AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್ ಕುಮಾರ್ ಸೋಲಿನ ಸಾಲಿಗೆ ಮತ್ತೊಂದು ಸಿನಿಮಾ; ಹೊಸ ಚಿತ್ರದ ಗಳಿಕೆ 2 ಕೋಟಿ ರೂ.!

ಅಕ್ಷಯ್ ಕುಮಾರ್ ಅವರಿಗೆ ಇತ್ತೀಚೆಗೆ ಒಂದಾದಮೇಲೆ ಒಂದರಂತೆ ಸೋಲುಗಳೇ ಎದುರಾಗುತ್ತಿವೆ. ಅವರು 50-100 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ, ಸಿನಿಮಾಗಳು ಮಾತ್ರ ಅಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುವುದಿಲ್ಲ. ಈಗ ಮತ್ತೆ ಅದು ಮರುಕಳಿಸಿದೆ.

ಅಕ್ಷಯ್ ಕುಮಾರ್ ಸೋಲಿನ ಸಾಲಿಗೆ ಮತ್ತೊಂದು ಸಿನಿಮಾ; ಹೊಸ ಚಿತ್ರದ ಗಳಿಕೆ 2 ಕೋಟಿ ರೂ.!
ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on: Jul 13, 2024 | 12:57 PM

Share

ಸುಧಾ ಕೊಂಗರಾ ಅವರು ನಿರ್ದೇಶನ ಮಾಡಿದ ‘ಸೂರರೈ ಪೊಟ್ರು’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮೆಚ್ಚುಗೆ ಪಡೆಯಿತು. ಈ ಸಿನಿಮಾಗೆ ರಾಷ್ಟ್ರಪ್ರಶಸ್ತಿ ಕೂಡ ಸಿಕ್ಕಿತ್ತು. ಈಗ ಈ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡಲಾಗಿದೆ. ‘ಸರ್ಫಿರಾ’ ಹೆಸರಲ್ಲಿ ಈ ಚಿತ್ರವನ್ನು ರಿಮೇಕ್ ಮಾಡಲಾಗಿದ್ದು, ಅಕ್ಷಯ್ ಕುಮಾರ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೊದಲ ದಿನ ಗಳಿಸಿದ್ದು ಕೇವಲ 2.40 ಕೋಟಿ ರೂಪಾಯಿ. ಇದರಿಂದ ಚಿತ್ರಕ್ಕೆ ಭರ್ಜರಿ ಹಿನ್ನಡೆ ಆಗಿದೆ.

ಅಕ್ಷಯ್ ಕುಮಾರ್ ಅವರಿಗೆ ಇತ್ತೀಚೆಗೆ ಒಂದಾದಮೇಲೆ ಒಂದರಂತೆ ಸೋಲುಗಳೇ ಎದುರಾಗುತ್ತಿವೆ. ಅವರು 50-100 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ, ಸಿನಿಮಾಗಳು ಮಾತ್ರ ಅಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುವುದಿಲ್ಲ. ಈಗ ಮತ್ತೆ ಅದು ಮರುಕಳಿಸಿದೆ. ಈ ವರ್ಷ ರಿಲೀಸ್ ಆಗಿರುವ ಅಕ್ಷಯ್ ನಟನೆಯ ಎರಡನೇ ಸಿನಿಮಾ ಇದು. ಎರಡೂ ಚಿತ್ರಗಳು ಸೋಲು ಕಂಡಿವೆ.

ಅಕ್ಷಯ್ ಕುಮಾರ್ ಅವರ ಸಿನಿಮಾಗಳು ಈ ಮೊದಲು ಫಸ್ಟ್ ಡೇ 15-30 ಕೋಟಿ ರೂಪಾಯಿ ಮಿನಿಮಮ್ ಗಳಿಕೆ ಮಾಡುತ್ತಿದ್ದವು. ಹೀಗಾಗಿ, ಅಕ್ಷಯ್ ಸಿನಿಮಾಗೆ ಬಂಡವಾಳ ಹೂಡಿದ ನಿರ್ಮಾಪಕ ಸೇಫ್ ಎನ್ನುವ ನಂಬಿಕೆ ಈ ಮೊದಲು ಇತ್ತು. ಆದರೆ, ಈಗ ಎಲ್ಲವೂ ಸುಳ್ಳಾಗುತ್ತಿದೆ.

‘ಸೂರರೈ ಪೋಟ್ರು’ ತಮಿಳಿನಲ್ಲಿ ಮೆಚ್ಚುಗೆ ಪಡೆಯಿತು ನಿಜ. ಹಾಗಂತ ಇದನ್ನು ಹಿಂದಿಗೆ ರಿಮೇಕ್ ಮಾಡಿದರೆ ಯಾರೂ ಕೂಡ ಅದನ್ನು ನೋಡುವುದಿಲ್ಲ. ಇದು ಅಕ್ಷಯ್ ಸಿನಿಮಾ ಸೋಲಲು ಮೂಲಕ ಕಾರಣ. ಅಕ್ಷಯ್ ಕುಮಾರ್ ನಟನೆಯ ಕೊನೆಯ 10 ಸಿನಿಮಾಗಳನ್ನು ತೆಗೆದುಕೊಂಡರೆ ಈ ಪೈಕಿ 8 ಸಿನಿಮಾಗಳು ಮಾತ್ರ ಹಿಟ್ ಆಗಿವೆ. ಈ ಸಾಲಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗುತ್ತಿದೆ.

ಇದನ್ನೂ ಓದಿ: ಅಕ್ಷಯ್ ಕುಮಾರ್​ಗೆ ಕೊವಿಡ್ ಪಾಸಿಟಿವ್; ಅಂಬಾನಿ ಮನೆ ಮದುವೆ ಮಿಸ್

ಸರ್ಫಿರಾ ಬಳಿಕ ಅಕ್ಷಯ್ ಕುಮಾರ್ ಅವರು ‘ಖೇಲ್ ಖೇಲ್ ಮೇ’, ‘ಸ್ಕೈ ಫೋರ್ಸ್’, ‘ಸಿಂಗಂ ಅಗೇನ್’, ‘ಜಾಲಿ ಎಲ್​ಎಲ್​ಬಿ 3’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ