AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಚಿತ ಟೀ, ಸಮೋಸಾ ಕೊಡ್ತೀವಿ, ಸಿನಿಮಾ ನೋಡೋಕೆ ಬನ್ನಿ’: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಹೀನಾಯ ಸ್ಥಿತಿ

‘ಸರ್ಫಿರಾ’ ಸಿನಿಮಾ ಜುಲೈ 12ರಂದು ಬಿಡುಗಡೆ ಆಯಿತು. ಅಕ್ಷಯ್​ ಕುಮಾರ್​ ನಟನೆಯ ಈ ಸಿನಿಮಾ ಫ್ಲಾಪ್​ ಆಗಿದೆ. ಮೊದಲ ದಿನ 2.50 ಕೋಟಿ ರೂ. ಹಾಗೂ ಎರಡನೇ ದಿನ 4.50 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಸ್ಟಾರ್​ ನಟರ ಸಿನಿಮಾಗೆ ಇದು ಅತಿ ಕಳಪೆ ನಂಬರ್​. ಹಾಗಾಗಿ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರೇಕ್ಷಕರಿಗೆ ಟೀ ಮತ್ತು ಸಮೋಸಾದ ಆಸೆ ತೋರಿಸಲಾಗಿದೆ.

‘ಉಚಿತ ಟೀ, ಸಮೋಸಾ ಕೊಡ್ತೀವಿ, ಸಿನಿಮಾ ನೋಡೋಕೆ ಬನ್ನಿ’: ಅಕ್ಷಯ್​ ಕುಮಾರ್​ ಚಿತ್ರಕ್ಕೆ ಹೀನಾಯ ಸ್ಥಿತಿ
ಅಕ್ಷಯ್​ ಕುಮಾರ್​, ಸಮೋಸಾ, ಟೀ
ಮದನ್​ ಕುಮಾರ್​
|

Updated on: Jul 14, 2024 | 7:00 PM

Share

ನಟ ಅಕ್ಷಯ್​ ಕುಮಾರ್​ ಅವರು ಸತತ ಸೋಲುಗಳನ್ನು ಕಾಣುತ್ತಿದ್ದಾರೆ. ಕಥೆ ಮತ್ತು ಪಾತ್ರಗಳ ತಪ್ಪಾದ ಆಯ್ಕೆಯಿಂದಾಗಿ ಅವರಿಗೆ ಈ ಸ್ಥಿತಿ ಬಂದಿದೆ. ಅಕ್ಷಯ್​ ಕುಮಾರ್​ ನಟಿಸಿದ ‘ಸರ್ಫಿರಾ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಕಳಪೆ ಕಲೆಕ್ಷನ್ ಮಾಡುತ್ತಿದೆ. ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣ ಆದ ಈ ಚಿತ್ರ ಹೀನಾಯವಾಗಿ ಸೋತಿದೆ. ಹಾಗಾಗಿ ಪ್ರೇಕ್ಷಕರನ್ನು ಸೆಳೆಯಲು ಉಚಿತ ಟೀ ಮತ್ತು ಸಮೋಸಾ ನೀಡಲು ಮಲ್ಟಿಪ್ಲೆಕ್ಸ್​ನವರು ನಿರ್ಧರಿಸಿದ್ದಾರೆ. ಸಿನಿಮಾ ಸೋತಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ.

ಮೊದಲ ದಿನ ಸ್ಟಾರ್​ ಸಿನಿಮಾಗಳು ಸಿಕ್ಕಾಪಟ್ಟೆ ಕಲೆಕ್ಷನ್​ ಮಾಡಬೇಕು. ಆದರೆ ‘ಸರ್ಫಿರಾ’ ಸಿನಿಮಾ ಮೊದಲ ದಿನವಾದ ಜುಲೈ 12ರಂದು ಕೇವಲ 2.50 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಎರಡನೇ ದಿನ 4.50 ಕೋಟಿ ರೂಪಾಯಿ ಗಳಿಸಿತು. ಹೇಗಾದರೂ ಮಾಡಿ ಭಾನುವಾರ (ಜುಲೈ 14) ಸಿನಿಮಾದ ಕಲೆಕ್ಷನ್​ ಹೆಚ್ಚಿಸಬೇಕು ಎಂಬುದು ಚಿತ್ರತಂಡದ ಗುರಿ. ಅದಕ್ಕಾಗಿ ಮಲ್ಟಿಪ್ಲೆಕ್ಸ್​ನವರು ಪ್ರೇಕ್ಷಕರಿಗೆ ಟೀ, ಸಮೋಸಾದ ಆಸೆ ತೋರಿಸಿದ್ದಾರೆ.

‘ಪಿವಿಆರ್​ ಐನಾಕ್ಸ್​’ ಮಲ್ಟಿಪ್ಲೆಕ್ಸ್​ ಕಡೆಯಿಂದ ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಲಾಗಿದೆ. ‘ಸರ್ಫಿರಾ ಸಿನಿಮಾ ನೋಡಲು ಬರುವವರಿಗೆ 2 ಸಮೋಸಾ, ಒಂದು ಟೀ ಹಾಗೂ ಒಂದು ಲಗೇಜ್​ ಟ್ಯಾಗ್​ ಉಚಿತವಾಗಿ ನೀಡಲಾಗುತ್ತದೆ’ ಎಂದು ತಿಳಿಸಲಾಗಿದೆ. ಅಕ್ಷಯ್​ ಕುಮಾರ್​ ಅವರ ಸಿನಿಮಾಗೆ ಇಂಥ ಸ್ಥಿತಿ ಬಂದಿರುವುದು ನಿಜಕ್ಕೂ ಹೀನಾಯ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಅಕ್ಷಯ್​ ಕುಮಾರ್​ ಸಿನಿಮಾಗಳನ್ನು ನಿರ್ಮಿಸಿ, ಆಸ್ತಿ ಕಳೆದುಕೊಂಡ ನಿರ್ಮಾಪಕ

‘ಸರ್ಫಿರಾ’ ಸಿನಿಮಾಗೆ ಸುಧಾ ಕೊಂಗರಾ ಅವರು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ, ಇದು ತಮಿಳಿನ ‘ಸೂರರೈ ಪೋಟ್ರು’ ಸಿನಿಮಾದ ಹಿಂದಿ ರಿಮೇಕ್​. ತಮಿಳಿನ ಆ ಸಿನಿಮಾ ಈ ಮೊದಲೇ ಹಿಂದಿಗೆ ಡಬ್​ ಆಗಿ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಅದನ್ನು ಮತ್ತೆ ಹಿಂದಿಗೆ ರಿಮೇಕ್​ ಮಾಡಿದ್ದೇ ದೊಡ್ಡ ತಪ್ಪು. ಈಗಾಗಲೇ ಸಿನಿಮಾದ ಕಥೆ ಎಲ್ಲರಿಗೂ ಗೊತ್ತಿರುವುದರಿಂದ ‘ಸರ್ಫಿರಾ’ ಸಿನಿಮಾ ನೋಡಲು ಪ್ರೇಕ್ಷಕರು ಆಸಕ್ತಿ ತೋರಿಸಿಲ್ಲ.

ಇದು ರಿಯಲ್​ ಲೈಫ್​ ಘಟನೆಯನ್ನು ಆಧರಿಸಿದ ಸಿನಿಮಾ. ಇದರಲ್ಲಿ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ ಅವರ ಪಾತ್ರವನ್ನು ಅಕ್ಷಯ್​ ಕುಮಾರ್​ ಮಾಡಿದ್ದಾರೆ. ಪರೇಶ್​ ರಾವಲ್​, ದಿಶಾ ಮದನ್​, ಪ್ರಕಾಶ್​ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಕಾಲಿವುಡ್​ ನಟ ಸೂರ್ಯ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ದರೂ ಕೂಡ ಹಿಂದಿ ಪ್ರೇಕ್ಷಕರನ್ನು ಸೆಳೆಯಲು ಈ ಸಿನಿಮಾ ವಿಫಲವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​