AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್ ಕುಮಾರ್ ಸೋಲಿನ ಸಾಲಿಗೆ ಮತ್ತೊಂದು ಸಿನಿಮಾ; ಹೊಸ ಚಿತ್ರದ ಗಳಿಕೆ 2 ಕೋಟಿ ರೂ.!

ಅಕ್ಷಯ್ ಕುಮಾರ್ ಅವರಿಗೆ ಇತ್ತೀಚೆಗೆ ಒಂದಾದಮೇಲೆ ಒಂದರಂತೆ ಸೋಲುಗಳೇ ಎದುರಾಗುತ್ತಿವೆ. ಅವರು 50-100 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ, ಸಿನಿಮಾಗಳು ಮಾತ್ರ ಅಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುವುದಿಲ್ಲ. ಈಗ ಮತ್ತೆ ಅದು ಮರುಕಳಿಸಿದೆ.

ಅಕ್ಷಯ್ ಕುಮಾರ್ ಸೋಲಿನ ಸಾಲಿಗೆ ಮತ್ತೊಂದು ಸಿನಿಮಾ; ಹೊಸ ಚಿತ್ರದ ಗಳಿಕೆ 2 ಕೋಟಿ ರೂ.!
ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on: Jul 13, 2024 | 12:57 PM

Share

ಸುಧಾ ಕೊಂಗರಾ ಅವರು ನಿರ್ದೇಶನ ಮಾಡಿದ ‘ಸೂರರೈ ಪೊಟ್ರು’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮೆಚ್ಚುಗೆ ಪಡೆಯಿತು. ಈ ಸಿನಿಮಾಗೆ ರಾಷ್ಟ್ರಪ್ರಶಸ್ತಿ ಕೂಡ ಸಿಕ್ಕಿತ್ತು. ಈಗ ಈ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡಲಾಗಿದೆ. ‘ಸರ್ಫಿರಾ’ ಹೆಸರಲ್ಲಿ ಈ ಚಿತ್ರವನ್ನು ರಿಮೇಕ್ ಮಾಡಲಾಗಿದ್ದು, ಅಕ್ಷಯ್ ಕುಮಾರ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೊದಲ ದಿನ ಗಳಿಸಿದ್ದು ಕೇವಲ 2.40 ಕೋಟಿ ರೂಪಾಯಿ. ಇದರಿಂದ ಚಿತ್ರಕ್ಕೆ ಭರ್ಜರಿ ಹಿನ್ನಡೆ ಆಗಿದೆ.

ಅಕ್ಷಯ್ ಕುಮಾರ್ ಅವರಿಗೆ ಇತ್ತೀಚೆಗೆ ಒಂದಾದಮೇಲೆ ಒಂದರಂತೆ ಸೋಲುಗಳೇ ಎದುರಾಗುತ್ತಿವೆ. ಅವರು 50-100 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ, ಸಿನಿಮಾಗಳು ಮಾತ್ರ ಅಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುವುದಿಲ್ಲ. ಈಗ ಮತ್ತೆ ಅದು ಮರುಕಳಿಸಿದೆ. ಈ ವರ್ಷ ರಿಲೀಸ್ ಆಗಿರುವ ಅಕ್ಷಯ್ ನಟನೆಯ ಎರಡನೇ ಸಿನಿಮಾ ಇದು. ಎರಡೂ ಚಿತ್ರಗಳು ಸೋಲು ಕಂಡಿವೆ.

ಅಕ್ಷಯ್ ಕುಮಾರ್ ಅವರ ಸಿನಿಮಾಗಳು ಈ ಮೊದಲು ಫಸ್ಟ್ ಡೇ 15-30 ಕೋಟಿ ರೂಪಾಯಿ ಮಿನಿಮಮ್ ಗಳಿಕೆ ಮಾಡುತ್ತಿದ್ದವು. ಹೀಗಾಗಿ, ಅಕ್ಷಯ್ ಸಿನಿಮಾಗೆ ಬಂಡವಾಳ ಹೂಡಿದ ನಿರ್ಮಾಪಕ ಸೇಫ್ ಎನ್ನುವ ನಂಬಿಕೆ ಈ ಮೊದಲು ಇತ್ತು. ಆದರೆ, ಈಗ ಎಲ್ಲವೂ ಸುಳ್ಳಾಗುತ್ತಿದೆ.

‘ಸೂರರೈ ಪೋಟ್ರು’ ತಮಿಳಿನಲ್ಲಿ ಮೆಚ್ಚುಗೆ ಪಡೆಯಿತು ನಿಜ. ಹಾಗಂತ ಇದನ್ನು ಹಿಂದಿಗೆ ರಿಮೇಕ್ ಮಾಡಿದರೆ ಯಾರೂ ಕೂಡ ಅದನ್ನು ನೋಡುವುದಿಲ್ಲ. ಇದು ಅಕ್ಷಯ್ ಸಿನಿಮಾ ಸೋಲಲು ಮೂಲಕ ಕಾರಣ. ಅಕ್ಷಯ್ ಕುಮಾರ್ ನಟನೆಯ ಕೊನೆಯ 10 ಸಿನಿಮಾಗಳನ್ನು ತೆಗೆದುಕೊಂಡರೆ ಈ ಪೈಕಿ 8 ಸಿನಿಮಾಗಳು ಮಾತ್ರ ಹಿಟ್ ಆಗಿವೆ. ಈ ಸಾಲಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗುತ್ತಿದೆ.

ಇದನ್ನೂ ಓದಿ: ಅಕ್ಷಯ್ ಕುಮಾರ್​ಗೆ ಕೊವಿಡ್ ಪಾಸಿಟಿವ್; ಅಂಬಾನಿ ಮನೆ ಮದುವೆ ಮಿಸ್

ಸರ್ಫಿರಾ ಬಳಿಕ ಅಕ್ಷಯ್ ಕುಮಾರ್ ಅವರು ‘ಖೇಲ್ ಖೇಲ್ ಮೇ’, ‘ಸ್ಕೈ ಫೋರ್ಸ್’, ‘ಸಿಂಗಂ ಅಗೇನ್’, ‘ಜಾಲಿ ಎಲ್​ಎಲ್​ಬಿ 3’ ಮೊದಲಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ
Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ