AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OMG 2: ಶೀಘ್ರದಲ್ಲೇ ರಿಲೀಸ್​ ಆಗಲಿದೆ ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’ ಸಿನಿಮಾ; ಒಟಿಟಿಯಲ್ಲೋ? ಚಿತ್ರಮಂದಿರವೋ?

Akshay Kumar: ಅಕ್ಷಯ್​ ಕುಮಾರ್​ ಅವರು ನಟಿಸಿದ ಯಾವ ಚಿತ್ರಗಳೂ ಇತ್ತೀಚೆಗೆ ಚಿತ್ರಮಂದಿರಲ್ಲಿ ಗೆಲ್ಲುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ನೋಡಿದರೆ ಒಟಿಟಿ ಸೂಕ್ತ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ನಿರ್ಮಾಪಕರ ಆಲೋಚನೆ ಬೇರೆ ಇದೆ.

OMG 2: ಶೀಘ್ರದಲ್ಲೇ ರಿಲೀಸ್​ ಆಗಲಿದೆ ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’ ಸಿನಿಮಾ; ಒಟಿಟಿಯಲ್ಲೋ? ಚಿತ್ರಮಂದಿರವೋ?
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: May 28, 2023 | 1:38 PM

Share

ನಟ ಅಕ್ಷಯ್​ ಕುಮಾರ್ (Akshay Kumar) ಅವರು ಎಲ್ಲ ಬಗೆಯ ಪಾತ್ರಗಳಿಗೂ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ್ದ ‘ಓಹ್​ ಮೈ ಗಾಡ್​’ ಸಿನಿಮಾ 2012ರಲ್ಲಿ ರಿಲೀಸ್​ ಆಗಿ ಸೂಪರ್​ ಹಿಟ್​ ಆಗಿತ್ತು. ಪರೇಶ್​ ರಾವಲ್​ ಮತ್ತು ಅಕ್ಷಯ್​ ಕುಮಾರ್​ ಅವರ ಕಾಂಬಿನೇಷನ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದರು. ಈ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುತ್ತಿರುವ ವಿಚಾರ ಗೊತ್ತೇ ಇದೆ. ಈಗಾಗಲೇ ‘ಓಹ್​ ಮೈ ಗಾಡ್​ 2’ (Oh My God 2) ಸಿನಿಮಾದ ಬಹುತೇಕ ಕೆಲಸಗಳು ಮುಗಿದಿವೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬಿಡುಗಡೆ ಬಗ್ಗೆ ಚಿತ್ರತಂಡದಲ್ಲಿ ಮಾತುಕಥೆ ನಡೆಯುತ್ತಿದೆ. ಇದು ಒಟಿಟಿ (OTT) ಜಮಾನಾ. ಹಾಗಾಗಿ ಅನೇಕ ಸಿನಿಮಾಗಳು ನೇರವಾಗಿ ಒಟಿಟಿಯಲ್ಲಿ ತೆರೆ ಕಾಣುತ್ತಿದೆ. ‘ಓಹ್​ ಮೈ ಗಾಡ್​’ ಸಿನಿಮಾವನ್ನು ಒಟಿಟಿಯಲ್ಲಿ ತೆರೆ ಕಾಣಿಸಬೇಕೋ ಅಥವಾ ಚಿತ್ರಮಂದಿರಲ್ಲಿ ಬಿಡುಗಡೆ ಮಾಡಬೇಕೋ ಎಂಬ ಬಗ್ಗೆ ಚಿತ್ರತಂಡದಲ್ಲೇ ಚರ್ಚೆ ನಡೆಯುತ್ತಿದೆ. ಒಟಿಟಿಗಿಂತಲೂ ಥಿಯೇಟರ್​ನಲ್ಲಿ ಬಿಡುಗಡೆ ಮಾಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಅಕ್ಷಯ್​ ಕುಮಾರ್​ ಅವರು ನಟಿಸಿದ ಯಾವ ಚಿತ್ರಗಳೂ ಇತ್ತೀಚೆಗೆ ಚಿತ್ರಮಂದಿರಲ್ಲಿ ಗೆಲ್ಲುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ನೋಡಿದರೆ ‘ಓಹ್​ ಮೈ ಗಾಡ್​ 2’ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುವುದೇ ಸೂಕ್ತ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ನಿರ್ಮಾಪಕರು ಥಿಯೇಟರ್​ನಲ್ಲಿ ರಿಲೀಸ್​ ಮಾಡಲು ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಆಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Akshay Kumar: ಗಣಿಗಾರಿಕೆ ಕುರಿತು ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಗೆಲುವಿಗಾಗಿ ಟೈಟಲ್​ ಬದಲಾವಣೆ ಮಾಡಿದ ಚಿತ್ರತಂಡ?

ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ಶಂಕರ’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಇದರಲ್ಲಿ ನಾಯಕಿಯಾಗಿ ಅನನ್ಯಾ ಪಾಂಡೆ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಅವರು ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸಾಕಷ್ಟು ಗೌಪ್ಯವಾಗಿಯೇ ಎಲ್ಲ ಕೆಲಸಗಳನ್ನು ಮುಗಿಸಲಾಗುತ್ತಿದೆ. ಇದಲ್ಲದೇ ಹಲವು ಚಿತ್ರಗಳು ಅವರ ಕೈಯಲ್ಲಿವೆ. ‘ಸೂರರೈ ಪೋಟ್ರು’ ಹಿಂದಿ ರಿಮೇಕ್​, ‘ಬಡೆಮಿಯಾ ಚೋಟೆ ಮಿಯಾ’, ‘ಓಹ್​ ಮೈ ಗಾಡ್​ 2’, ‘ವೇಡಾತ್​ ಮರಾಠೆ ವೀರ್​ ದೌಡಲೇ ಸಾಥ್​’, ‘ದ ಗ್ರೇಡ್​ ಇಂಡಿಯನ್​ ರೆಸ್ಕ್ಯೂ’ ಮುಂತಾದ ಸಿನಿಮಾಗಳು ಒಂದರಹಿಂದೊಂದು ಬಿಡುಗಡೆ ಆಗಲಿವೆ.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಜತೆ ವಿದೇಶ ಸುತ್ತಿದ ಮೌನಿ ರಾಯ್​

2022ರ ವರ್ಷ ಅಕ್ಷಯ್​ ಕುಮಾರ್​ ಪಾಲಿಗೆ ನೀರಸವಾಗಿತ್ತು. ಅವರು ನಟಿಸಿದ ಯಾವ ಚಿತ್ರಗಳೂ ಗೆಲ್ಲಲಿಲ್ಲ. ಕೊನೇ ಪಕ್ಷ 2023ರಲ್ಲಾದರೂ ಅವರು ಗೆಲುವಿನ ಖಾತೆ ತೆರೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಕೂಡ ಸಾಧ್ಯವಾಗಲಿಲ್ಲ. ಅವರು ನಟಿಸಿದ ‘ಸೆಲ್ಫೀ’ ಸಿನಿಮಾ ಫೆಬ್ರವರಿಯಲ್ಲಿ ತೆರೆಕಂಡು ಸೋತಿತು. ಮುಂಬರುವ ಚಿತ್ರಗಳ ಮೂಲಕವಾದರೂ ಅವರಿಗೆ ಯಶಸ್ಸು ಸಿಗಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.

ಬರೀ ಸಿನಿಮಾದಲ್ಲಿ ಮಾತ್ರವಲ್ಲದೇ ನಿಜ ಜೀವನದಲ್ಲೂ ಅಕ್ಷಯ್​ ಕುಮಾರ್​ ಅವರು ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಪ್ರತಿದಿನ ಅವರು ವ್ಯಾಯಾಮ ತಪ್ಪಿಸುವುದಿಲ್ಲ. ಕ್ರೀಡೆ ಬಗ್ಗೆಯೂ ಅವರಿಗೆ ಸಖತ್​ ಆಸಕ್ತಿ ಇದೆ. ಇತ್ತೀಚೆಗೆ ಅವರು ಪೊಲೀಸರ ಜೊತೆ ವಾಲಿಬಾಲ್​ ಆಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಶೂಟಿಂಗ್​ ಸಲುವಾಗಿ ಡೆಹರಾಡೂನ್​ಗೆ ತೆರಳಿರುವ ಅಕ್ಷಯ್​ ಕುಮಾರ್​ ಅವರು ಬಿಡುವಿನ ವೇಳೆ ವಾಲಿಬಾಲ್​ ಆಡಿದ್ದಾರೆ. ಅವರ ಪಂದ್ಯವನ್ನು ನೋಡಲು ಸ್ಟೇಡಿಯಂನಲ್ಲಿ ಜನರು ನೆರೆದಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!