AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಯಲ್ಲಿ ನಡೆದ ಭೀಕರ ಘಟನೆಯನ್ನೇ ಸಿನಿಮಾ ಮಾಡಿದರು; ಗೆಲ್ಲುವ ಭರವಸೆಯಲ್ಲಿ ಅಕ್ಷಯ್ ಕುಮಾರ್

ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಅಕ್ಷಯ್ ಕುಮಾರ್ ನಟನೆಯ ‘ಸೆಲ್ಫೀ’ ಚಿತ್ರ ಸೋತಿದೆ. ಆ ಬಳಿಕ ರಿಲೀಸ್ ಆದ ಅವರ ಅಭಿನಯದ ‘ಒಹ್ ಮೈ ಗಾಡ್ 2’ ಚಿತ್ರ ಗೆದ್ದಿದೆ. ಈ ಸಿನಿಮಾ ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಹೊಸ ಸ್ಫೂರ್ತಿ ಸಿಕ್ಕಿದೆ.

ಗಣಿಯಲ್ಲಿ ನಡೆದ ಭೀಕರ ಘಟನೆಯನ್ನೇ ಸಿನಿಮಾ ಮಾಡಿದರು; ಗೆಲ್ಲುವ ಭರವಸೆಯಲ್ಲಿ ಅಕ್ಷಯ್ ಕುಮಾರ್
ಅಕ್ಷಯ್ ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 07, 2023 | 11:53 AM

Share

ಅಕ್ಷಯ್ ಕುಮಾರ್ (Akshay Kumar) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಳ್ಳುತ್ತಾರೆ. ಒಂದು ವರ್ಷದಲ್ಲಿ ಅವರ ನಟನೆಯ ಕನಿಷ್ಠ ಮೂರು ಸಿನಿಮಾಗಳಾದರೂ ರಿಲೀಸ್ ಆಗುತ್ತವೆ. ಈ ವರ್ಷ ಅಕ್ಷಯ್ ನಟನೆಯ ಮೂರನೇ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಹೌದು, ‘ಮಿಷನ್​ ರಾಣಿಗಂಜ್’ (Mission Raniganj Movie) ಚಿತ್ರ ಅಕ್ಟೋಬರ್ 6ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದ ಫಸ್ಟ್ ಪೋಸ್ಟರ್ ಗಮನ ಸೆಳೆಯುತ್ತಿದೆ. ಈ ಚಿತ್ರ ನೈಜ ಘಟನೆ ಆಧರಿಸಿ ಸಿದ್ಧಗೊಂಡಿರುವುದರಿಂದ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ.

ಅಕ್ಷಯ್ ಕುಮಾರ್ ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡರು. ಅವರಿಗೆ ಗೆಲುವೇ ಇಲ್ಲ ಎಂಬಂತಾಗಿತ್ತು. ಆದರೆ, ಜನರು ಅವರ ಸಿನಿಮಾ ನೋಡಲು ಬರುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಅಕ್ಷಯ್ ಕುಮಾರ್ ನಟನೆಯ ‘ಸೆಲ್ಫೀ’ ಚಿತ್ರ ಸೋತಿದೆ. ಆ ಬಳಿಕ ರಿಲೀಸ್ ಆದ ಅವರ ಅಭಿನಯದ ‘ಒಹ್ ಮೈ ಗಾಡ್ 2’ ಚಿತ್ರ ಗೆದ್ದಿದೆ. ಈ ಸಿನಿಮಾ ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಹೊಸ ಸ್ಫೂರ್ತಿ ಸಿಕ್ಕಿದೆ.

‘ಮಿಷನ್ ರಾಣಿಗಂಜ್​’ ಥ್ರಿಲ್ಲಿಂಗ್ ಆಗಿರಲಿದೆ. ರಾಣಿಗಂಜ್​ನ ಕಲ್ಲಿದ್ದಲು ಗಣಿಯಲ್ಲಿ ನಡೆದ ರಕ್ಷಣಾ ಕಾರ್ಯದ ಘಟನೆಯನ್ನು ಈ ಸಿನಿಮಾ ಹೊಂದಿದೆ. ಜಸ್ವಂತ್ ಸಿಂಗ್ ಗಿಲ್ ಅವರು ರಾಣಿಗಂಜ್​ನ ಕಲ್ಲಿದ್ದಲು ಗಣಿಯಲ್ಲಿ ನಡೆದ ಮಿಷನ್ ಒಂದರ ಉಸ್ತುವಾರಿ ವಹಿಸಿದ್ದರು.

ಅದು 1989ರಲ್ಲಿ ನಡೆದ ಘಟನೆ. ಪ್ರವಾಹದಿಂದ ರಾಣಿಗಂಜ್ ಕಲ್ಲಿದ್ದಲು ಗಣಿ ಮುಳುಗಿ ಹೋಗಿತ್ತು. 350 ಅಡಿ ಆಳದಲ್ಲಿ ಅನೇಕರು ಸಿಲುಕಿದ್ದರು. ಗಣಿಯಲ್ಲಿ ಸಿಲುಕಿದ ಎಲ್ಲರನ್ನೂ ಜಸ್ವಂತ್ ಸಿಂಗ್ ಗಿಲ್ ರಕ್ಷಣೆ ಮಾಡಿದ್ದರು. ಈ ಮೂಲಕ ಹೀರೋ ಆದರು. ಈಗ ಜಸ್ವಂತ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದಾರೆ.

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಪರಿಣೀತಿ ಚೋಪ್ರಾ, ಪವನ್ ಮಲ್ಹೋತ್ರಾ, ರವಿ ಕಿಶನ್, ವರುಣ್ ಬಡೋಲಾ, ರಾಜೇಶ್ ಶರ್ಮಾ, ವಿರೇಂದ್ರ ಸಕ್ಸೇನಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅಕ್ಷಯ್ ಕುಮಾರ್ ಅವರು ಗೆಲುವಿನ ಭರವಸೆಯಲ್ಲಿ ಇದ್ದಾರೆ.

‘ಮಿಷನ್ ರಾಣಿಗಂಜ್’ ಚಿತ್ರದ ಮೊದಲ ಪೋಸ್ಟರ್ ಗಮನ ಸೆಳೆಯುತ್ತಿದೆ. ವಶು ಭಗ್ನಾನಿ, ಜಾಕಿ ಭಗ್ನಾನಿ, ದೀಪ್ಶಿಕಾ ದೇಶ್​ಮುಖ್, ಅಜಯ್ ಕಪೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಟಿನು ಸುರೇಶ್ ದೇಸಾಯಿ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಜನರು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಆಮಿರ್ ಖಾನ್-ಅಕ್ಷಯ್ ಕುಮಾರ್ ಒಟ್ಟಾಗಿ ತೆರೆ ಹಂಚಿಕೊಳ್ಳದಿರಲು ಈ ಘಟನೆಯೇ ಕಾರಣ..

ಈ ಮೊದಲು ಅನೇಕ ಬಯೋಪಿಕ್​ಗಳು ಬಂದಿವೆ. ಕೆಲವನ್ನು ಜನರು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವು ಸಿನಿಮಾಗಳನ್ನು ಜನರು ರಿಜೆಕ್ಟ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ಈ ಚಿತ್ರದ ಮೂಲಕ ಗೆದ್ದರೆ ಅವರ ಮುಂದಿನ ಸಿನಿಮಾಗಳಿಗೆ ಸಹಕಾರಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ