AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yogi Adityanath: ಅಕ್ಷಯ್​ ಕುಮಾರ್ ನಟನೆಯ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ

Samrat Prithviraj | Tax Free: ಅಕ್ಷಯ್​ ಕುಮಾರ್​ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಸಾಮ್ರಾಟ್​ ಪೃಥ್ವಿರಾಜ್’​ ಚಿತ್ರಕ್ಕೆ ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ಯೋಗಿ ಆದಿತ್ಯನಾಥ್​ ಮೆಚ್ಚಿಕೊಂಡಿದ್ದಾರೆ.

Yogi Adityanath: ಅಕ್ಷಯ್​ ಕುಮಾರ್ ನಟನೆಯ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ
ಯೋಗಿ ಆದಿತ್ಯನಾಥ್, ಅಕ್ಷಯ್ ಕುಮಾರ್
TV9 Web
| Updated By: ಮದನ್​ ಕುಮಾರ್​|

Updated on:Jun 02, 2022 | 4:48 PM

Share

ಬಿಡುಗಡೆಗೂ ಮನ್ನವೇ ‘ಸಾಮ್ರಾಟ್​ ಪೃಥ್ವಿರಾಜ್​’ (Samrat Prithviraj) ಸಿನಿಮಾ ಸಖತ್​ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ಈಗೊಂದು ಬಂಪರ್​ ಕೊಡುಗೆ ನೀಡಲಾಗಿದೆ. ಉತ್ತರ ಪ್ರದೇಶದಲ್ಲಿ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಬಳಿಕ ಅವರು ಟ್ಯಾಕ್ಸ್​ ಫ್ರೀ ಆದೇಶ ಹೊರಡಿಸಿದ್ದಾರೆ. ಲಖನೌನಲ್ಲಿ ಅವರಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ (Akshay Kumar) ಅವರು ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಅವರಿಗೆ ಜೋಡಿಯಾಗಿ ಮಾನುಷಿ ಚಿಲ್ಲರ್​ ನಟಿಸಿದ್ದಾರೆ. ಬುಧವಾರ (ಜೂನ್​ 1) ‘ಸಾಮ್ರಾಟ್​ ಪೃಥ್ವಿರಾಜ್’​ ಸಿನಿಮಾವನ್ನು ಕೇಂದ್ರ ಗೃಹ ಸಚಿವ ಅಮಿತ್​ ಶಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಅವರು ಕೂಡ ಈ ಸಿನಿಮಾವನ್ನು ನೋಡಿದ್ದಾರೆ.

‘ಸಾಮ್ರಾಟ್​ ಪೃಥ್ವಿರಾಜ್’​ ಚಿತ್ರಕ್ಕೆ ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ಯೋಗಿ ಆದಿತ್ಯನಾಥ್​ ಮೆಚ್ಚಿಕೊಂಡಿದ್ದಾರೆ. ಇಡೀ ತಂಡದ ಪ್ರಯತ್ನವನ್ನು ಅವರು ಹೊಗಳಿದ್ದಾರೆ. ‘ಅಕ್ಷಯ್​ ಕುಮಾರ್​ ಅವರು ಭಾರತದ ಇತಿಹಾಸವನ್ನು ಈ ಚಿತ್ರದಲ್ಲಿ ಚೆನ್ನಾಗಿ ತೋರಿಸಿದ್ದಾರೆ. ಹಾಗಾಗಿ ಈ ಚಿತ್ರತಂಡಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.

ಈ ಹಿಂದೆ ಕೂಡ ದೇಶಭಕ್ತಿ ಕಥಾಹಂದರ ಇರುವಂತಹ ಸಿನಿಮಾಗಳನ್ನು ಮಾಡಿ ಅಕ್ಷಯ್​ ಕುಮಾರ್ ಸೈ ಎನಿಸಿಕೊಂಡಿದ್ದರು. ಈ ಬಾರಿ ಅವರು ‘ಸಾಮ್ರಾಟ್​ ಪೃಥ್ವಿರಾಜ್​’ ಮೂಲಕ ಐತಿಹಾಸಿಕ ಕಥೆಯನ್ನು ಜನರ ಮುಂದಿರಿಸುತ್ತಿದ್ದಾರೆ. ಜೂನ್​ 3ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಸೋನು ಸೂದ್​, ಸಂಜಯ್​ ದತ್​ ಮುಂತಾದವರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಆಗಿದೆ.

ಇದನ್ನೂ ಓದಿ
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ ಪತ್ನಿ ಎದುರು ಅಕ್ಷಯ್​ ಕುಮಾರ್​ ರೀತಿ ಡೈಲಾಗ್​ ಹೊಡೆದ ಅಮಿತ್​ ಶಾ
Image
Samrat Prithviraj: ‘ಆರ್​​ಆರ್​ಆರ್​​’, ‘ಧಾಕಡ್​’ ಹಾದಿಯಲ್ಲಿ ‘ಸಾಮ್ರಾಟ್ ಪೃಥ್ವಿರಾಜ್’; ವಾರಾಣಸಿಯಲ್ಲಿ ಚಿತ್ರದ ಪ್ರಚಾರ
Image
Samrat Prithviraj: ಅಕ್ಷಯ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ಗೆ ಹಿನ್ನಡೆ; ಈ ದೇಶಗಳಲ್ಲಿ ಚಿತ್ರ ಬ್ಯಾನ್​
Image
‘ಪೃಥ್ವಿರಾಜ್​’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆದ ನಟಿ ಮಾನುಷಿ ಚಿಲ್ಲರ್​; ಇಲ್ಲಿವೆ ಫೋಟೋಗಳು  

ಇದನ್ನೂ ಓದಿ: ‘ಪೃಥ್ವಿರಾಜ್’ ಟ್ರೇಲರ್​ನಲ್ಲಿ ಮಿಂಚಿದ ಅಕ್ಷಯ್​ ಕುಮಾರ್; ಈ ಸಿನಿಮಾದಿಂದ ಚೇತರಿಸಿಕೊಳ್ಳಲಿದೆಯೇ ಬಾಲಿವುಡ್​?

‘ಸಾಮ್ರಾಟ್​ ಪೃಥ್ವಿರಾಜ್​’ ಬಗ್ಗೆ ಅಮಿತ್​ ಶಾ ಮೆಚ್ಚುಗೆ:

‘ಇತಿಹಾಸದ ವಿದ್ಯಾರ್ಥಿ ಆದ ನಾನು ಈ ಸಿನಿಮಾ ನೋಡಿ ಕೇವಲ ಎಂಜಾಯ್​ ಮಾಡಲಿಲ್ಲ. ಭಾರತೀಯರಿಗೆ ಈ ಚಿತ್ರ ಎಷ್ಟು ಮುಖ್ಯ ಎಂಬುದನ್ನು ಕೂಡ ಅರ್ಥ ಮಾಡಿಕೊಂಡೆ. ಸುಮಾರು 13 ವರ್ಷಗಳ ಬಳಿಕ ನಾನು ನನ್ನ ಕುಟುಂಬದವರ ಜೊತೆ ಕುಳಿತು ಸಿನಿಮಾ ನೋಡಿದೆ. ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರ ಜೊತೆ ಥಿಯೇಟರ್​ನ ಕೊನೇ ಸಾಲಿನಲ್ಲಿ ನಾವು ಕುಳಿತಿದ್ದೆವು. ನಮ್ಮ ಕುಟುಂಬಕ್ಕೆ ಇದು ಸ್ಪೆಷಲ್​ ದಿನ’ ಎಂದು ಅಮಿತ್​ ಶಾ ಹೇಳಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:48 pm, Thu, 2 June 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು