AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗನ ಕತೆಯಲ್ಲಿ ಅಕ್ಷಯ್ ಕುಮಾರ್, ‘ಸರ್ಫಿರಾ’ ಟ್ರೈಲರ್ ಬಿಡುಗಡೆ

ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಆಧರಿಸಿದ ತಮಿಳು ಸಿನಿಮಾ ‘ಸೂರರೈ ಪೊಟ್ರು’ನ ಹಿಂದಿ ರೀಮೇಕ್​ನಲ್ಲಿ ಅಕ್ಷಯ್ ಕುಮಾರ್ ನಟಿಸಿದ್ದು, ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾ ಜುಲೈ 12 ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ಸೂರ್ಯ ಸಹ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ಕನ್ನಡಿಗನ ಕತೆಯಲ್ಲಿ ಅಕ್ಷಯ್ ಕುಮಾರ್, ‘ಸರ್ಫಿರಾ’ ಟ್ರೈಲರ್ ಬಿಡುಗಡೆ
ಅಕ್ಷಯ್ ಕುಮಾರ್
ಮಂಜುನಾಥ ಸಿ.
|

Updated on: Jun 19, 2024 | 7:28 AM

Share

ಬಾಲಿವುಡ್​ಗೆ (Bollywood) ಬಯೋಪಿಕ್​ಗಳ ಮೇಲೆ ವಿಶೇಷ ಪ್ರೀತಿ, ಕ್ರೀಡಾ ಲೋಕದ ತಾರೆಯರು, ಬ್ಯುಸಿನೆಸ್ ಮ್ಯಾನ್, ಅಪರಾಧಿಗಳು, ರಾಜಕಾರಣಿಗಳು ಹೀಗೆ ಹಲವು ಜನಪ್ರಿಯ ವ್ಯಕ್ತಿಗಳ ಜೀವನದ ಬಗ್ಗೆ ಈಗಾಗಲೇ ಸಿನಿಮಾಗಳು ಬಂದಿವೆ. ಇದೀಗ ಕನ್ನಡಿಗನೊಬ್ಬನ ಕತೆಯನ್ನು ತೆರೆಗೆ ತರುತ್ತಿದೆ ಬಾಲಿವುಡ್ ಸಿನಿಮಾದಲ್ಲಿ ನಾಯಕನಾಗಿ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ (Akshay Kumar) ನಟಿಸಿದ್ದು ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಅಂದಹಾಗೆ ಈ ಸಿನಿಮಾ ತಮಿಳು ಸಿನಿಮಾದ ರೀಮೇಕ್.

ಕಡಿಮೆ ವೆಚ್ಚದ ಏರ್​ಲೈನ್ ಆರಂಭಿಸಿದ ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಜೀವನ ಕುರಿತಾದ ‘ಸರ್ಫಿರಾ’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಈ ಹಿಂದೆ ತಮಿಳಿನಲ್ಲಿ ನಿರ್ಮಿಸಲಾಗಿದ್ದ ‘ಸೂರರೈ ಪೊಟ್ರು’ ಸಿನಿಮಾವನ್ನು ‘ಸರ್ಫಿರಾ’ ಹೆಸರಲ್ಲಿ ಹಿಂದಿಯಲ್ಲಿ ನಿರ್ಮಿಸಲಾಗಿದೆ. ತಮಿಳಿನಲ್ಲಿ ‘ಸೂರರೈ ಪೊಟ್ರು’ ಸಿನಿಮಾವನ್ನು ನಿರ್ದೇಶಿಸಿದ್ದ ಸುಧಾ ಕೊಂಗರಾ ಅವರೇ ಹಿಂದಿಯಲ್ಲಿಯೂ ನಿರ್ದೇಶನ ಮಾಡಿದ್ದಾರೆ. ತಮಿಳಿನಲ್ಲಿ ‘ಸೂರರೈ ಪೊಟ್ರು’ ಸಿನಿಮಾ ದೊಡ್ಡ ಹಿಟ್ ಆಗಿತ್ತು. ಈ ಸಿನಿಮಾ ನೇರವಾಗಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿತ್ತಾದರೂ ಭಾರಿ ಜನಪ್ರಿಯತೆ ಗಳಿಸಿತ್ತು. ಇದೀಗ ‘ಸರ್ಫಿರಾ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಕಮಲ್ ಹಾಸನ್ ಎದುರು ತೊಡೆತಟ್ಟಿದ ಅಕ್ಷಯ್ ಕುಮಾರ್; ನಡೆಯಲಿದೆ ದೊಡ್ಡ ಕ್ಲ್ಯಾಶ್

ತಮಿಳಿನಲ್ಲಿ ಸಿನಿಮಾ ಹೇಗಿತ್ತೊ, ಹಿಂದಿಯಲ್ಲಿಯೂ ಯಥಾವತ್ತು ರೀಮೇಕ್ ಮಾಡಿರುವುದು ಟ್ರೈಲರ್​ನಿಂದ ತಿಳಿದು ಬರುತ್ತಿದೆ. ಹೇರ್​ಸ್ಟೈಲ್​ನಲ್ಲೂ ಸಹ ಬದಲಾವಣೆ ಮಾಡಲಾಗಿಲ್ಲ. ತಮಿಳಿನಲ್ಲಿ ಸೂರ್ಯ, ಕ್ಯಾಪ್ಟನ್ ಗೋಪಿನಾಥ್ ಪಾತ್ರದಲ್ಲಿ ನಟಿಸಿದ್ದರು. ಆದರೆ ಹಿಂದಿಯಲ್ಲಿ ಸೂರ್ಯ, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್​ನಲ್ಲಿಯೂ ಸೂರ್ಯ ಕಾಣಿಸಿಕೊಂಡಿದ್ದಾರೆ. ತಮಿಳಿನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ಪರೇಶ್ ರಾವಲ್ ಅವರೇ ಹಿಂದಿಯಲ್ಲಿ ಅದೇ ಪಾತ್ರವನ್ನು ನಿರ್ವಹಿಸಿದ್ದಾರೆ. ಆದರೆ ಇತರೆ ಪಾತ್ರಗಳ ನಟರನ್ನು ಬದಲು ಮಾಡಲಾಗಿದೆ.

ಹಿಂದಿ ಸಿನಿಮಾಕ್ಕೆ ತಮಿಳು ನಟ ಸೂರ್ಯ ಮತ್ತು ನಟಿ ಜ್ಯೋತಿಕಾ ಬಂಡವಾಳ ಹೂಡಿದ್ದಾರೆ. ಜೊತೆಗೆ ವಿಕ್ರಂ ಭಾಟಿಯಾ ಮತ್ತು ವಿಕ್ರಂ ಮಲ್ಹೋತ್ರಾ ಸಹ ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ನಾಯಕಿಯಾಗಿ ರಾಧಿಕಾ ನಾಯಕಿಯಾಗಿದ್ದಾರೆ. ‘ಸೂರರೈ ಪೊಟ್ರು’ ಸಿನಿಮಾದ ನಟನೆಗೆ ಸೂರ್ಯಾಗೆ ರಾಷ್ಟ್ರಪ್ರಶಸ್ತಿ ದೊರಕಿತ್ತು, ನಾಯಕಿ ಪಾತ್ರದಲ್ಲಿ ನಟಿಸಿದ್ದ ಅಪರಣ ಬಾಲಮುರಳಿ ನಟನೆಗೂ ಸಹ ರಾಷ್ಟ್ರಪತಿ ದೊರಕಿತ್ತು, ಅಲ್ಲದೆ ಇನ್ನೂ ಮೂರು ರಾಷ್ಟ್ರಪ್ರಶಸ್ತಿಗಳು ಈ ಸಿನಿಮಾಕ್ಕೆ ದೊರಕಿದ್ದವು. ಈಗ ‘ಸರ್ಫಿರಾ’ ಸಿನಿಮಾಕ್ಕೂ ಅದೇ ರೀತಿಯ ಪ್ರಶಂಸೆ ದೊರಕುತ್ತದೆಯೋ ನೋಡಬೇಕಿದೆ. ಜುಲೈ 12 ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು