Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಭಕ್ತಿ ಸಿನಿಮಾಗೆ ‘ಎ’ ಪ್ರಮಾಣ ಪತ್ರ ನೀಡಿದ ಸೆನ್ಸಾರ್ ಮಂಡಳಿ; ಕಾರಣ ಏನು?

ಅಕ್ಷಯ್ ಕುಮಾರ್​ ನಟನೆಯ ‘ಕೇಸರಿ: ಚಾಪ್ಟರ್​ 2’ ಸಿನಿಮಾದಲ್ಲಿ ದೇಶಭಕ್ತಿಯ ಕಥೆ ಇದೆ. ಈ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಏಪ್ರಿಲ್ 18ಕ್ಕೆ ಈ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಕರಣ್ ಸಿಂಗ್ ತ್ಯಾಗಿ ಆ್ಯಕ್ಷನ್-ಕಟ್ ಹೇಳಿದ್ದಾರೆ. ಅಕ್ಷಯ್ ಕುಮಾರ್ ಜೊತೆ ಆರ್. ಮಾಧವನ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ದೇಶಭಕ್ತಿ ಸಿನಿಮಾಗೆ ‘ಎ’ ಪ್ರಮಾಣ ಪತ್ರ ನೀಡಿದ ಸೆನ್ಸಾರ್ ಮಂಡಳಿ; ಕಾರಣ ಏನು?
Akshay Kumar
Follow us
ಮದನ್​ ಕುಮಾರ್​
|

Updated on: Apr 10, 2025 | 7:04 PM

ಟ್ರೇಲರ್ ಮೂಲಕ ‘ಕೇಸರಿ: ಚಾಪ್ಟರ್​ 2’ (Kesari Chapter 2) ಸಿನಿಮಾ ಗಮನ ಸೆಳೆದಿದೆ. ಏಪ್ರಿಲ್ 18ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ (Akshay Kumar), ಆರ್​. ಮಾಧವನ್, ಅನನ್ಯಾ ಪಾಂಡೆ ಮುಂತಾದವರು ನಟಿಸಿದ್ದಾರೆ. ‘ಕೇಸರಿ: ಚಾಪ್ಟರ್​ 2’ ಸಿನಿಮಾದಲ್ಲಿ ದೇಶಭಕ್ತಿ ಕಥಾಹಂದರ ಇದೆ. ಎಲ್ಲ ವರ್ಗದ ಪ್ರೇಕ್ಷಕರು ಈ ಸಿನಿಮಾ ನೋಡಬೇಕು ಎಂಬುದು ಚಿತ್ರತಂಡದ ನಿರೀಕ್ಷೆ ಆಗಿರುತ್ತದೆ. ಆದರೆ ಈ ಸಿನಿಮಾಗೆ ಈಗ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಅಂದರೆ, 18 ವರ್ಷ ವಯಸ್ಸಿಗಿಂತಲೂ ಕಿರಿಯರು ಈ ಸಿನಿಮಾವನ್ನು ವೀಕ್ಷಿಸುವಂತಿಲ್ಲ. ಅಷ್ಟಕ್ಕೂ ‘ಕೇಸರಿ: ಚಾಪ್ಟರ್​ 2’ (Kesari 2) ಸಿನಿಮಾಗೆ ‘ಎ’ ಪ್ರಮಾಣಪತ್ರ ಸಿಕ್ಕಿದ್ದು ಯಾಕೆ ಎಂಬ ಬಗ್ಗೆ ಇಲ್ಲಿದೆ ವಿವರ..

1919ರ ಏಪ್ರಿಲ್ 13ರಂದು ನಡೆದ ಜಲಿಯನ್​ವಾಲಾ ಬಾಗ್ ಹತ್ಯಾಕಾಂಡದ ಕುರಿತು ‘ಕೇಸರಿ: ಚಾಪ್ಟರ್ 2’ ಸಿನಿಮಾ ಮೂಡಿಬಂದಿದೆ. ಈ ಹತ್ಯಾಕಾಂಡವನ್ನು ಪ್ರಶ್ನಿಸಿ ಬ್ರಿಟಿಷ್ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಿದ ಶಂಕರನ್ ನಾಯರ್ ಜೀವನದ ಕುರಿತು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಹತ್ಯಾಕಾಂಡದ ಭೀಕರತೆ ಇರುವುದರಿಂದ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ಸಿಕ್ಕಿರುವ ಸಾಧ್ಯತೆ ಹೆಚ್ಚಿದೆ.

2019ರಲ್ಲಿ ಬಂದ ‘ಕೇಸರಿ’ ಸಿನಿಮಾದಲ್ಲಿ ಕೂಡ ದೇಶಭಕ್ತಿ ಕಥಾಹಂದರ ಇತ್ತು. ಈಗ ‘ಕೇಸರಿ: ಚಾಪ್ಟರ್​ 2’ ಸಿನಿಮಾ ಕೂಡ ಒಂದು ಐತಿಹಾಸಿಕ ಘಟನೆಯನ್ನು ಆಧರಿಸಿ ಸಿದ್ಧವಾಗಿದೆ. ಈ ಸಿನಿಮಾ ಮೇಲೆ ಅಕ್ಷಯ್ ಕುಮಾರ್ ಅವರ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ಕರಣ್ ಸಿಂಗ್ ತ್ಯಾಗಿ ಅವರು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ
Image
80 ಕೋಟಿ ರೂಪಾಯಿಗೆ ಅಪಾರ್ಟ್​ಮೆಂಟ್ ಮಾರಿಕೊಂಡ ಅಕ್ಷಯ್ ಕುಮಾರ್
Image
ರಾಜಮೌಳಿ ಅಂಥ ನಿರ್ದೇಶಕರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರಾ ಅಕ್ಷಯ್ ಕುಮಾರ್?
Image
57 ವರ್ಷಗಳಲ್ಲಿ ಅಕ್ಷಯ್ ಕುಮಾರ್ ಸಂಪಾದಿಸಿದ ಆಸ್ತಿ ಎಷ್ಟು?
Image
ಭಾರತದ ಪೌರತ್ವ ಪಡೆದ ಬಳಿಕ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್

‘ಕೇಸರಿ: ಚಾಪ್ಟರ್​ 2’ ಸಿನಿಮಾದ ಅವಧಿ 2 ಗಂಟೆ 15 ನಿಮಿಷ ಇದೆ. ಅಕ್ಷಯ್ ಕುಮಾರ್​ ಅವರು ಲಾಯರ್ ಶಂಕರನ್ ನಾಯರ್ ಪಾತ್ರವನ್ನು ಮಾಡಿದ್ದಾರೆ. ಟ್ರೇಲರ್​​ನಲ್ಲಿ ಅವರ ಡೈಲಾಗ್​ಗಳು ಗಮನ ಸೆಳೆದಿವೆ. ಶಾಲಾಪಠ್ಯದಲ್ಲಿ ಹೇಳಿರದ ಅನೇಕ ವಿಷಯಗಳನ್ನು ಈ ಸಿನಿಮಾದ ಮೂಲಕ ಜನರಿಗೆ ತಲುಪಿಸಲು ಚಿತ್ರತಂಡ ಪ್ರಯತ್ನಿಸಿದೆ. ಈ ಸಿನಿಮಾ ಮೂಲಕ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅಕ್ಷಯ್ ಕುಮಾರ್​ ಇದ್ದಾರೆ.

ಇದನ್ನೂ ಓದಿ: 80 ಕೋಟಿ ರೂಪಾಯಿಗೆ ಅಪಾರ್ಟ್​ಮೆಂಟ್ ಮಾರಿಕೊಂಡ ಅಕ್ಷಯ್ ಕುಮಾರ್

ಹೀರೂ ಯಶ್ ಜೋಹರ್, ಅರುಣಾ ಭಾಟಿಯಾ, ಕರಣ್ ಜೋಹರ್, ಆಧಾರ್ ಪೂನಾವಾಲಾ, ಅಪೂರ್ವಾ ಮೆಹ್ತಾ, ಅಮೃತಲಾಲ್ ಸಿಂಗ್ ಬಿಂದ್ರಾ ಮತ್ತು ಆನಂದ್ ತಿವಾರಿ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಯೂಟ್ಯೂಬ್​ನಲ್ಲಿ ಈ ಸಿನಿಮಾದ ಟ್ರೇಲರ್​ 34 ಮಿಲಿಯನ್​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.