AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ‘ರಾಮ್​ ಸೇತು’ ಬಗ್ಗೆ ಹಬ್ಬಿದ್ದ ಗಾಸಿಪ್​ಗೆ ಕಡೆಗೂ ಸಿಕ್ಕಿತು ಸ್ಪಷ್ಟನೆ; ಅಕ್ಷಯ್​ ಕುಮಾರ್​ ಫ್ಯಾನ್ಸ್​ಗೆ ಸಂತಸ

Ram Setu: ಈ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರಮಂದಿರದಲ್ಲೇ ‘ರಾಮ್​ ಸೇತು’ ಸಿನಿಮಾ ಬಿಡುಗಡೆ ಆಗಲಿದೆ. ಯಾವುದೇ ಕಾರಣಕ್ಕೂ ಒಟಿಟಿಯಲ್ಲಿ ನೇರವಾಗಿ ರಿಲೀಸ್​ ಮಾಡುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

Akshay Kumar: ‘ರಾಮ್​ ಸೇತು’ ಬಗ್ಗೆ ಹಬ್ಬಿದ್ದ ಗಾಸಿಪ್​ಗೆ ಕಡೆಗೂ ಸಿಕ್ಕಿತು ಸ್ಪಷ್ಟನೆ; ಅಕ್ಷಯ್​ ಕುಮಾರ್​ ಫ್ಯಾನ್ಸ್​ಗೆ ಸಂತಸ
ಅಕ್ಷಯ್ ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on:Jun 18, 2022 | 4:03 PM

Share

ನಟ ಅಕ್ಷಯ್​ ಕುಮಾರ್ (Akshay Kumar)​ ಅವರಿಗೆ ಇತ್ತೀಚಿಗೆ ನಿರೀಕ್ಷಿತ ಮಟ್ಟದ ಗೆಲುವು ಸಿಗುತ್ತಿಲ್ಲ. ‘ಬಚ್ಚನ್​ ಪಾಂಡೆ’ ಸಿನಿಮಾ ಹೇಳ ಹೆಸರಿಲ್ಲದಂತೆ ಸೋತಿತು. ಬಹಳ ನಿರೀಕ್ಷೆ ಮೂಡಿಸಿದ್ದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಕೂಡ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಲಿಲ್ಲ. ಅಮಿತ್​ ಶಾ, ಯೋಗಿ ಆದಿತ್ಯನಾಥ್​ ಮುಂತಾದವರು ಬೆಂಬಲ ನೀಡಿದರೂ ಕೂಡ ಆ ಸಿನಿಮಾ ಗೆಲ್ಲಲಿಲ್ಲ. ಆ ವಿಚಾರದಲ್ಲಿ ಅಕ್ಷಯ್​ ಕುಮಾರ್​ ಅಭಿಮಾನಿಗಳಿಗೆ ಭಾರಿ ಬೇಸರ ಇದೆ. ಹಾಗಂತ ಹಳೇ ಸೋಲನ್ನೇ ನೆನಪಿಸಿಕೊಂಡು, ಕೊರಗುತ್ತಾ ಕೂರಲು ಸಾಧ್ಯವಿಲ್ಲ. ಅವರ ಮುಂದಿನ ಸಿನಿಮಾ ಬಗ್ಗೆ ಗಮನ ಹರಿಸಬೇಕಿದೆ. ಅಕ್ಷಯ್​ ಕುಮಾರ್​ ನಟಿಸಿರುವ ‘ರಾಮ್​ ಸೇತು’ (Ram Setu) ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಚಿತ್ರ ಒಟಿಟಿಯಲ್ಲಿ (OTT) ರಿಲೀಸ್​ ಆಗಲಿದೆ ಎಂದು ಗಾಸಿಪ್​ ಹಬ್ಬಿಸಲಾಗಿತ್ತು. ಆದರೆ ಅದನ್ನು ನಿರ್ಮಾಪಕರು ಅಲ್ಲಗಳೆದಿದ್ದಾರೆ.

ಅಕ್ಷಯ್​ ಕುಮಾರ್​ ಅವರು ಬ್ಯಾಕ್​ ಟು ಬ್ಯಾಕ್​ ಸೋಲು ಕಂಡಿರುವುದರಿಂದ ಈ ರೀತಿಯ ಗಾಸಿಪ್​ ಹಬ್ಬಿತ್ತು. ಚಿತ್ರಮಂದಿರದಲ್ಲಿ ಒಳ್ಳೆಯ ಕಲೆಕ್ಷನ್​ ಆಗದಿದ್ದರೆ ನಿರ್ಮಾಪಕರಿಗೆ ನಷ್ಟ ಆಗುತ್ತದೆ. ಹಾಗಾಗಿ ಅವರು ನೇರವಾಗಿ ಒಟಿಟಿ ರಿಲೀಸ್​ಗೆ ಆಲೋಚಿಸುತ್ತಿದ್ದಾರೆ ಎಂದೆಲ್ಲ ಗಾಳಿ ಸುದ್ದಿ ಹರಡಿಸಲಾಗಿತ್ತು. ಆದರೆ ಆ ಸುದ್ದಿಯನ್ನು ನಿರ್ಮಾಪಕರು ಅಲ್ಲಗಳೆದಿದ್ದಾರೆ.

ಇದನ್ನೂ ಓದಿ: ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’

ಇದನ್ನೂ ಓದಿ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

ಈ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರಮಂದಿರದಲ್ಲೇ ‘ರಾಮ್​ ಸೇತು’ ಸಿನಿಮಾ ಬಿಡುಗಡೆ ಆಗಲಿದೆ. ಯಾವುದೇ ಕಾರಣಕ್ಕೂ ಒಟಿಟಿಯಲ್ಲಿ ನೇರವಾಗಿ ರಿಲೀಸ್​ ಮಾಡುವುದಿಲ್ಲ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ. ಈ ಸುದ್ದಿ ಕೇಳಿ ಅಕ್ಷಯ್​ ಕುಮಾರ್​ ಅಭಿಮಾನಿಗಳು ಖುಷಿ ಆಗಿದ್ದಾರೆ. ತಮ್ಮ ನೆಚ್ಚಿನ ನಟನ ಸಿನಿಮಾವನ್ನು ಥಿಯೇಟರ್​ನಲ್ಲೇ ನೋಡಿ ಎಂಜಾಯ್​ ಮಾಡಲು ಅಭಿಮಾನಿಗಳು ಬಯಸುತ್ತಾರೆ. ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಮಾಡುವುದಿಲ್ಲ ಎಂದು ನಿ​ರ್ಮಾಪಕರು ಹೇಳಿರುವುದು ಅಕ್ಕಿ ಫ್ಯಾನ್ಸ್​ಗೆ ಸಂತಸ ತಂದಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ರಕ್ಷಾ ಬಂಧನ್​’ ಚಿತ್ರ ಕೂಡ ಬಿಡುಗಡೆಗೆ ರೆಡಿ ಇದೆ. ಆಗಸ್ಟ್​ 11ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಅದೇ ಸಮಯಕ್ಕೆ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್ ಚಡ್ಡಾ’ ಕೂಡ ಬಿಡುಗಡೆ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:03 pm, Sat, 18 June 22

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..