AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಷನ್​ ರಾಣಿಗಂಜ್​’ ಸಿನಿಮಾ ಹೇಗಿದೆ? ಮೊದಲ ಶೋ ನೋಡಿ ವಿಮರ್ಶೆ ತಿಳಿಸಿದ ಪ್ರೇಕ್ಷಕರು

ಟಿನು ಸುರೇಶ್​ ದೇಸಾಯಿ ಅವರು ‘ಮಿಷನ್​ ರಾಣಿಗಂಜ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 1989ರಲ್ಲಿ ರಾಣಿಗಂಜ್​ ಕಲ್ಲಿದ್ದಲು ಗಣಿಯಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಗಣಿ ತಜ್ಞ ಜಸ್ವಂತ್​ ಸಿಂಗ್​ ಗಿಲ್​ ಅವರ ಪಾತ್ರಕ್ಕೆ ಅಕ್ಷಯ್​ ಕುಮಾರ್​ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟ್ವಿಟರ್​ ವಿಮರ್ಶೆ ಇಲ್ಲಿದೆ..

‘ಮಿಷನ್​ ರಾಣಿಗಂಜ್​’ ಸಿನಿಮಾ ಹೇಗಿದೆ? ಮೊದಲ ಶೋ ನೋಡಿ ವಿಮರ್ಶೆ ತಿಳಿಸಿದ ಪ್ರೇಕ್ಷಕರು
ಮಿಷನ್​ ರಾಣಿಗಂಜ್​
ಮದನ್​ ಕುಮಾರ್​
|

Updated on: Oct 06, 2023 | 12:37 PM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಪ್ರತಿ ಬಾರಿ ಸಿನಿಮಾ ಆಯ್ಕೆ ಮಾಡಿಕೊಳ್ಳುವಾಗ ಕಥೆ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ರಿಯಲ್​ ಲೈಫ್​ ಘಟನೆಗಳಿಂದ ಆಧರಿಸಿದ ಕಥೆಗಳಿಗೆ ಆದ್ಯತೆ ನೀಡಿದ್ದಾರೆ. ಇಂದು (ಅಕ್ಟೋಬರ್​ 6) ಬಿಡುಗಡೆ ಆಗಿರುವ ಮಿಷನ್​ ರಾಣಿಗಂಜ್​’ (Mission Raniganj) ಸಿನಿಮಾದಲ್ಲೂ ಅದು ಮುಂದುವರಿದಿದೆ. ನೈಜ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಇದರಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಜೋಡಿಯಾಗಿ ಪರಿಣೀತಿ ಚೋಪ್ರಾ ನಟಿಸಿದ್ದಾರೆ. ಮೊದಲ ದಿನ ಮೊದಲ ಶೋ ನೋಡಿಬಂದಿರುವ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ನೆಟ್ಟಿಗರ ವಿಮರ್ಶೆ (Mission Raniganj Twitter Review) ಇಲ್ಲಿದೆ ನೋಡಿ..

‘ಇದು ಒಳ್ಳೆಯ ಸಿನಿಮಾ’ ಎಂದು ಬಹುತೇಕ ಪ್ರೇಕ್ಷಕರು ಹೇಳುತ್ತಿದ್ದಾರೆ. ಕೆಲವರು 5ಕ್ಕೆ 4 ಸ್ಟಾರ್​ ನೀಡಿದ್ದಾರೆ. ‘ಸಿನಿಮಾ ಹಿಟ್​ ಆಗತ್ತೋ ಅಥವಾ ಫ್ಲಾಪ್​ ಆಗತ್ತೋ ಎಂಬುದು ಮುಖ್ಯವಲ್ಲ. ಜನರು ಈ ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡುತ್ತಿದ್ದಾರೆ. ಮೊದಲು ನಿಮ್ಮ ಹತ್ತಿರದ ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ’ ಎಂದು ಕೂಡ ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

ಟಿನು ಸುರೇಶ್​ ದೇಸಾಯಿ ಅವರು ‘ಮಿಷನ್​ ರಾಣಿಗಂಜ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 1989ರಲ್ಲಿ ರಾಣಿಗಂಜ್​ ಕಲ್ಲಿದ್ದಲು ಗಣಿಯಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಗಣಿ ತಜ್ಞ ಜಸ್ವಂತ್​ ಸಿಂಗ್​ ಗಿಲ್​ ಅವರ ಪಾತ್ರಕ್ಕೆ ಅಕ್ಷಯ್​ ಕುಮಾರ್​ ಬಣ್ಣ ಹಚ್ಚಿದ್ದಾರೆ. ಗಣಿಯಲ್ಲಿ ದುರಂತವೊಂದು ನಡೆದಾಗ ಅಲ್ಲಿದ್ದ ಕಾರ್ಮಿಕರನ್ನು ಜಸ್ವಂತ್​ ಸಿಂಗ್​ ಗಿಲ್​ ಅವರು ಕಾಪಾಡುತ್ತಾರೆ. ಆ ಶೌರ್ಯದ ಘಟನೆಯನ್ನು ಆಧರಿಸಿ ಮೂಡಿಬಂದಿರುವ ಈ ಸಿನಿಮಾ ಸ್ಫೂರ್ತಿದಾಯವಾಗಿದೆ ಎಂದು ಪ್ರೇಕ್ಷಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

‘ಸಿನಿಮಾದಲ್ಲಿ ಎಮೋಷನಲ್​ ದೃಶ್ಯಗಳು ತುಂಬ ಚೆನ್ನಾಗಿ ಮೂಡಿಬಂದಿವೆ. ಅಕ್ಷಯ್​ ಕುಮಾರ್​ ಅವರ ನಟನೆಗೆ ರಾಷ್ಟ್ರ ಪ್ರಶಸ್ತಿ ಬರಬೇಕು. ಆದರೆ ಗ್ರಾಫಿಕ್ಸ್​ ಗುಣಮಟ್ಟ ತುಂಬ ಕಳಪೆ ಆಗಿದೆ’ ಎಂದು ಪ್ರೇಕ್ಷಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ರೀತಿ ಮಿಶ್ರಪ್ರತಿಕ್ರಿಯೆ ಪಡೆದಿರುವುದರಿಂದ ಮೊದಲ ದಿನ ಈ ಸಿನಿಮಾಗೆ ಸಾಧಾರಣ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಇದಲ್ಲದೇ ಹಲವು ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ