ಸ್ಫೂರ್ತಿದಾಯಕ ಕಥೆ ನೀಡಿದ್ದಕ್ಕೆ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ಗೆ ಅಕ್ಷಯ್​ ಕುಮಾರ್​ ಧನ್ಯವಾದ

ಕಡಿಮೆ ದರದಲ್ಲಿ ಬಡವರು ಸಹ ವಿಮಾನದಲ್ಲಿ ಪ್ರಯಾಣ ಮಾಡುವಂತಾಗಬೇಕು ಎಂಬ ಕನಸು ಇಟ್ಟುಕೊಂಡು, ಅದನ್ನು ಸಾಧ್ಯವಾಗಿಸಿದ ಕನ್ನಡದ ಸಾಧಕ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಅವರ ಬದುಕು ನಿಜಕ್ಕೂ ಸ್ಫೂರ್ತಿದಾಯಕ ಆಗಿದೆ. ಆ ಕಥೆಯನ್ನು ಆಧರಿಸಿ ಈಗ ‘ಸರ್ಫಿರಾ’ ಸಿನಿಮಾ ಮಾಡಲಾಗಿದೆ. ಈ ಸಿನಿಮಾದಲ್ಲಿ ನಟ ಅಕ್ಷಯ್​ ಕುಮಾರ್​ ಅವರು ಅಭಿನಯಿಸಿದ್ದಾರೆ.

ಸ್ಫೂರ್ತಿದಾಯಕ ಕಥೆ ನೀಡಿದ್ದಕ್ಕೆ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ಗೆ ಅಕ್ಷಯ್​ ಕುಮಾರ್​ ಧನ್ಯವಾದ
ಅಕ್ಷಯ್​ ಕುಮಾರ್​, ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​
Follow us
|

Updated on: Jun 19, 2024 | 3:20 PM

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ (Akshay Kumar) ಅಭಿನಯದ ಹೊಸ ಸಿನಿಮಾ ‘ಸರ್ಫಿರಾ’ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟ್ರೇಲರ್​ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅಂದಹಾಗೆ, ಇದು ಕನ್ನಡಿಗ ಕ್ಯಾಪ್ಟನ್​ ಗೋಪಿನಾಥ್​ (Captain GR Gopinath) ಅವರ ಜೀವನದ ವಿವರಗಳನ್ನು ಆಧಾರವಾಗಿ ಇಟ್ಟುಕೊಂಡು ತಯಾರಾದ ಸಿನಿಮಾ. ಟ್ರೇಲರ್​ ಬಿಡುಗಡೆ ಬಳಿಕ ಕ್ಯಾಪ್ಟನ್​ ಗೋಪಿನಾಥ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ ಕುರಿತು ಬರೆದುಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಅಕ್ಷಯ್​ ಕುಮಾರ್​ ಅವರು ಕ್ಯಾಪ್ಟನ್​ ಗೋಪಿನಾಥ್​ಗೆ ಧನ್ಯವಾದ ತಿಳಿಸಿದ್ದಾರೆ. ‘ಸರ್ಫಿರಾ’ ಸಿನಿಮಾ (Sarfira Movie) ಜುಲೈ 12ರಂದು ಬಿಡುಗಡೆ ಆಗಲಿದೆ.

‘ಸರ್ಫಿರಾ ಸಿನಿಮಾದ ಟ್ರೇಲರ್​ಗೆ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದೆ. 1 ರೂಪಾಯಿಗೆ ವಿಮಾನದ ಟಿಕೆಟ್​ ನೀಡಿ ನಾವು ಏರ್​ ಡೆಕ್ಕನ್​ ಲಾಂಚ್​ ಮಾಡಿದಾಗ ವೆಬ್​ಸೈಟ್​ ಕ್ರ್ಯಾಶ್​ ಆಗಿತ್ತು. ಈಗ ಟ್ರೇಲರ್​ಗೆ ಸಿಕ್ಕ ಜನಸ್ಪಂದನೆ ನೋಡಿ ನನಗೆ ಅದೆಲ್ಲ ನೆನಪಾಯಿತು. ನಾನು ಹುಚ್ಚ ಎಂದು ಜನರು ಭಾವಿಸಿದ್ದರು. ಹೌದು, ನಾನು ಹುಚ್ಚನಾಗಿದ್ದೆ’ ಎಂದು ಕ್ಯಾಪ್ಟನ್​ ಗೋಪಿನಾಥ್​ ‘ಎಕ್ಸ್​’ (ಟ್ವಿಟರ್​) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್

ನಟ ಅಕ್ಷಯ್​ ಕುಮಾರ್​ ಅವರು ಗೋಪಿನಾಥ್​ ಪೋಸ್ಟ್​ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಖಂಡಿತಾ ಹೌದು ಸರ್​.. ಏನಾದರೂ ಅಸಾಧಾರಣವಾದದ್ದು ಮಾಡಬೇಕಾದರೆ ಸ್ವಲ್ಪ ಹುಚ್ಚತನ ಅತ್ಯವಶ್ಯಕ. ಇಂಥ ಸ್ಫೂರ್ತಿದಾಯಕ ಕಥೆಯನ್ನು ನಮಗೆ ನೀಡಿದ್ದಕ್ಕಾಗಿ ಧನ್ಯವಾದಗಳು’ ಎಂದು ಅಕ್ಷಯ್​ ಕುಮಾರ್​ ಅವರು ಪ್ರತಿಕ್ರಿಯಿಸಿದ್ದಾರೆ. ಈ ಸಿನಿಮಾಗೆ ಸುಧಾ ಕೊಂಗರಾ ನಿರ್ದೇಶನ ಮಾಡಿದ್ದಾರೆ.

ಕಡಿಮೆ ದರದಲ್ಲಿ ಬಡವರೂ ವಿಮಾನದಲ್ಲಿ ಪ್ರಯಾಣ ಮಾಡುವಂತೆ ಆಗಬೇಕು ಎಂಬ ಕನಸು ಇಟ್ಟುಕೊಂಡು, ಅದನ್ನು ಸಾಧ್ಯವಾಗಿಸಿದ ಕನ್ನಡಿಗ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಅವರ ಜೀವನ ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಆ ವಿವರಗಳನ್ನು ಇಟ್ಟುಕೊಂಡು ತಮಿಳಿನಲ್ಲಿ ‘ಸೂರರೈ ಪೋಟ್ರು’ ಸಿನಿಮಾ ಮಾಡಲಾಗಿತ್ತು. ಒಟಿಟಿಯಲ್ಲಿ ತೆರೆಕಂಡ ಆ ಸಿನಿಮಾದಲ್ಲಿ ಸೂರ್ಯ ಮುಖ್ಯ ಪಾತ್ರ ಮಾಡಿದ್ದರು. ಆ ಸಿನಿಮಾ ‘ಸರ್ಫಿರಾ’ ಶೀರ್ಷಿಕೆಯಲ್ಲಿ ಈಗ ಹಿಂದಿಗೆ ರಿಮೇಕ್​ ಆಗಿದೆ. ಇದರಲ್ಲಿ ಕ್ಯಾಪ್ಟನ್​ ಜಿ.ಆರ್​. ಗೋಪಿನಾಥ್​ ಅವರ ಪಾತ್ರಕ್ಕೆ ಅಕ್ಷಯ್​ ಕುಮಾರ್​ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್