AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’

Samrat Prithviraj: ಅಕ್ಷಯ್​ ಕುಮಾರ್​ ಅವರು ಇತ್ತೀಚಿನ ದಿನಗಳಲ್ಲಿ ಅನೇಕ ವಿಚಾರಗಳಿಗೆ ಟ್ರೋಲ್​ ಆಗುತ್ತಿದ್ದಾರೆ. ಈಗ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಟಾರ್ಗೆಟ್​ ಆಗಿದೆ.

ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’
ಅಕ್ಷಯ್ ಕುಮಾರ್
TV9 Web
| Edited By: |

Updated on: Jun 05, 2022 | 8:11 AM

Share

ಅಕ್ಷಯ್​ ಕುಮಾರ್​ ನಟನೆಯ ‘ಸಾಮ್ರಾಟ್​ ಪೃಥ್ವಿರಾಜ್​’ (Samrat Prithviraj) ಸಿನಿಮಾಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಜೂನ್​ 3ರಂದು ಬಿಡುಗಡೆ ಆದ ಈ ಸಿನಿಮಾ ಮೊದಲ ದಿನ 10.70 ಕೋಟಿ ರೂಪಾಯಿ ಗಳಿಕೆ ಮಾಡುವಲ್ಲಿ ಯಶಸ್ವಿ ಆಗಿದೆ. ಆದರೆ ಅಕ್ಷಯ್​ ಕುಮಾರ್ (Akshay Kumar) ಅವರಂತಹ ಸ್ಟಾರ್​ ನಟರ ಸಿನಿಮಾಗೆ ಇದು ಚಿಕ್ಕ ಮೊತ್ತ. ಹಾಗಾಗಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಆಗಿಲ್ಲ ಎಂಬ ಬೇಸರ ಅವರ ಅಭಿಮಾನಿಗಳಿಗೆ ಇದೆ. ಅದರ ಜೊತೆಗೆ ಕೆಲವು ಕಾರಣಗಳಿಂದಾಗಿ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಟ್ರೋಲ್​ (Troll) ಆಗುತ್ತಿದೆ. ಅಕ್ಷಯ್​ ಕುಮಾರ್​ ಅವರನ್ನು ಕಟ್ಟಿಹಾಕಿರುವ ಒಂದು ಪೋಸ್ಟರ್​ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಅದನ್ನು ನೋಡಿ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ತುಂಬ ಅಚ್ಚುಕಟ್ಟಾಗಿ ಸಿನಿಮಾ ಮಾಡುವುದಾಗಿ ಹೇಳಿಕೊಳ್ಳುವ ಅಕ್ಷಯ್​ ಕುಮಾರ್, ಇಷ್ಟು ಸಿಲ್ಲಿ ಮಿಸ್ಟೇಕ್​ ಯಾಕೆ ಮಾಡಿದ್ರು ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಪೋಸ್ಟರ್​ನಲ್ಲಿ ಅಕ್ಷಯ್​ ಕುಮಾರ್​ ಅವರನ್ನು ಕಟ್ಟಿ ಹಾಕಲಾಗಿದೆ. ಸರಪಳಿಗಳಿಂದ ಬಿಗಿಯಲಾಗಿದೆ. ಆದರೆ ತುಂಬ ಸುಲಭವಾಗಿ ಅವರು ಬಿಡಿಸಿಕೊಳ್ಳಬಹುದಾದ ರೀತಿಯಲ್ಲಿ ಬಲಗೈ ಅನ್ನು ಕಟ್ಟಲಾಗಿದೆ. ಇದನ್ನು ನೋಡಿ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಿದ್ದಾರೆ. ಇತಿಹಾಸದ ಬಗ್ಗೆ ಸರಿಯಾದ ಪಾಠ ಮಾಡ್ತೀವಿ ಅಂತ ಹೇಳಿಕೊಂಡು ಬೀಗುವ ಈ ಚಿತ್ರತಂಡದವರು ಇಷ್ಟು ಸಿಲ್ಲಿ ಮಿಸ್ಟೇಕ್​ ಮಾಡಿದ್ದಾರಲ್ಲ ಎಂದು ನೆಟ್ಟಿಗರು ಆಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಕಿಂಚಿತ್ತೂ ಚೆನ್ನಾಗಿಲ್ಲ ಎಂದು ನೆಗೆಟಿವ್​ ಪ್ರಚಾರ; ಇದರ ಹಿಂದೆ ಯಾರ ಹುನ್ನಾರ?

ಅಷ್ಟೇ ಅಲ್ಲ, ಅಕ್ಷಯ್​ ಕುಮಾರ್​ ಅವರು ಇತ್ತೀಚಿನ ದಿನಗಳಲ್ಲಿ ಅನೇಕ ವಿಚಾರಗಳಿಗೆ ಟ್ರೋಲ್​ ಆಗುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಗುಟ್ಕಾ ಜಾಹೀರಾತಿನಲ್ಲಿ ನಟಿಸಿದ್ದಕ್ಕಾಗಿ ಅವರನ್ನು ಜನರು ಟೀಕಿಸಿದರು. ಈಗ ಅವರ ಸಿನಿಮಾಗಳಲ್ಲಿ ನಾಯಕಿಯ ಆಯ್ಕೆ ಬಗ್ಗೆ ನೆಟ್ಟಿಗರು ತಕರಾರು ತೆಗೆದಿದ್ದಾರೆ. ಹೌದು, ಅಕ್ಷಯ್​ ಕುಮಾರ್​ ಅವರು ತೀರಾ ಚಿಕ್ಕ ವಯಸ್ಸಿನ ಹುಡುಗಿಯರ ಜೊತೆ ಹೀರೋ ಆಗಿ ನಟಿಸುತ್ತಾರೆ ಎಂಬ ಕಾರಣಕ್ಕೆ ಟ್ರೋಲ್​ ಮಾಡಲಾಗುತ್ತಿದೆ.

‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದಲ್ಲಿ ಮಾನುಷಿ ಚಿಲ್ಲರ್​ ಅವರು ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ನಟಿಸಿದ್ದಾರೆ. ಇಬ್ಬರ ನಡುವೆ ವಯಸ್ಸಿನ ಅಂತರ ಇದೆ. ಅಕ್ಷಯ್​ ಕುಮಾರ್​ ಅವರಿಗೆ 54 ವರ್ಷ ವಯಸ್ಸು. ಮಾನುಷಿ ಚಿಲ್ಲರ್​ ಅವರಿಗೆ ಈಗಷ್ಟೇ 25ರ ಪ್ರಾಯ. ಹಾಗಾಗಿ ಇಬ್ಬರ ಜೋಡಿಯೇ ಸೂಕ್ತವಲ್ಲ ಎಂದು ಕೂಡ ಒಂದು ವರ್ಗದ ನೆಟ್ಟಿಗರು ಕಾಲೆಳೆದಿದ್ದಾರೆ. ಈ ಮಧ್ಯೆ, ಯೋಗಿ ಆದಿತ್ಯನಾಥ್​, ಅಮಿತ್​ ಶಾ ಮುಂತಾದ ರಾಜಕಾರಣಿಗಳು ಈ ಸಿನಿಮಾವನ್ನು ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು