತಿರುವ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಕೇಸರಿ 2’ (Kesari 2) ಸಿನಿಮಾ ನಿನ್ನೆ (ಏಪ್ರಿಲ್ 19) ಬಿಡುಗಡೆ ಆಗಿದೆ. ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ನ್ಯಾಯಾಲಯ ವಿಚಾರಣೆಯನ್ನು ಆಧರಿಸಿ ನಿರ್ಮಾಣಗೊಂಡಿರುವ ಸಿನಿಮಾ ಇದಾಗಿದೆ. ಸಿನಿಮಾನಲ್ಲಿ ಚೆತ್ತೂರು ಶಂಕರ ನಾಯರ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದಾರೆ. ನಿವಿಲೆ ಮೆಕಿನ್ಲೆ ಪಾತ್ರದಲ್ಲಿ ಆರ್ ಮಾಧವನ್ ನಟಿಸಿದ್ದಾರೆ. ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಮೊದಲ ದಿನ ಸಿನಿಮಾ ಮಾಡಿರುವ ಕಲೆಕ್ಷನ್ ಎಷ್ಟು? ಮಾಹಿತಿ ಇಲ್ಲಿದೆ…

‘ಕೇಸರಿ 2’ ಸಿನಿಮಾ ಮೊದಲ ದಿನ ಸಾಧಾರಣ ಮೊತ್ತ ಕಲೆಕ್ಷನ್ ಮಾಡಿದೆ. ಬಿಡುಗಡೆ ಆದ ಮೊದಲ ದಿನ ಈ ಸಿನಿಮಾ ಗಳಿಸಿರುವುದು 7.50 ಕೋಟಿ ರೂಪಾಯಿ. ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕಿಂಗ್​ನಿಂದ ಸುಮಾರು 1.50 ಕೋಟಿ ಹಣ ಗಳಿಕೆಯಾಗಿತ್ತು. ಎಲ್ಲವೂ ಸೇರಿ ಮೊದಲ ದಿನಕ್ಕೆ ಕೇವಲ 7.50 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಆ ಮೂಲಕ ಅಕ್ಷಯ್ ಕುಮಾರ್ ಮತ್ತೊಂದು ಸಾಧಾರಣ ಓಪನಿಂಗ್ ಅನ್ನು ಪಡೆದುಕೊಂಡಿದೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಸನ್ನಿ ಡಿಯೋಲ್​ರ ಜಾಟ್ ಸಿನಿಮಾ ಮೊದಲ ದಿನ 7.40 ಕೋಟಿ ರೂಪಾಯಿ ಗಳಿಕೆ ಕಂಡಿತ್ತು.

ಶುಕ್ರವಾರ ಗುಡ್ ಫ್ರೈಡೆ ರಜೆ ಇತ್ತು. ಹಾಗಿದ್ದರೂ ಸಹ ಜನ ಅಕ್ಷಯ್ ಕುಮಾರ್ ಅವರ ಸಿನಿಮಾ ನೋಡಲು ಆಸಕ್ತಿ ತೋರಿಸಿಲ್ಲ. ಮೊದಲ ದಿನ 7.50 ಕೋಟಿ ಸಾಧಾರಣ ಮೊತ್ತವಾದರೂ ನಿರಾಶಾದಾಯಕ ಮೊತ್ತವಲ್ಲ. ‘ಜಾಟ್’ ಸಿನಿಮಾ ರೀತಿ ಇದೇ ಸರಾಸರಿಯನ್ನು ಮುಂದುವರೆಸಿಕೊಂಡು ಹೋದಲ್ಲಿ ‘ಕೇಸರಿ 2’ ಸಿನಿಮಾ 50-60 ಕೋಟಿ ಕಲೆಕ್ಷನ್ ಅನ್ನು ಸುಲಭವಾಗಿ ದಾಟಿಕೊಳ್ಳಲಿದೆ.

ಇದನ್ನೂ ಓದಿ:‘ಕೇಸರಿ 2’ ಸಿನಿಮಾ ನೋಡಿದ ನೆಟ್ಟಿಗರು ಹೇಳಿದ್ದೇನು? ಸಿನಿಮಾ ಹೇಗಿದೆ?

ಇದೇ ವರ್ಷ ಜನವರಿಯಲ್ಲಿ ಬಿಡುಗಡೆ ಆಗಿದ್ದ ಅಕ್ಷಯ್ ಕುಮಾರ್ ನಟನೆಯ ‘ಸ್ಕೈ ಫೋರ್ಸ್’ ಸಿನಿಮಾ ಮೊದಲ ದಿನ 11 ಕೋಟಿಗೂ ಹೆಚ್ಚಿನ ಮೊತ್ತ ಗಳಿಕೆ ಮಾಡಿತ್ತು. ಸಿನಿಮಾ ಒಟ್ಟು ಕಲೆಕ್ಷನ್ ಸಹ ಉತ್ತಮವಾಗಿಯೇ ಇತ್ತು. ಇದೀಗ ಲಾಂಗ್ ವೀಕೆಂಡ್ ನಡೆಯುತ್ತಿದ್ದು ‘ಕೇಸರಿ 2’ ಸಿನಿಮಾದ ಕಲೆಕ್ಷನ್ ವೀಕೆಂಡ್​ನಲ್ಲಿ ಉತ್ತಮಗೊಳ್ಳುವ ನಿರೀಕ್ಷೆ ಇದೆ. ಅಲ್ಲದೆ ಸಿನಿಮಾ ನೋಡಿದ ಜನರೂ ಸಹ ಸಿನಿಮಾ ಬಗ್ಗೆ ಧನಾತ್ಮಕ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು ಇದು ಸಹ ಸಿನಿಮಾದ ಕಲೆಕ್ಷನ್ ಉತ್ತಮಗೊಳ್ಳಲು ಸಹಕಾರಿ ಆಗಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು