AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ‘ರಾಮ್​ ಸೇತು’ ಚಿತ್ರದಿಂದಲೂ ಅಕ್ಷಯ್​ ಕುಮಾರ್​​ಗೆ ಗೆಲುವು ಸಿಗೋದು ಡೌಟು?

Ram Setu: ‘ರಾಮ್​ ಸೇತು’ ಚಿತ್ರಕ್ಕೆ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಓಪನ್​ ಮಾಡಲಾಯಿತು. ಆದರೆ ಜನರು ಟಿಕೆಟ್​ ಬುಕ್​ ಮಾಡುವಲ್ಲಿ ನಿರಾಸಕ್ತಿ ತೋರಿಸುತ್ತಿದ್ದಾರೆ.

Akshay Kumar: ‘ರಾಮ್​ ಸೇತು’ ಚಿತ್ರದಿಂದಲೂ ಅಕ್ಷಯ್​ ಕುಮಾರ್​​ಗೆ ಗೆಲುವು ಸಿಗೋದು ಡೌಟು?
ಅಕ್ಷಯ್ ಕುಮಾರ್
TV9 Web
| Edited By: |

Updated on: Oct 24, 2022 | 3:38 PM

Share

ಬಾಲಿವುಡ್​ (Bollywood) ಪಾಲಿಗೆ ಸದ್ಯಕ್ಕಂತೂ ಆಶಾದಾಯಕ ವಾತಾವರಣ ಕಾಣುತ್ತಿಲ್ಲ. ತೆರೆಕಂಡ ಸಿನಿಮಾಗಳಲ್ಲಿ ಬಹುಪಾಲು ಚಿತ್ರಗಳು ಸೋಲುತ್ತಿವೆ. ಜನರು ಹಿಂದಿ ಸಿನಿಮಾಗಿಂತಲೂ ದಕ್ಷಿಣ ಭಾರತದ ಭಾಷೆಗಳ ಚಿತ್ರಗಳ ಬಗ್ಗೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಈ ವರ್ಷವಂತೂ ಅಕ್ಷಯ್​ ಕುಮಾರ್​, ಆಮಿರ್​ ಖಾನ್​ ಅವರಂತಹ ಸ್ಟಾರ್​ ಕಲಾವಿದರು ಕೂಡ ಸೋತು ಸೊರಗಿದ್ದಾರೆ. ಅಕ್ಷಯ್ ಕುಮಾರ್​ (Akshay Kumar) ಅವರಿಗೆ ಬ್ಯಾಕ್​ ಟು ಬ್ಯಾಕ್​ ಸೋಲು ಎದುರಾಗಿದೆ. ಈಗ ಅವರು ‘ರಾಮ್​ ಸೇತು’ (Ram Setu) ಚಿತ್ರದ ಮೂಲಕವಾದರೂ ಗೆಲ್ಲುವ ಭರವಸೆ ಇಟ್ಟುಕೊಂಡಿದ್ದಾರೆ. ಆದರೆ ಚಿತ್ರದ ಅಡ್ವಾನ್ಸ್​ ಬುಕಿಂಗ್​ ಲೆಕ್ಕಾಚಾರ ನೋಡಿದರೆ ಯಾಕೋ ಮತ್ತೆ ಅವರಿಗೆ ಪ್ರೇಕ್ಷಕರು ಕೈ ಕೊಡುವ ಸಂಭವ ಕಾಣುತ್ತಿದೆ.

ಹಿಂದಿ ಚಿತ್ರರಂಗದಲ್ಲಿ ಅಕ್ಷಯ್​ ಕುಮಾರ್​ ಅವರು ಸೂಪರ್​ ಸ್ಟಾರ್​. ಅವರ ಸಿನಿಮಾಗೆ ಹಣ ಹಾಕಿದರೆ ಮಿನಿಮಮ್​ ಲಾಭ ಗ್ಯಾರಂಟಿ ಎಂಬ ಮಾತು ಚಾಲ್ತಿಯಲ್ಲಿತ್ತು. ಆದರೆ ಈ ವರ್ಷ ಅದು ಸುಳ್ಳಾಯಿತು. ‘ಸಾಮ್ರಾಟ್​ ಪೃಥ್ವಿರಾಜ್​’, ‘ರಕ್ಷಾ ಬಂಧನ್​’, ‘ಬಚ್ಚನ್​ ಪಾಂಡೆ’ ಸಿನಿಮಾಗಳು ನಿರೀಕ್ಷಿತ ಮಟ್ಟದಲ್ಲಿ ಗೆಲುವು ಕಾಣಲಿಲ್ಲ. ಹಾಗಾಗಿ ಅವರ ಚಾರ್ಮ್​ ನಿಧಾನಕ್ಕೆ ಕಮ್ಮಿ ಆಗಿದೆ. ಸಾಲು ಸಾಲು ಸೋಲಿನ ಬೆನ್ನಲ್ಲೇ ಅವರ ‘ರಾಮ್​ ಸೇತು’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

ಟ್ರೇಲರ್​ ಮೂಲಕ ‘ರಾಮ್​ ಸೇತು’ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್​ 25ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಇತ್ತೀಚೆಗೆ ಇದರ ಅಡ್ವಾನ್ಸ್​ ಬುಕಿಂಗ್​ ಓಪನ್​ ಮಾಡಲಾಯಿತು. ಆದರೆ ಜನರು ಟಿಕೆಟ್​ ಬುಕ್​ ಮಾಡುವಲ್ಲಿ ನಿರಾಸಕ್ತಿ ತೋರಿಸುತ್ತಿದ್ದಾರೆ. ಸೋಮವಾರ (ಅ.24) ಬೆಳಗ್ಗೆವರೆಗೂ ಆಗಿರುವ ಬುಕಿಂಗ್​​ ಗಮನಿಸಿದರೆ ಈ ಸಿನಿಮಾ ಮೊದಲ ದಿನ ಗಳಿಸುವುದು 1 ಕೋಟಿ ರೂಪಾಯಿ ಮಾತ್ರ. ಕೊನೇ ಕ್ಷಣದವರೆಗೂ ಇನ್ನೂ ಹೆಚ್ಚಿನ ಬುಕಿಂಗ್​ ಆದರೂ ಕೂಡ ಹೆಚ್ಚೆಂದರೆ 2 ಕೋಟಿ ರೂಪಾಯಿ ಕಲೆಕ್ಷನ್​ ಆಗಬಹುದು ಅಷ್ಟೇ ಎಂದು ಬಾಕ್ಸ್​ ಆಫೀಸ್​ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ
Image
Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?
Image
Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ಅಕ್ಷಯ್​ ಕುಮಾರ್​ ಅವರ ಸಿನಿಮಾಗಳು ತಯಾರಾಗುತ್ತವೆ. ನಿರ್ಮಾಪಕರಿಗೆ ಲಾಭ ಆಗಬೇಕು ಎಂದರೆ ಕನಿಷ್ಠ 100 ಕೋಟಿ ಮೇಲಾದರೂ ಕಲೆಕ್ಷನ್​ ಆಗಬೇಕು. ಆದರೆ ‘ರಾಮ್​ ಸೇತು’ ಸಿನಿಮಾ ಅಷ್ಟು ಕಲೆಕ್ಷನ್​ ಮಾಡುವುದು ಅನುಮಾನ ಎನ್ನಲಾಗುತ್ತಿದೆ. ದೀಪಾವಳಿ ಹಬ್ಬದ ಸಮಯದಲ್ಲೂ ಜನರು ಅಡ್ವಾನ್ಸ್​ ಬುಕಿಂಗ್​ಗೆ ನೀರಸ ಪ್ರತಿಕ್ರಿಯೆ ತೋರಿಸುತ್ತಿರುವುದು ಅಚ್ಚರಿ ಉಂಟುಮಾಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!