‘ಕೇಸರಿ: ಚಾಪ್ಟರ್ 2’ ಸಿನಿಮಾಗೆ ದೊಡ್ಡ ಪೆಟ್ಟು; ಬಿಡುಗಡೆಯಾಗಿ ಕೆಲವೇ ಗಂಟೆಯಲ್ಲಿ ಪೈರಸಿ

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ‘ಕೇಸರಿ: ಚಾಪ್ಟರ್ 2’ ಸಿನಿಮಾ ಲೀಕ್ ಆಗಿದೆ. ಇದರಿಂದ ಚಿತ್ರದ ಕಲೆಕ್ಷನ್​ಗೆ ತೊಂದರೆ ಆಗಲಿದೆ. ಹಲವು ಪೈರಸಿ ವೆಬ್​ಸೈಟ್​ಗಳಲ್ಲಿ ಈ ಸಿನಿಮಾವನ್ನು ಹರಿಬಿಡಲಾಗಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ. ಕೆಲವೇ ದಿನಗಳ ಹಿಂದೆ ‘ಸಿಕಂದರ್’, ‘ಛಾವ’ ಮುಂತಾದ ಚಿತ್ರಗಳಿಗೆ ಕೂಡ ಪೈರಸಿ ಸಮಸ್ಯೆ ಎದುರಾಗಿತ್ತು.

‘ಕೇಸರಿ: ಚಾಪ್ಟರ್ 2’ ಸಿನಿಮಾಗೆ ದೊಡ್ಡ ಪೆಟ್ಟು; ಬಿಡುಗಡೆಯಾಗಿ ಕೆಲವೇ ಗಂಟೆಯಲ್ಲಿ ಪೈರಸಿ
Kesari Chapter 2 Poster

Updated on: Apr 18, 2025 | 6:23 PM

ನಟ ಅಕ್ಷಯ್​ ಕುಮಾರ್​ ಅವರು ಬಹಳ ಶ್ರದ್ಧೆಯಿಂದ ‘ಕೇಸರಿ: ಚಾಪ್ಟರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ದೇಶಭಕ್ತಿಯ ಕಥೆ ಇದೆ. ಈ ಸಿನಿಮಾವನ್ನು ಪ್ರೇಕ್ಷಕರು ಗಮನವಿಟ್ಟು ನೋಡಬೇಕು ಎಂದು ಅಕ್ಷಯ್ ಕುಮಾರ್​ (Akshay Kumar) ಅವರು ಮನವಿ ಮಾಡಿದ್ದಾರೆ. ಆದರೆ ಆರಂಭದಲ್ಲಿಯೇ ಈ ಚಿತ್ರಕ್ಕೆ ವಿಘ್ನ ಎದುರಾಗಿದೆ. ವರದಿಗಳ ಪ್ರಕಾರ, ‘ಕೇಸರಿ: ಚಾಪ್ಟರ್ 2’ ಸಿನಿಮಾದ ಪೈರಸಿ (Kesari Chapter 2 Piracy) ಕಾಪಿ ಲೀಕ್ ಆಗಿದೆ. ಏಪ್ರಿಲ್ 18ರಂದು ಈ ಚಿತ್ರ ಬಿಡುಗಡೆ ಆಗಿದ್ದು, ಆನ್​ಲೈನ್​ನಲ್ಲಿ ಪೈರಸಿ ಹಾವಳಿ ಶುರುವಾಗಿದೆ. ಇದರಿಂದ ಸಿನಿಮಾ ತಂಡಕ್ಕೆ ತಲೆ ಬಿಸಿ ಶುರುವಾಗಿದೆ.

ಅಕ್ಷಯ್ ಕುಮಾರ್ ಅವರಿಗೆ ಒಂದು ದೊಡ್ಡ ಗೆಲುವಿನ ಅಗತ್ಯವಿದೆ. ‘ಕೇಸರಿ: ಚಾಪ್ಟರ್ 2’ ಸಿನಿಮಾದ ಮೂಲಕ ಆ ಗೆಲುವು ಸಿಗಲಿದೆ ಎಂದು ಅನೇಕರು ನಿರೀಕ್ಷಿಸಿದ್ದಾರೆ. ಮೊದಲ ದಿನ ಪ್ರೇಕ್ಷಕರಿಂದ ಉತ್ತಮ ವಿಮರ್ಶೆ ಸಿಕ್ಕಿದೆ. ಇನ್ನೇನು ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ ಉತ್ತಮವಾಗಿ ಗಳಿಕೆ ಮಾಡುತ್ತದೆ ಎಂದುಕೊಳ್ಳುವಾಗಲೇ ಪೈರಸಿ ಕಾಟ ಆರಂಭ ಆಗಿದೆ.

ಸ್ಟಾರ್ ಸಿನಿಮಾಗಳನ್ನು ಟಾರ್ಗೆಟ್ ಮಾಡಿ ಪೈರಸಿ ಮಾಡುವ ದೊಡ್ಡ ಜಾಲ ಸಕ್ರಿಯವಾಗಿದೆ. ಅದಕ್ಕಾಗಿಯೇ ಅನೇಕ ವೆಬ್​ಸೈಟ್​ಗಳು ಹುಟ್ಟಿಕೊಂಡಿವೆ. ಅಂಥ ಸೈಟ್​ಗಳಲ್ಲಿ ಈಗಾಗಲೇ ‘ಕೇಸರಿ: ಚಾಪ್ಟರ್ 2’ ಸಿನಿಮಾದ ಪೈರಸಿ ಕಾಪಿ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ. ಹಾಗಿದ್ದರೂ ಕೂಡ ಚಿತ್ರತಂಡದವರು ಇನ್ನೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಕ್ರಮ ಕೈಗೊಂಡ ಬಗ್ಗೆಯೂ ಸದ್ಯಕ್ಕೆ ವರದಿ ಆಗಿಲ್ಲ.

ಇದನ್ನೂ ಓದಿ
80 ಕೋಟಿ ರೂಪಾಯಿಗೆ ಅಪಾರ್ಟ್​ಮೆಂಟ್ ಮಾರಿಕೊಂಡ ಅಕ್ಷಯ್ ಕುಮಾರ್
ರಾಜಮೌಳಿ ಅಂಥ ನಿರ್ದೇಶಕರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರಾ ಅಕ್ಷಯ್ ಕುಮಾರ್?
57 ವರ್ಷಗಳಲ್ಲಿ ಅಕ್ಷಯ್ ಕುಮಾರ್ ಸಂಪಾದಿಸಿದ ಆಸ್ತಿ ಎಷ್ಟು?
ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್

ಈ ವರ್ಷ ಬಿಡುಗಡೆ ಆದ ‘ಛಾವ’, ‘ಸಿಕಂದರ್’ ಮುಂತಾದ ಸಿನಿಮಾಗಳು ಕೂಡ ಪೈರಸಿ ಹಾವಳಿಗೆ ಒಳಗಾಗಿದ್ದವು. ‘ಛಾವ’ ಸಿನಿಮಾವನ್ನು ಪೈರಸಿ ಮಾಡಲು ತಮ್ಮದೇ ಆ್ಯಪ್ ನಿರ್ಮಿಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮುಂಬೈನ ಸೈಬರ್ ಪೊಲೀಸರು ಬಂಧಿಸಿದ್ದರು. ಈಗ ‘ಕೇಸರಿ 2’ ಸಿನಿಮಾ ಕೂಡ ಪೈರಸಿ ಹೊಡೆತಕ್ಕೆ ಸಿಕ್ಕಿದೆ. ಇದರಿಂದ ಅಕ್ಷಯ್ ಕುಮಾರ್ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ.

ಇದನ್ನೂ ಓದಿ: ‘ಕೇಸರಿ 2’ ಸಿನಿಮಾ ನೋಡಿದ ನೆಟ್ಟಿಗರು ಹೇಳಿದ್ದೇನು? ಸಿನಿಮಾ ಹೇಗಿದೆ?

ಕರಣ್ ಸಿಂಗ್ ತ್ಯಾಗಿ ಅವರು ‘ಕೇಸರಿ: ಚಾಪ್ಟರ್ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಜಲಿಯನ್​ವಾಲಾ ಬಾಗ್ ಹತ್ಯಾಕಾಂಡದ ಕುರಿತು ಈ ಸಿನಿಮಾ ಸಿದ್ಧವಾಗಿದೆ. ಅಕ್ಷಯ್ ಕುಮಾರ್, ಅನನ್ಯಾ ಪಾಂಡೆ, ಆರ್. ಮಾಧವನ್ ಮುಂತಾದವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us