AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೂರ್ತಿದಾಯಕ ಕಥೆ ನೀಡಿದ್ದಕ್ಕೆ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ಗೆ ಅಕ್ಷಯ್​ ಕುಮಾರ್​ ಧನ್ಯವಾದ

ಕಡಿಮೆ ದರದಲ್ಲಿ ಬಡವರು ಸಹ ವಿಮಾನದಲ್ಲಿ ಪ್ರಯಾಣ ಮಾಡುವಂತಾಗಬೇಕು ಎಂಬ ಕನಸು ಇಟ್ಟುಕೊಂಡು, ಅದನ್ನು ಸಾಧ್ಯವಾಗಿಸಿದ ಕನ್ನಡದ ಸಾಧಕ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಅವರ ಬದುಕು ನಿಜಕ್ಕೂ ಸ್ಫೂರ್ತಿದಾಯಕ ಆಗಿದೆ. ಆ ಕಥೆಯನ್ನು ಆಧರಿಸಿ ಈಗ ‘ಸರ್ಫಿರಾ’ ಸಿನಿಮಾ ಮಾಡಲಾಗಿದೆ. ಈ ಸಿನಿಮಾದಲ್ಲಿ ನಟ ಅಕ್ಷಯ್​ ಕುಮಾರ್​ ಅವರು ಅಭಿನಯಿಸಿದ್ದಾರೆ.

ಸ್ಫೂರ್ತಿದಾಯಕ ಕಥೆ ನೀಡಿದ್ದಕ್ಕೆ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ಗೆ ಅಕ್ಷಯ್​ ಕುಮಾರ್​ ಧನ್ಯವಾದ
ಅಕ್ಷಯ್​ ಕುಮಾರ್​, ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​
ಮದನ್​ ಕುಮಾರ್​
|

Updated on: Jun 19, 2024 | 3:20 PM

Share

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ (Akshay Kumar) ಅಭಿನಯದ ಹೊಸ ಸಿನಿಮಾ ‘ಸರ್ಫಿರಾ’ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟ್ರೇಲರ್​ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅಂದಹಾಗೆ, ಇದು ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ (Captain GR Gopinath) ಅವರ ಜೀವನದ ವಿವರಗಳನ್ನು ಆಧಾರವಾಗಿ ಇಟ್ಟುಕೊಂಡು ತಯಾರಾದ ಸಿನಿಮಾ. ಟ್ರೇಲರ್​ ಬಿಡುಗಡೆ ಬಳಿಕ ಕ್ಯಾಪ್ಟನ್​ ಗೋಪಿನಾಥ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ ಕುರಿತು ಬರೆದುಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅಕ್ಷಯ್​ ಕುಮಾರ್​ ಅವರು ಕ್ಯಾಪ್ಟನ್​ ಗೋಪಿನಾಥ್​ಗೆ ಧನ್ಯವಾದ ತಿಳಿಸಿದ್ದಾರೆ. ‘ಸರ್ಫಿರಾ’ ಸಿನಿಮಾ (Sarfira Movie) ಜುಲೈ 12ರಂದು ಬಿಡುಗಡೆ ಆಗಲಿದೆ.

‘ಸರ್ಫಿರಾ ಸಿನಿಮಾದ ಟ್ರೇಲರ್​ಗೆ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದೆ. 1 ರೂಪಾಯಿಗೆ ವಿಮಾನದ ಟಿಕೆಟ್​ ನೀಡಿ ನಾವು ಏರ್​ ಡೆಕ್ಕನ್​ ಲಾಂಚ್​ ಮಾಡಿದಾಗ ವೆಬ್​ಸೈಟ್​ ಕ್ರ್ಯಾಶ್​ ಆಗಿತ್ತು. ಈಗ ಟ್ರೇಲರ್​ಗೆ ಸಿಕ್ಕ ಜನಸ್ಪಂದನೆ ನೋಡಿ ನನಗೆ ಅದೆಲ್ಲ ನೆನಪಾಯಿತು. ನಾನು ಹುಚ್ಚ ಎಂದು ಜನರು ಭಾವಿಸಿದ್ದರು. ಹೌದು, ನಾನು ಹುಚ್ಚನಾಗಿದ್ದೆ’ ಎಂದು ಕ್ಯಾಪ್ಟನ್​ ಗೋಪಿನಾಥ್​ ‘ಎಕ್ಸ್​’ (ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್

ನಟ ಅಕ್ಷಯ್​ ಕುಮಾರ್​ ಅವರು ಗೋಪಿನಾಥ್​ ಪೋಸ್ಟ್​ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಖಂಡಿತಾ ಹೌದು ಸರ್​.. ಏನಾದರೂ ಅಸಾಧಾರಣವಾದದ್ದು ಮಾಡಬೇಕಾದರೆ ಸ್ವಲ್ಪ ಹುಚ್ಚತನ ಅತ್ಯವಶ್ಯಕ. ಇಂಥ ಸ್ಫೂರ್ತಿದಾಯಕ ಕಥೆಯನ್ನು ನಮಗೆ ನೀಡಿದ್ದಕ್ಕಾಗಿ ಧನ್ಯವಾದಗಳು’ ಎಂದು ಅಕ್ಷಯ್​ ಕುಮಾರ್​ ಅವರು ಪ್ರತಿಕ್ರಿಯಿಸಿದ್ದಾರೆ. ಈ ಸಿನಿಮಾಗೆ ಸುಧಾ ಕೊಂಗರಾ ನಿರ್ದೇಶನ ಮಾಡಿದ್ದಾರೆ.

ಕಡಿಮೆ ದರದಲ್ಲಿ ಬಡವರೂ ವಿಮಾನದಲ್ಲಿ ಪ್ರಯಾಣ ಮಾಡುವಂತೆ ಆಗಬೇಕು ಎಂಬ ಕನಸು ಇಟ್ಟುಕೊಂಡು, ಅದನ್ನು ಸಾಧ್ಯವಾಗಿಸಿದ ಕನ್ನಡಿಗ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಅವರ ಜೀವನ ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಆ ವಿವರಗಳನ್ನು ಇಟ್ಟುಕೊಂಡು ತಮಿಳಿನಲ್ಲಿ ‘ಸೂರರೈ ಪೋಟ್ರು’ ಸಿನಿಮಾ ಮಾಡಲಾಗಿತ್ತು. ಒಟಿಟಿಯಲ್ಲಿ ತೆರೆಕಂಡ ಆ ಸಿನಿಮಾದಲ್ಲಿ ಸೂರ್ಯ ಮುಖ್ಯ ಪಾತ್ರ ಮಾಡಿದ್ದರು. ಆ ಸಿನಿಮಾ ‘ಸರ್ಫಿರಾ’ ಶೀರ್ಷಿಕೆಯಲ್ಲಿ ಈಗ ಹಿಂದಿಗೆ ರಿಮೇಕ್​ ಆಗಿದೆ. ಇದರಲ್ಲಿ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಅವರ ಪಾತ್ರಕ್ಕೆ ಅಕ್ಷಯ್​ ಕುಮಾರ್​ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್