AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್​ ಖಾನ್​ಗೆ ರಿಲೀಸ್​ ಡೇಟ್​ ಬಿಟ್ಟುಕೊಡಲ್ಲ ಎಂದ ಅಕ್ಷಯ್​ ಕುಮಾರ್​ ಟೀಮ್​; ಆಗಲಿದೆ ಬಿಗ್​ ಕ್ಲ್ಯಾಶ್?​

ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರತಂಡದವರು ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಚಿತ್ರತಂಡದವರ ಬಳಿ ಹೋಗಿ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಅಕ್ಷಯ್​ ಟೀಮ್​ ಒಪ್ಪಿಲ್ಲ.

ಆಮಿರ್​ ಖಾನ್​ಗೆ ರಿಲೀಸ್​ ಡೇಟ್​ ಬಿಟ್ಟುಕೊಡಲ್ಲ ಎಂದ ಅಕ್ಷಯ್​ ಕುಮಾರ್​ ಟೀಮ್​; ಆಗಲಿದೆ ಬಿಗ್​ ಕ್ಲ್ಯಾಶ್?​
ಅಕ್ಷಯ್​ ಕುಮಾರ್​. ಆಮಿರ್​ ಖಾನ್​
TV9 Web
| Edited By: |

Updated on: Feb 21, 2022 | 8:01 AM

Share

ಸೂಕ್ತವಾದ ರಿಲೀಸ್​ ಡೇಟ್​ ಪಡೆಯಲು ಎಲ್ಲ ಚಿತ್ರತಂಡಗಳು ಕಷ್ಟಪಡುತ್ತಿವೆ. ಅದರಲ್ಲೂ ಕೊರೊನಾ ಹಾವಳಿಯಿಂದ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಂಡಿದ್ದ ಎಲ್ಲ ಸಿನಿಮಾ ತಂಡಗಳಿಗೆ ಈಗ ಹೊಸ ರಿಲೀಸ್​ ದಿನಾಂಕವನ್ನು ಫಿಕ್ಸ್​ ಮಾಡುವುದು ದೊಡ್ಡ ತಲೆನೋವಾಗಿದೆ. ಸರಿಯಾದ ದಿನ ಸಿಗಬೇಕು, ಅಂದು ಯಾವುದೇ ದೊಡ್ಡ ಚಿತ್ರದ ಪೈಪೋಟಿ ಇರಬಾರದು, ಹಬ್ಬ ಅಥವಾ ರಜಾ ದಿನ ಸಿಕ್ಕರೆ ಒಳ್ಳೆಯದು.. ಹೀಗೆ ಹತ್ತಾರು ಲೆಕ್ಕಾಚಾರಗಳನ್ನು ಹಾಕಿಕೊಂಡು ಸಿನಿಮಾ ರಿಲೀಸ್​ ಮಾಡಬೇಕಿದೆ. ಈ ವಿಚಾರದಲ್ಲಿ ಆಮಿರ್ ಖಾನ್​ ಮತ್ತು ಅಕ್ಷಯ್​ ಕುಮಾರ್​ (Akshay Kumar) ಅವರ ನಡುವೆ ಕ್ಲ್ಯಾಶ್​ ಏರ್ಪಡುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಆಮಿರ್​ ಖಾನ್​ (Aamir Khan) ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಬಗ್ಗೆ ಹೈಪ್​ ಸೃಷ್ಟಿ ಆಗಿದೆ. ಅದೇ ರೀತಿ ಅಕ್ಷಯ್​ ಕುಮಾರ್​ ಅಭಿನಯದ ‘ರಕ್ಷಾ ಬಂಧನ್​’ (Raksha Bandhan Movie) ಚಿತ್ರ ಕೂಡ ನಿರೀಕ್ಷೆ ಮೂಡಿಸಿದೆ. ಈ ಎರಡೂ ಸಿನಿಮಾಗಳು ಒಂದೇ ದಿನ ರಿಲೀಸ್​ ಆಗುವುದನ್ನು ತಪ್ಪಿಸಲು ತೆರೆಮರೆಯಲ್ಲಿ ಕೆಲವು ಕಸರತ್ತು ನಡೆಯುತ್ತಿದೆ. ಅಂತಿಮವಾಗಿ ಏನಾಗಲಿದೆ ಎಂಬ ಕೌತುಕ ಸಿನಿಪ್ರಿಯರ ಮನದಲ್ಲಿ ಮೂಡಿದೆ.

ಅಕ್ಷಯ್​ ಕುಮಾರ್​ ಅವರ ‘ರಕ್ಷಾ ಬಂಧನ್​’ ಸಿನಿಮಾದ ಹೆಸರೇ ಸೂಚಿಸುವಂತೆ ಇದು ಸಹೋದರತ್ವದ ಕುರಿತಾದ ಸಿನಿಮಾ. ಹಾಗಾಗಿ ಈ ವರ್ಷ ರಕ್ಷಾ ಬಂಧನ ಹಬ್ಬದ ಸಮಯದಲ್ಲೇ ರಿಲೀಸ್​ ಮಾಡಬೇಕು ಎಂದು ಚಿತ್ರತಂಡದವರು ನಿರ್ಧರಿಸಿದ್ದಾರೆ. ಅಂದರೆ ಆಗಸ್ಟ್​ 11ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ ಮಾಡಲಾಗಿದೆ. ಅದೇ ದಿನವೇ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರವನ್ನು ತೆರೆಕಾಣಿಸಲು ಪ್ಲ್ಯಾನ್​ ಮಾಡಲಾಗಿದೆ. ಈ ಕ್ಲ್ಯಾಶ್​ ತಪ್ಪಿಸಲು ಪ್ರಯತ್ನ ಮಾಡಲಾಗಿದೆ. ಆದರೆ ಆ ಮಾತುಕತೆಯಿಂದ ಫಲ ಸಿಕ್ಕಿಲ್ಲ ಎನಿಸುತ್ತಿದೆ.

ಮೂಲಗಳ ಪ್ರಕಾರ, ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರತಂಡದವರು ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಚಿತ್ರತಂಡದವರ ಬಳಿ ಹೋಗಿ ಮನವಿ ಮಾಡಿಕೊಂಡಿದ್ದಾರೆ. ರಿಲೀಸ್​ ಡೇಟ್​ ಮುಂದೂಡಿಕೊಳ್ಳಿ ಎಂದು ಕೇಳಿಕೊಂಡಿದ್ದಾರೆ. ಅದಕ್ಕೆ ‘ರಕ್ಷಾ ಬಂಧನ್​’ ತಂಡದವರು ಒಪ್ಪಿಲ್ಲ. ‘ಆಮಿರ್ ಖಾನ್​ ಸಲುವಾಗಿ ನಾವು ರಿಲೀಸ್​ ಡೇಟ್​ ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಅಕ್ಷಯ್​ ಕುಮಾರ್​ ತಂಡದವರು ಖಡಕ್​ ಆಗಿ ಹೇಳಿ ಕಳಿಸಿದ್ದಾರೆ ಎನ್ನಲಾಗಿದೆ.

ಈಗ ಆಮಿರ್​ ಖಾನ್​ ಅವರಿಗೆ ಇರುವುದು ಎರಡೇ ಆಯ್ಕೆ. ಅಕ್ಷಯ್​ ಕುಮಾರ್​ ಎದುರು ತಮ್ಮ ಸಿನಿಮಾವನ್ನು ರಿಲೀಸ್​ ಮಾಡಬೇಕು ಅಥವಾ ಬಿಡುಗಡೆ ದಿನಾಂಕವನ್ನು ಮುಂದೂಡಿಕೊಳ್ಳಬೇಕು. ಎರಡರಲ್ಲಿ ಅವರು ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ಕೌತುಕ ಈಗ ಸೃಷ್ಟಿ ಆಗಿದೆ.

‘ಕೆಜಿಎಫ್​ 2’ ಚಿತ್ರಕ್ಕೆ ದಾರಿ ಬಿಟ್ಟುಕೊಟ್ಟಿರುವ ಆಮಿರ್​ ಖಾನ್​:

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ತೆರೆಕಂಡಿರಬೇಕಿತ್ತು. ಆದರೆ ಕೊವಿಡ್​ ಕಾರಣದಿಂದ ಕೆಲಸಗಳು ವಿಳಂಬ ಆಗಿದ್ದರಿಂದ ಎರಡೆರಡು ಬಾರಿ ರಿಲೀಸ್​ ಡೇಟ್​ ಮುಂದೂಡಲಾಗಿದೆ. ಈ ವರ್ಷ ಏಪ್ರಿಲ್​ ತಿಂಗಳಲ್ಲಿ ರಿಲೀಸ್​ ಮಾಡಲು ನಿರ್ಧರಿಸಲಾಗಿತ್ತು. ಆದರೆ ಆ ತಿಂಗಳಲ್ಲಿ ಯಶ್​ ನಟನೆಯ ‘ಕೆಜಿಎಫ್​ 2’ ರಿಲೀಸ್​ ಆಗಲಿರುವುದರಿಂದ ಸುಮ್ಮನೆ ಕ್ಲ್ಯಾಶ್​ ಬೇಡ ಎಂಬ ಕಾರಣಕ್ಕೆ ಆಮಿರ್​ ಖಾನ್​ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಯಿತು. ಈಗ ಹೊಸ ರಿಲೀಸ್​ ಡೇಟ್​ ಫಿಕ್ಸ್​ ಮಾಡಲು ಆಮಿರ್​ ಖಾನ್​ ಮತ್ತು ಅವರ ತಂಡದವರು ಕಸರತ್ತು ನಡೆಸುತ್ತಿದ್ದಾರೆ.

ಇದನ್ನೂ ಓದಿ:

ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು; ದಶಕಗಳ ಬಳಿಕ ಬಾಯ್ಬಿಟ್ಟ ‘ಕೆಜಿಎಫ್​ 2’ ನಟಿ

175 ಕೋಟಿ ರೂ. ಎದುರಿಗಿಟ್ಟರೂ ಆಫರ್​ ಒಪ್ಪಲಿಲ್ಲ ಅಕ್ಷಯ್​ ಕುಮಾರ್​; ಇದು ‘ಬಚ್ಚನ್​ ಪಾಂಡೆ’ ತಾಕತ್ತು

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?