AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OMG 2: ಶೀಘ್ರದಲ್ಲೇ ರಿಲೀಸ್​ ಆಗಲಿದೆ ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’ ಸಿನಿಮಾ; ಒಟಿಟಿಯಲ್ಲೋ? ಚಿತ್ರಮಂದಿರವೋ?

Akshay Kumar: ಅಕ್ಷಯ್​ ಕುಮಾರ್​ ಅವರು ನಟಿಸಿದ ಯಾವ ಚಿತ್ರಗಳೂ ಇತ್ತೀಚೆಗೆ ಚಿತ್ರಮಂದಿರಲ್ಲಿ ಗೆಲ್ಲುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ನೋಡಿದರೆ ಒಟಿಟಿ ಸೂಕ್ತ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ನಿರ್ಮಾಪಕರ ಆಲೋಚನೆ ಬೇರೆ ಇದೆ.

OMG 2: ಶೀಘ್ರದಲ್ಲೇ ರಿಲೀಸ್​ ಆಗಲಿದೆ ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’ ಸಿನಿಮಾ; ಒಟಿಟಿಯಲ್ಲೋ? ಚಿತ್ರಮಂದಿರವೋ?
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: May 28, 2023 | 1:38 PM

Share

ನಟ ಅಕ್ಷಯ್​ ಕುಮಾರ್ (Akshay Kumar) ಅವರು ಎಲ್ಲ ಬಗೆಯ ಪಾತ್ರಗಳಿಗೂ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ್ದ ‘ಓಹ್​ ಮೈ ಗಾಡ್​’ ಸಿನಿಮಾ 2012ರಲ್ಲಿ ರಿಲೀಸ್​ ಆಗಿ ಸೂಪರ್​ ಹಿಟ್​ ಆಗಿತ್ತು. ಪರೇಶ್​ ರಾವಲ್​ ಮತ್ತು ಅಕ್ಷಯ್​ ಕುಮಾರ್​ ಅವರ ಕಾಂಬಿನೇಷನ್​ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದರು. ಈ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುತ್ತಿರುವ ವಿಚಾರ ಗೊತ್ತೇ ಇದೆ. ಈಗಾಗಲೇ ‘ಓಹ್​ ಮೈ ಗಾಡ್​ 2’ (Oh My God 2) ಸಿನಿಮಾದ ಬಹುತೇಕ ಕೆಲಸಗಳು ಮುಗಿದಿವೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬಿಡುಗಡೆ ಬಗ್ಗೆ ಚಿತ್ರತಂಡದಲ್ಲಿ ಮಾತುಕಥೆ ನಡೆಯುತ್ತಿದೆ. ಇದು ಒಟಿಟಿ (OTT) ಜಮಾನಾ. ಹಾಗಾಗಿ ಅನೇಕ ಸಿನಿಮಾಗಳು ನೇರವಾಗಿ ಒಟಿಟಿಯಲ್ಲಿ ತೆರೆ ಕಾಣುತ್ತಿದೆ. ‘ಓಹ್​ ಮೈ ಗಾಡ್​’ ಸಿನಿಮಾವನ್ನು ಒಟಿಟಿಯಲ್ಲಿ ತೆರೆ ಕಾಣಿಸಬೇಕೋ ಅಥವಾ ಚಿತ್ರಮಂದಿರಲ್ಲಿ ಬಿಡುಗಡೆ ಮಾಡಬೇಕೋ ಎಂಬ ಬಗ್ಗೆ ಚಿತ್ರತಂಡದಲ್ಲೇ ಚರ್ಚೆ ನಡೆಯುತ್ತಿದೆ. ಒಟಿಟಿಗಿಂತಲೂ ಥಿಯೇಟರ್​ನಲ್ಲಿ ಬಿಡುಗಡೆ ಮಾಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಅಕ್ಷಯ್​ ಕುಮಾರ್​ ಅವರು ನಟಿಸಿದ ಯಾವ ಚಿತ್ರಗಳೂ ಇತ್ತೀಚೆಗೆ ಚಿತ್ರಮಂದಿರಲ್ಲಿ ಗೆಲ್ಲುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ನೋಡಿದರೆ ‘ಓಹ್​ ಮೈ ಗಾಡ್​ 2’ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುವುದೇ ಸೂಕ್ತ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ನಿರ್ಮಾಪಕರು ಥಿಯೇಟರ್​ನಲ್ಲಿ ರಿಲೀಸ್​ ಮಾಡಲು ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಆಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Akshay Kumar: ಗಣಿಗಾರಿಕೆ ಕುರಿತು ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಗೆಲುವಿಗಾಗಿ ಟೈಟಲ್​ ಬದಲಾವಣೆ ಮಾಡಿದ ಚಿತ್ರತಂಡ?

ಅಕ್ಷಯ್​ ಕುಮಾರ್​ ಅವರು ಇತ್ತೀಚೆಗೆ ‘ಶಂಕರ’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಇದರಲ್ಲಿ ನಾಯಕಿಯಾಗಿ ಅನನ್ಯಾ ಪಾಂಡೆ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಅವರು ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸಾಕಷ್ಟು ಗೌಪ್ಯವಾಗಿಯೇ ಎಲ್ಲ ಕೆಲಸಗಳನ್ನು ಮುಗಿಸಲಾಗುತ್ತಿದೆ. ಇದಲ್ಲದೇ ಹಲವು ಚಿತ್ರಗಳು ಅವರ ಕೈಯಲ್ಲಿವೆ. ‘ಸೂರರೈ ಪೋಟ್ರು’ ಹಿಂದಿ ರಿಮೇಕ್​, ‘ಬಡೆಮಿಯಾ ಚೋಟೆ ಮಿಯಾ’, ‘ಓಹ್​ ಮೈ ಗಾಡ್​ 2’, ‘ವೇಡಾತ್​ ಮರಾಠೆ ವೀರ್​ ದೌಡಲೇ ಸಾಥ್​’, ‘ದ ಗ್ರೇಡ್​ ಇಂಡಿಯನ್​ ರೆಸ್ಕ್ಯೂ’ ಮುಂತಾದ ಸಿನಿಮಾಗಳು ಒಂದರಹಿಂದೊಂದು ಬಿಡುಗಡೆ ಆಗಲಿವೆ.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಜತೆ ವಿದೇಶ ಸುತ್ತಿದ ಮೌನಿ ರಾಯ್​

2022ರ ವರ್ಷ ಅಕ್ಷಯ್​ ಕುಮಾರ್​ ಪಾಲಿಗೆ ನೀರಸವಾಗಿತ್ತು. ಅವರು ನಟಿಸಿದ ಯಾವ ಚಿತ್ರಗಳೂ ಗೆಲ್ಲಲಿಲ್ಲ. ಕೊನೇ ಪಕ್ಷ 2023ರಲ್ಲಾದರೂ ಅವರು ಗೆಲುವಿನ ಖಾತೆ ತೆರೆಯಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಕೂಡ ಸಾಧ್ಯವಾಗಲಿಲ್ಲ. ಅವರು ನಟಿಸಿದ ‘ಸೆಲ್ಫೀ’ ಸಿನಿಮಾ ಫೆಬ್ರವರಿಯಲ್ಲಿ ತೆರೆಕಂಡು ಸೋತಿತು. ಮುಂಬರುವ ಚಿತ್ರಗಳ ಮೂಲಕವಾದರೂ ಅವರಿಗೆ ಯಶಸ್ಸು ಸಿಗಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.

ಬರೀ ಸಿನಿಮಾದಲ್ಲಿ ಮಾತ್ರವಲ್ಲದೇ ನಿಜ ಜೀವನದಲ್ಲೂ ಅಕ್ಷಯ್​ ಕುಮಾರ್​ ಅವರು ತುಂಬ ಆ್ಯಕ್ಟೀವ್​ ಆಗಿರುತ್ತಾರೆ. ಪ್ರತಿದಿನ ಅವರು ವ್ಯಾಯಾಮ ತಪ್ಪಿಸುವುದಿಲ್ಲ. ಕ್ರೀಡೆ ಬಗ್ಗೆಯೂ ಅವರಿಗೆ ಸಖತ್​ ಆಸಕ್ತಿ ಇದೆ. ಇತ್ತೀಚೆಗೆ ಅವರು ಪೊಲೀಸರ ಜೊತೆ ವಾಲಿಬಾಲ್​ ಆಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಶೂಟಿಂಗ್​ ಸಲುವಾಗಿ ಡೆಹರಾಡೂನ್​ಗೆ ತೆರಳಿರುವ ಅಕ್ಷಯ್​ ಕುಮಾರ್​ ಅವರು ಬಿಡುವಿನ ವೇಳೆ ವಾಲಿಬಾಲ್​ ಆಡಿದ್ದಾರೆ. ಅವರ ಪಂದ್ಯವನ್ನು ನೋಡಲು ಸ್ಟೇಡಿಯಂನಲ್ಲಿ ಜನರು ನೆರೆದಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?