AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣಿ ಸೇನಾ ವಿರೋಧಕ್ಕೆ ಮಣಿದು ಟೈಟಲ್ ಬದಲಿಸಿದ ‘ಪೃಥ್ವಿರಾಜ್​’ ಸಿನಿಮಾ ತಂಡ; ಹೊಸ ಟೈಟಲ್ ಏನು?

‘ಪೃಥ್ವಿರಾಜ್​’ ಇದು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಸಿದ್ಧಗೊಂಡ ಸಿನಿಮಾ. ಇದಕ್ಕೆ ಯಶ್​ ರಾಜ್​ ಫಿಲ್ಮ್ಸ್ ಬಂಡವಾಳ ಹೂಡಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕರಣಿ ಸೇನಾ ವಿರೋಧಕ್ಕೆ ಮಣಿದು ಟೈಟಲ್ ಬದಲಿಸಿದ ‘ಪೃಥ್ವಿರಾಜ್​’ ಸಿನಿಮಾ ತಂಡ; ಹೊಸ ಟೈಟಲ್ ಏನು?
ಅಕ್ಷಯ್ ಕುಮಾರ್
TV9 Web
| Edited By: |

Updated on: May 27, 2022 | 9:53 PM

Share

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’​ ಸಿನಿಮಾ ತೆರೆಕಾಣವುದಕ್ಕೆ ಕರಣಿ ಸೇನಾ ಸಂಘಟನೆಯವರು ಸಾಕಷ್ಟು ಅಡಚಣೆ ಉಂಟು ಮಾಡಿದ್ದರು. ಸಿನಿಮಾದಲ್ಲಿ ಇಲ್ಲ ಸಲ್ಲದ್ದನ್ನು ತೋರಿಸಲಾಗಿದೆ ಎಂದು ಆರೋಪಿಸಿ ‘ಪದ್ಮಾವತಿ’ ಎಂದಿದ್ದ ಸಿನಿಮಾ ಹೆಸರನ್ನು ‘ಪದ್ಮಾವತ್’​ ಎಂದು (Padmavat Movie) ಬದಲಾಯಿಸಲು ಆಗ್ರಹಿಸಿದ್ದರು. ಅಷ್ಟೇ ಅಲ್ಲ, ನಾಲ್ಕೈದು ರಾಜ್ಯಗಳಲ್ಲಿ ಸಿನಿಮಾ ತೆರೆಕಾಣದೆ ಇರಲು ಕಾರಣರಾಗಿದ್ದರು. ಅದೇ ರೀತಿ ಅಕ್ಷಯ್​ ಕುಮಾರ್​ ನಟನೆಯ ‘ಪೃಥ್ವಿರಾಜ್’​ ಸಿನಿಮಾದ (Prithviraj Movie) ಮೇಲೆ ಕರಣಿ ಸೇನಾ ಕಣ್ಣು ಬಿದ್ದಿತ್ತು. ಸಿನಿಮಾ ತೆರೆಕಾಣುವುದಕ್ಕೂ ಮೊದಲೇ ಕಿರಿಕ್ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಸಿನಿಮಾದ ಟೈಟಲ್ ಬದಲಾಯಿಸುವ ನಿರ್ಧಾರಕ್ಕೆ ಚಿತ್ರತಂಡ ಬಂದಿದೆ.

‘ಪೃಥ್ವಿರಾಜ್​’ ಇದು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಸಿದ್ಧಗೊಂಡ ಸಿನಿಮಾ. ಇದಕ್ಕೆ ಯಶ್​ ರಾಜ್​ ಫಿಲ್ಮ್ಸ್ ಬಂಡವಾಳ ಹೂಡಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾನುಷಿ ಚಿಲ್ಲರ್​ ಅವರು ಸನ್ಯೋಗಿತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಈ ಮೊದಲೇ ಪಟ್ಟು ಹಿಡಿದಿದ್ದರು. ಇದಕ್ಕೆ ತಂಡ ಮಣಿದಿದೆ.

‘ವೀರ ಯೋಧ ಸಾಮ್ರಾಟ್​ ಪೃಥ್ವಿರಾಜ್ ಚೌಹಾಣ್’​ ಎಂಬುದಾಗಿ ಚಿತ್ರದ ಟೈಟಲ್ ಬದಲಿಸಲು ಕರಣಿ ಸೇನಾದವರು ಆಗ್ರಹಿಸಿದ್ದರು. ಟೈಟಲ್ ಇಷ್ಟು ಉದ್ದ ಇದ್ದರೆ ಜನರಿಗೆ ಕನೆಕ್ಟ್ ಆಗುವುದಿಲ್ಲ. ಈ ಕಾರಣಕ್ಕೆ ಸಿನಿಮಾ ತಂಡದವರು ‘ಸಾಮ್ರಾಟ್​ ಪೃಥ್ವಿರಾಜ್’ ಎಂದು ಟೈಟಲ್ ಬದಲಿಸಿದ್ದಾರೆ.

ಇದನ್ನೂ ಓದಿ
Image
Love Birds Movie: ‘ಲವ್ ಬರ್ಡ್ಸ್​’ನಲ್ಲಿ ತೆರೆ ಹಂಚಿಕೊಳ್ಳಲಿರುವ ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್
Image
Karan Johar: 50ನೇ ವಸಂತಕ್ಕೆ ಕಾಲಿಟ್ಟ ಕರಣ್ ಜೋಹರ್; ಸ್ಟಾರ್ ನಿರ್ಮಾಪಕನ ಪಾರ್ಟಿಯಲ್ಲಿ ಯಶ್?
Image
ಒಂದು ಆ್ಯಕ್ಷನ್ ದೃಶ್ಯಕ್ಕೆ 35 ಲಕ್ಷ ರೂ. ವೆಚ್ಛ ಮಾಡಿದ ‘ಗೌಳಿ’ ತಂಡ; ಶ್ರೀನಗರ ಕಿಟ್ಟಿ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​
Image
ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಇದನ್ನೂ ಓದಿ: ‘ಪೃಥ್ವಿರಾಜ್​’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆದ ನಟಿ ಮಾನುಷಿ ಚಿಲ್ಲರ್​; ಇಲ್ಲಿವೆ ಫೋಟೋಗಳು  

‘ಹಲವು ಹಂತದಲ್ಲಿ ನಾವು ಚರ್ಚೆ ನಡೆಸಿ, ಶಾಂತಿಯುತವಾಗಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದೇವೆ. ಚಿತ್ರದ ಹೆಸರು ಸಾಮ್ರಾಟ್ ಪೃಥ್ವಿರಾಜ್ ಎಂದು ಬದಲಾಯಿಸಲಾಗಿದೆ’ ಎಂದು ಯಶ್ ರಾಜ್​ ಫಿಲ್ಮ್ಸ್ ತಿಳಿಸಿದೆ.

‘ಈ ಚಿತ್ರ ತೆರೆಕಾಣುವುದಕ್ಕೂ ಮೊದಲು ನಮಗೆ ಹಾಗೂ ರಜಪೂತ್​​ ಸಮಾಜದವರಿಗೆ ತೋರಿಸಬೇಕು’ ಎನ್ನುವ ಆಗ್ರಹವೂ ಕರಣಿ ಸೇನಾ ಮಾಡಿತ್ತು. ಇದಕ್ಕೆ ಚಿತ್ರತಂಡ ಮಣಿದಿತ್ತು. ಸಿನಿಮಾವನ್ನು ಅವರಿಗೆ ತೋರಿಸಿ ಗ್ರೀನ್ ಸಿಗ್ನಲ್ ಪಡೆಯಲಾಯಿತು. ಆ ಬಳಿಕ ಟೈಟಲ್ ಬದಲಾಯಿಸುವ ಆಗ್ರಹ ಕೇಳಿ ಬಂದಿತ್ತು. ಇದಕ್ಕೂ ನಿರ್ಮಾಣ ಸಂಸ್ಥೆ ಈಗ ಮಣಿದಿದೆ. ಪೃಥ್ವಿರಾಜ್ ಸಿನಿಮಾ ಜೂನ್ 3ರಂದು ತೆರೆಗೆ ಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ