AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣಿ ಸೇನಾ ವಿರೋಧಕ್ಕೆ ಮಣಿದು ಟೈಟಲ್ ಬದಲಿಸಿದ ‘ಪೃಥ್ವಿರಾಜ್​’ ಸಿನಿಮಾ ತಂಡ; ಹೊಸ ಟೈಟಲ್ ಏನು?

‘ಪೃಥ್ವಿರಾಜ್​’ ಇದು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಸಿದ್ಧಗೊಂಡ ಸಿನಿಮಾ. ಇದಕ್ಕೆ ಯಶ್​ ರಾಜ್​ ಫಿಲ್ಮ್ಸ್ ಬಂಡವಾಳ ಹೂಡಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕರಣಿ ಸೇನಾ ವಿರೋಧಕ್ಕೆ ಮಣಿದು ಟೈಟಲ್ ಬದಲಿಸಿದ ‘ಪೃಥ್ವಿರಾಜ್​’ ಸಿನಿಮಾ ತಂಡ; ಹೊಸ ಟೈಟಲ್ ಏನು?
ಅಕ್ಷಯ್ ಕುಮಾರ್
TV9 Web
| Edited By: |

Updated on: May 27, 2022 | 9:53 PM

Share

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’​ ಸಿನಿಮಾ ತೆರೆಕಾಣವುದಕ್ಕೆ ಕರಣಿ ಸೇನಾ ಸಂಘಟನೆಯವರು ಸಾಕಷ್ಟು ಅಡಚಣೆ ಉಂಟು ಮಾಡಿದ್ದರು. ಸಿನಿಮಾದಲ್ಲಿ ಇಲ್ಲ ಸಲ್ಲದ್ದನ್ನು ತೋರಿಸಲಾಗಿದೆ ಎಂದು ಆರೋಪಿಸಿ ‘ಪದ್ಮಾವತಿ’ ಎಂದಿದ್ದ ಸಿನಿಮಾ ಹೆಸರನ್ನು ‘ಪದ್ಮಾವತ್’​ ಎಂದು (Padmavat Movie) ಬದಲಾಯಿಸಲು ಆಗ್ರಹಿಸಿದ್ದರು. ಅಷ್ಟೇ ಅಲ್ಲ, ನಾಲ್ಕೈದು ರಾಜ್ಯಗಳಲ್ಲಿ ಸಿನಿಮಾ ತೆರೆಕಾಣದೆ ಇರಲು ಕಾರಣರಾಗಿದ್ದರು. ಅದೇ ರೀತಿ ಅಕ್ಷಯ್​ ಕುಮಾರ್​ ನಟನೆಯ ‘ಪೃಥ್ವಿರಾಜ್’​ ಸಿನಿಮಾದ (Prithviraj Movie) ಮೇಲೆ ಕರಣಿ ಸೇನಾ ಕಣ್ಣು ಬಿದ್ದಿತ್ತು. ಸಿನಿಮಾ ತೆರೆಕಾಣುವುದಕ್ಕೂ ಮೊದಲೇ ಕಿರಿಕ್ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಸಿನಿಮಾದ ಟೈಟಲ್ ಬದಲಾಯಿಸುವ ನಿರ್ಧಾರಕ್ಕೆ ಚಿತ್ರತಂಡ ಬಂದಿದೆ.

‘ಪೃಥ್ವಿರಾಜ್​’ ಇದು ಪೃಥ್ವಿರಾಜ್ ಚೌಹಾಣ್​​ ಅವರ ಜೀವನ ಆಧರಿಸಿ ಸಿದ್ಧಗೊಂಡ ಸಿನಿಮಾ. ಇದಕ್ಕೆ ಯಶ್​ ರಾಜ್​ ಫಿಲ್ಮ್ಸ್ ಬಂಡವಾಳ ಹೂಡಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಪೃಥ್ವಿರಾಜ್​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾನುಷಿ ಚಿಲ್ಲರ್​ ಅವರು ಸನ್ಯೋಗಿತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಡುತ್ತಿದ್ದಾರೆ. ಸಿನಿಮಾ ಟೈಟಲ್​ ಬದಲಿಸುವಂತೆ ಕರಣಿ ಸೇನಾದವರು ಈ ಮೊದಲೇ ಪಟ್ಟು ಹಿಡಿದಿದ್ದರು. ಇದಕ್ಕೆ ತಂಡ ಮಣಿದಿದೆ.

‘ವೀರ ಯೋಧ ಸಾಮ್ರಾಟ್​ ಪೃಥ್ವಿರಾಜ್ ಚೌಹಾಣ್’​ ಎಂಬುದಾಗಿ ಚಿತ್ರದ ಟೈಟಲ್ ಬದಲಿಸಲು ಕರಣಿ ಸೇನಾದವರು ಆಗ್ರಹಿಸಿದ್ದರು. ಟೈಟಲ್ ಇಷ್ಟು ಉದ್ದ ಇದ್ದರೆ ಜನರಿಗೆ ಕನೆಕ್ಟ್ ಆಗುವುದಿಲ್ಲ. ಈ ಕಾರಣಕ್ಕೆ ಸಿನಿಮಾ ತಂಡದವರು ‘ಸಾಮ್ರಾಟ್​ ಪೃಥ್ವಿರಾಜ್’ ಎಂದು ಟೈಟಲ್ ಬದಲಿಸಿದ್ದಾರೆ.

ಇದನ್ನೂ ಓದಿ
Image
Love Birds Movie: ‘ಲವ್ ಬರ್ಡ್ಸ್​’ನಲ್ಲಿ ತೆರೆ ಹಂಚಿಕೊಳ್ಳಲಿರುವ ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್
Image
Karan Johar: 50ನೇ ವಸಂತಕ್ಕೆ ಕಾಲಿಟ್ಟ ಕರಣ್ ಜೋಹರ್; ಸ್ಟಾರ್ ನಿರ್ಮಾಪಕನ ಪಾರ್ಟಿಯಲ್ಲಿ ಯಶ್?
Image
ಒಂದು ಆ್ಯಕ್ಷನ್ ದೃಶ್ಯಕ್ಕೆ 35 ಲಕ್ಷ ರೂ. ವೆಚ್ಛ ಮಾಡಿದ ‘ಗೌಳಿ’ ತಂಡ; ಶ್ರೀನಗರ ಕಿಟ್ಟಿ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​
Image
ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಇದನ್ನೂ ಓದಿ: ‘ಪೃಥ್ವಿರಾಜ್​’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆದ ನಟಿ ಮಾನುಷಿ ಚಿಲ್ಲರ್​; ಇಲ್ಲಿವೆ ಫೋಟೋಗಳು  

‘ಹಲವು ಹಂತದಲ್ಲಿ ನಾವು ಚರ್ಚೆ ನಡೆಸಿ, ಶಾಂತಿಯುತವಾಗಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದೇವೆ. ಚಿತ್ರದ ಹೆಸರು ಸಾಮ್ರಾಟ್ ಪೃಥ್ವಿರಾಜ್ ಎಂದು ಬದಲಾಯಿಸಲಾಗಿದೆ’ ಎಂದು ಯಶ್ ರಾಜ್​ ಫಿಲ್ಮ್ಸ್ ತಿಳಿಸಿದೆ.

‘ಈ ಚಿತ್ರ ತೆರೆಕಾಣುವುದಕ್ಕೂ ಮೊದಲು ನಮಗೆ ಹಾಗೂ ರಜಪೂತ್​​ ಸಮಾಜದವರಿಗೆ ತೋರಿಸಬೇಕು’ ಎನ್ನುವ ಆಗ್ರಹವೂ ಕರಣಿ ಸೇನಾ ಮಾಡಿತ್ತು. ಇದಕ್ಕೆ ಚಿತ್ರತಂಡ ಮಣಿದಿತ್ತು. ಸಿನಿಮಾವನ್ನು ಅವರಿಗೆ ತೋರಿಸಿ ಗ್ರೀನ್ ಸಿಗ್ನಲ್ ಪಡೆಯಲಾಯಿತು. ಆ ಬಳಿಕ ಟೈಟಲ್ ಬದಲಾಯಿಸುವ ಆಗ್ರಹ ಕೇಳಿ ಬಂದಿತ್ತು. ಇದಕ್ಕೂ ನಿರ್ಮಾಣ ಸಂಸ್ಥೆ ಈಗ ಮಣಿದಿದೆ. ಪೃಥ್ವಿರಾಜ್ ಸಿನಿಮಾ ಜೂನ್ 3ರಂದು ತೆರೆಗೆ ಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?