Akshay Kumar: ಒಂದೇ ಒಂದು ದೃಶ್ಯದಿಂದ ಅಭಿಮಾನಿಗಳ ಮನಗೆದ್ದ ‘OMG 2’ ಸಿನಿಮಾ ಟೀಸರ್

‘ಸೆಲ್ಫಿ’ ಸೋತ ಬಳಿಕ ಅಕ್ಷಯ್ ಕುಮಾರ್ ಅವರ ನಟನೆಯ ‘ಓಎಂಜಿ 2’ ರಿಲೀಸ್ ಆಗುತ್ತಿದೆ. ಈ ಚಿತ್ರದ ಟೀಸರ್ ಮೂಲಕ ಗಮನ ಸೆಳೆಯಲಾಗಿದೆ.

Akshay Kumar: ಒಂದೇ ಒಂದು ದೃಶ್ಯದಿಂದ ಅಭಿಮಾನಿಗಳ ಮನಗೆದ್ದ ‘OMG 2’ ಸಿನಿಮಾ ಟೀಸರ್
ಅಕ್ಷಯ್
Follow us
|

Updated on:Jul 11, 2023 | 1:05 PM

ಅಕ್ಷಯ್ ಕುಮಾರ್ ನಟನೆಯ ‘ಓಎಂಜಿ 2’ ಸಿನಿಮಾದ ಟೀಸರ್ ಇಂದು (ಜುಲೈ 11) ರಿಲೀಸ್ ಆಗಿದೆ. ಅಕ್ಷಯ್ ಕುಮಾರ್ ಅವರು ಈ ಚಿತ್ರದಲ್ಲಿ ಶಿವನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ದ್ವಿಗುಣ ಮಾಡುವ ರೀತಿಯಲ್ಲಿ ‘ಓಎಂಜಿ 2’ ಚಿತ್ರದ (OMG 2 Movie) ಟೀಸರ್ ಮೂಡಿ ಬಂದಿದೆ. ಟೀಸರ್​ನಲ್ಲಿ ಬರುವ ಒಂದಷ್ಟು ದೃಶ್ಯಗಳು ಜನಮನ ಗೆದ್ದಿವೆ. ಎಲ್ಲರೂ ಅಕ್ಷಯ್ ಕುಮಾರ್ (Akshay Kumar) ಅವರನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಚಿತ್ರದಿಂದ ಅವರಿಗೆ ಗೆಲುವು ಸಿಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸೋಲು ಕಂಡರು. 2022ರಲ್ಲಿ ಅವರಿಗೆ ಗೆಲುವು ಸಿಕ್ಕಿದ್ದು ಕಡಿಮೆ. 2023ರಲ್ಲಿ ಅವರು ಗೆಲ್ಲಲೇಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ‘ಸೆಲ್ಫಿ’ ಸೋತ ಬಳಿಕ ಅವರ ನಟನೆಯ ‘ಓಎಂಜಿ 2’ ರಿಲೀಸ್ ಆಗುತ್ತಿದೆ. ಈ ಚಿತ್ರದ ಟೀಸರ್ ಮೂಲಕ ಗಮನ ಸೆಳೆಯಲಾಗಿದೆ.

ಪಂಕಜ್ ತ್ರಿಪಾಠಿ ಓರ್ವ ಆಸ್ತಿಕನ ಪಾತ್ರ ಮಾಡಿದ್ದಾರೆ. ದೇವರನ್ನು ನಂಬುವ ವ್ಯಕ್ತಿಯ ಪಾತ್ರದಲ್ಲಿ ಅವರು ಟೀಸರ್​​ನಲ್ಲಿ ಗಮನ ಸೆಳೆದಿದ್ದಾರೆ. ‘ನಂಬಿಕೆ ಇಡು, ನೀನು ಶಿವನ ದಾಸ’ ಎಂದು ಅಕ್ಷಯ್ ಕುಮಾರ್ ಅವರು ಪಂಕಜ್​ಗೆ ಹೇಳುವ ಡೈಲಾಗ್​ ಗಮನ ಸೆಳೆದಿದೆ. ರೈಲ್ವೆ ನಿಲ್ದಾಣದ ಬಳಿ ಶಿವನ ತಲೆಯ ಮೇಲೆ ನೀರು ಬೀಳುತ್ತಿರುತ್ತದೆ. ಹಿಂಭಾಗದಲ್ಲಿ ಚಂದಿರ ಕಾಣುತ್ತಿರುತ್ತಾನೆ. ಈ ದೃಶ್ಯ ಅನೇಕರಿಗೆ ಇಷ್ಟ ಆಗಿದೆ.

ದೇವರಿಗೆ ಸಂಬಂಧಿಸಿದ ವಿಚಾರದಲ್ಲಿ ಸಿನಿಮಾ ಮಾಡುವಾಗ ಸಾಕಷ್ಟು ಎಚ್ಚರಿಕೆ ಬೇಕು. ಈ ವಿಚಾರದಲ್ಲಿ ತಂಡದವರು ಎಚ್ಚರಿಕೆ ತೆಗೆದುಕೊಂಡಿರಬಹುದು ಎಂಬುದು ಅಭಿಮಾನಿಗಳ ಊಹೆ. ಈ ಸಿನಿಮಾ ಬಗ್ಗೆ ಯಾರೂ ತಕರಾರು ತೆಗೆಯದಿರಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಇದನ್ನೂ ಓದಿ: ಶಿವನ ಅವತಾರದಲ್ಲಿ ಅಕ್ಷಯ್ ಕುಮಾರ್; ‘OMG 2’ ರಿಲೀಸ್ ದಿನಾಂಕ ಘೋಷಣೆ ಹಿಂದೆ ದೊಡ್ಡ ಲೆಕ್ಕಾಚಾರ

‘ಓಎಂಜಿ 2’ ಚಿತ್ರವನ್ನು ಅಮಿತ್ ರಾಯ್ ಅವರು ನಿರ್ದೇಶನ ಮಾಡಿದ್ದಾರೆ. ಅಕ್ಷಯ್ ಕುಮಾರ್ ಅವರು ಶಿವನ ಪಾತ್ರ ಮಾಡುತ್ತಿದ್ದಾರೆ. ಪಂಕಜ್ ತ್ರಿಪಾಠಿ, ಅರುಣ್ ಗೋವಿಲ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. 1987ರಲ್ಲಿ ಪ್ರಸಾರ ಕಂಡ ‘ರಾಮಾಯಣ’ದಲ್ಲಿ ಅರುಣ್ ಅವರು ರಾಮನ ಪಾತ್ರ ಮಾಡಿದ್ದರು. ‘ಓಎಂಜಿ 2’ ಚಿತ್ರದಲ್ಲೂ ರಾಮನ ಪಾತ್ರವನ್ನೇ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:28 pm, Tue, 11 July 23

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ