‘ಮಿಷನ್​ ರಾಣಿಗಂಜ್​’ ಸಿನಿಮಾ ಹೇಗಿದೆ? ಮೊದಲ ಶೋ ನೋಡಿ ವಿಮರ್ಶೆ ತಿಳಿಸಿದ ಪ್ರೇಕ್ಷಕರು

ಟಿನು ಸುರೇಶ್​ ದೇಸಾಯಿ ಅವರು ‘ಮಿಷನ್​ ರಾಣಿಗಂಜ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 1989ರಲ್ಲಿ ರಾಣಿಗಂಜ್​ ಕಲ್ಲಿದ್ದಲು ಗಣಿಯಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಗಣಿ ತಜ್ಞ ಜಸ್ವಂತ್​ ಸಿಂಗ್​ ಗಿಲ್​ ಅವರ ಪಾತ್ರಕ್ಕೆ ಅಕ್ಷಯ್​ ಕುಮಾರ್​ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟ್ವಿಟರ್​ ವಿಮರ್ಶೆ ಇಲ್ಲಿದೆ..

‘ಮಿಷನ್​ ರಾಣಿಗಂಜ್​’ ಸಿನಿಮಾ ಹೇಗಿದೆ? ಮೊದಲ ಶೋ ನೋಡಿ ವಿಮರ್ಶೆ ತಿಳಿಸಿದ ಪ್ರೇಕ್ಷಕರು
ಮಿಷನ್​ ರಾಣಿಗಂಜ್​

Updated on: Oct 06, 2023 | 12:37 PM

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಪ್ರತಿ ಬಾರಿ ಸಿನಿಮಾ ಆಯ್ಕೆ ಮಾಡಿಕೊಳ್ಳುವಾಗ ಕಥೆ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ರಿಯಲ್​ ಲೈಫ್​ ಘಟನೆಗಳಿಂದ ಆಧರಿಸಿದ ಕಥೆಗಳಿಗೆ ಆದ್ಯತೆ ನೀಡಿದ್ದಾರೆ. ಇಂದು (ಅಕ್ಟೋಬರ್​ 6) ಬಿಡುಗಡೆ ಆಗಿರುವ ಮಿಷನ್​ ರಾಣಿಗಂಜ್​’ (Mission Raniganj) ಸಿನಿಮಾದಲ್ಲೂ ಅದು ಮುಂದುವರಿದಿದೆ. ನೈಜ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಇದರಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಜೋಡಿಯಾಗಿ ಪರಿಣೀತಿ ಚೋಪ್ರಾ ನಟಿಸಿದ್ದಾರೆ. ಮೊದಲ ದಿನ ಮೊದಲ ಶೋ ನೋಡಿಬಂದಿರುವ ಪ್ರೇಕ್ಷಕರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ನೆಟ್ಟಿಗರ ವಿಮರ್ಶೆ (Mission Raniganj Twitter Review) ಇಲ್ಲಿದೆ ನೋಡಿ..

‘ಇದು ಒಳ್ಳೆಯ ಸಿನಿಮಾ’ ಎಂದು ಬಹುತೇಕ ಪ್ರೇಕ್ಷಕರು ಹೇಳುತ್ತಿದ್ದಾರೆ. ಕೆಲವರು 5ಕ್ಕೆ 4 ಸ್ಟಾರ್​ ನೀಡಿದ್ದಾರೆ. ‘ಸಿನಿಮಾ ಹಿಟ್​ ಆಗತ್ತೋ ಅಥವಾ ಫ್ಲಾಪ್​ ಆಗತ್ತೋ ಎಂಬುದು ಮುಖ್ಯವಲ್ಲ. ಜನರು ಈ ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನು ಆಡುತ್ತಿದ್ದಾರೆ. ಮೊದಲು ನಿಮ್ಮ ಹತ್ತಿರದ ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ’ ಎಂದು ಕೂಡ ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

ಟಿನು ಸುರೇಶ್​ ದೇಸಾಯಿ ಅವರು ‘ಮಿಷನ್​ ರಾಣಿಗಂಜ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. 1989ರಲ್ಲಿ ರಾಣಿಗಂಜ್​ ಕಲ್ಲಿದ್ದಲು ಗಣಿಯಲ್ಲಿ ನಡೆದ ಸತ್ಯ ಘಟನೆಯನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಗಣಿ ತಜ್ಞ ಜಸ್ವಂತ್​ ಸಿಂಗ್​ ಗಿಲ್​ ಅವರ ಪಾತ್ರಕ್ಕೆ ಅಕ್ಷಯ್​ ಕುಮಾರ್​ ಬಣ್ಣ ಹಚ್ಚಿದ್ದಾರೆ. ಗಣಿಯಲ್ಲಿ ದುರಂತವೊಂದು ನಡೆದಾಗ ಅಲ್ಲಿದ್ದ ಕಾರ್ಮಿಕರನ್ನು ಜಸ್ವಂತ್​ ಸಿಂಗ್​ ಗಿಲ್​ ಅವರು ಕಾಪಾಡುತ್ತಾರೆ. ಆ ಶೌರ್ಯದ ಘಟನೆಯನ್ನು ಆಧರಿಸಿ ಮೂಡಿಬಂದಿರುವ ಈ ಸಿನಿಮಾ ಸ್ಫೂರ್ತಿದಾಯವಾಗಿದೆ ಎಂದು ಪ್ರೇಕ್ಷಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

‘ಸಿನಿಮಾದಲ್ಲಿ ಎಮೋಷನಲ್​ ದೃಶ್ಯಗಳು ತುಂಬ ಚೆನ್ನಾಗಿ ಮೂಡಿಬಂದಿವೆ. ಅಕ್ಷಯ್​ ಕುಮಾರ್​ ಅವರ ನಟನೆಗೆ ರಾಷ್ಟ್ರ ಪ್ರಶಸ್ತಿ ಬರಬೇಕು. ಆದರೆ ಗ್ರಾಫಿಕ್ಸ್​ ಗುಣಮಟ್ಟ ತುಂಬ ಕಳಪೆ ಆಗಿದೆ’ ಎಂದು ಪ್ರೇಕ್ಷಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ರೀತಿ ಮಿಶ್ರಪ್ರತಿಕ್ರಿಯೆ ಪಡೆದಿರುವುದರಿಂದ ಮೊದಲ ದಿನ ಈ ಸಿನಿಮಾಗೆ ಸಾಧಾರಣ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಇದಲ್ಲದೇ ಹಲವು ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us