AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಯಲ್ಲಿ ನಡೆದ ಭೀಕರ ಘಟನೆಯನ್ನೇ ಸಿನಿಮಾ ಮಾಡಿದರು; ಗೆಲ್ಲುವ ಭರವಸೆಯಲ್ಲಿ ಅಕ್ಷಯ್ ಕುಮಾರ್

ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಅಕ್ಷಯ್ ಕುಮಾರ್ ನಟನೆಯ ‘ಸೆಲ್ಫೀ’ ಚಿತ್ರ ಸೋತಿದೆ. ಆ ಬಳಿಕ ರಿಲೀಸ್ ಆದ ಅವರ ಅಭಿನಯದ ‘ಒಹ್ ಮೈ ಗಾಡ್ 2’ ಚಿತ್ರ ಗೆದ್ದಿದೆ. ಈ ಸಿನಿಮಾ ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಹೊಸ ಸ್ಫೂರ್ತಿ ಸಿಕ್ಕಿದೆ.

ಗಣಿಯಲ್ಲಿ ನಡೆದ ಭೀಕರ ಘಟನೆಯನ್ನೇ ಸಿನಿಮಾ ಮಾಡಿದರು; ಗೆಲ್ಲುವ ಭರವಸೆಯಲ್ಲಿ ಅಕ್ಷಯ್ ಕುಮಾರ್
ಅಕ್ಷಯ್ ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 07, 2023 | 11:53 AM

Share

ಅಕ್ಷಯ್ ಕುಮಾರ್ (Akshay Kumar) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಳ್ಳುತ್ತಾರೆ. ಒಂದು ವರ್ಷದಲ್ಲಿ ಅವರ ನಟನೆಯ ಕನಿಷ್ಠ ಮೂರು ಸಿನಿಮಾಗಳಾದರೂ ರಿಲೀಸ್ ಆಗುತ್ತವೆ. ಈ ವರ್ಷ ಅಕ್ಷಯ್ ನಟನೆಯ ಮೂರನೇ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಹೌದು, ‘ಮಿಷನ್​ ರಾಣಿಗಂಜ್’ (Mission Raniganj Movie) ಚಿತ್ರ ಅಕ್ಟೋಬರ್ 6ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದ ಫಸ್ಟ್ ಪೋಸ್ಟರ್ ಗಮನ ಸೆಳೆಯುತ್ತಿದೆ. ಈ ಚಿತ್ರ ನೈಜ ಘಟನೆ ಆಧರಿಸಿ ಸಿದ್ಧಗೊಂಡಿರುವುದರಿಂದ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ.

ಅಕ್ಷಯ್ ಕುಮಾರ್ ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನು ಕಂಡರು. ಅವರಿಗೆ ಗೆಲುವೇ ಇಲ್ಲ ಎಂಬಂತಾಗಿತ್ತು. ಆದರೆ, ಜನರು ಅವರ ಸಿನಿಮಾ ನೋಡಲು ಬರುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಅಕ್ಷಯ್ ಕುಮಾರ್ ನಟನೆಯ ‘ಸೆಲ್ಫೀ’ ಚಿತ್ರ ಸೋತಿದೆ. ಆ ಬಳಿಕ ರಿಲೀಸ್ ಆದ ಅವರ ಅಭಿನಯದ ‘ಒಹ್ ಮೈ ಗಾಡ್ 2’ ಚಿತ್ರ ಗೆದ್ದಿದೆ. ಈ ಸಿನಿಮಾ ನೂರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಹೊಸ ಸ್ಫೂರ್ತಿ ಸಿಕ್ಕಿದೆ.

‘ಮಿಷನ್ ರಾಣಿಗಂಜ್​’ ಥ್ರಿಲ್ಲಿಂಗ್ ಆಗಿರಲಿದೆ. ರಾಣಿಗಂಜ್​ನ ಕಲ್ಲಿದ್ದಲು ಗಣಿಯಲ್ಲಿ ನಡೆದ ರಕ್ಷಣಾ ಕಾರ್ಯದ ಘಟನೆಯನ್ನು ಈ ಸಿನಿಮಾ ಹೊಂದಿದೆ. ಜಸ್ವಂತ್ ಸಿಂಗ್ ಗಿಲ್ ಅವರು ರಾಣಿಗಂಜ್​ನ ಕಲ್ಲಿದ್ದಲು ಗಣಿಯಲ್ಲಿ ನಡೆದ ಮಿಷನ್ ಒಂದರ ಉಸ್ತುವಾರಿ ವಹಿಸಿದ್ದರು.

ಅದು 1989ರಲ್ಲಿ ನಡೆದ ಘಟನೆ. ಪ್ರವಾಹದಿಂದ ರಾಣಿಗಂಜ್ ಕಲ್ಲಿದ್ದಲು ಗಣಿ ಮುಳುಗಿ ಹೋಗಿತ್ತು. 350 ಅಡಿ ಆಳದಲ್ಲಿ ಅನೇಕರು ಸಿಲುಕಿದ್ದರು. ಗಣಿಯಲ್ಲಿ ಸಿಲುಕಿದ ಎಲ್ಲರನ್ನೂ ಜಸ್ವಂತ್ ಸಿಂಗ್ ಗಿಲ್ ರಕ್ಷಣೆ ಮಾಡಿದ್ದರು. ಈ ಮೂಲಕ ಹೀರೋ ಆದರು. ಈಗ ಜಸ್ವಂತ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದಾರೆ.

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಪರಿಣೀತಿ ಚೋಪ್ರಾ, ಪವನ್ ಮಲ್ಹೋತ್ರಾ, ರವಿ ಕಿಶನ್, ವರುಣ್ ಬಡೋಲಾ, ರಾಜೇಶ್ ಶರ್ಮಾ, ವಿರೇಂದ್ರ ಸಕ್ಸೇನಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅಕ್ಷಯ್ ಕುಮಾರ್ ಅವರು ಗೆಲುವಿನ ಭರವಸೆಯಲ್ಲಿ ಇದ್ದಾರೆ.

‘ಮಿಷನ್ ರಾಣಿಗಂಜ್’ ಚಿತ್ರದ ಮೊದಲ ಪೋಸ್ಟರ್ ಗಮನ ಸೆಳೆಯುತ್ತಿದೆ. ವಶು ಭಗ್ನಾನಿ, ಜಾಕಿ ಭಗ್ನಾನಿ, ದೀಪ್ಶಿಕಾ ದೇಶ್​ಮುಖ್, ಅಜಯ್ ಕಪೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಟಿನು ಸುರೇಶ್ ದೇಸಾಯಿ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ಜನರು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಆಮಿರ್ ಖಾನ್-ಅಕ್ಷಯ್ ಕುಮಾರ್ ಒಟ್ಟಾಗಿ ತೆರೆ ಹಂಚಿಕೊಳ್ಳದಿರಲು ಈ ಘಟನೆಯೇ ಕಾರಣ..

ಈ ಮೊದಲು ಅನೇಕ ಬಯೋಪಿಕ್​ಗಳು ಬಂದಿವೆ. ಕೆಲವನ್ನು ಜನರು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವು ಸಿನಿಮಾಗಳನ್ನು ಜನರು ರಿಜೆಕ್ಟ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ಈ ಚಿತ್ರದ ಮೂಲಕ ಗೆದ್ದರೆ ಅವರ ಮುಂದಿನ ಸಿನಿಮಾಗಳಿಗೆ ಸಹಕಾರಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ