AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್

ಕರ್ನಾಟಕದಲ್ಲಿ ಇಷ್ಟುದಿನ ಚಿತ್ರಮಂದಿರಗಳಲ್ಲಿ ಶೆ. 50 ಸೀಟುಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕರ್ನಾಟಕ ಸರ್ಕಾರ ಅಕ್ಟೋಬರ್ 1ರಿಂದ ಹೌಸ್​ಫುಲ್​ಗೆ ಅವಕಾಶ ನೀಡುತ್ತಿದೆ.

ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್
ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್
TV9 Web
| Edited By: |

Updated on:Sep 25, 2021 | 6:49 PM

Share

ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡ ನಂತರ ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಮುಚ್ಚಲಾಗಿತ್ತು. ಬಾಲಿವುಡ್​ನ ಮುಖ್ಯ ಹಬ್​ ಎಂದೇ ಕರೆಯಲ್ಪಡುವ ಮುಂಬೈನಲ್ಲಿ ಥಿಯೇಟರ್​ ಮುಚ್ಚಿದ್ದರಿಂದ ಬಾಲಿವುಡ್​ ಸ್ಟಾರ್​ ಸಿನಿಮಾಗಳು ಅಷ್ಟಾಗಿ ರಿಲೀಸ್​ ಆಗಿರಲಿಲ್ಲ. ಈಗ ಅಕ್ಟೋಬರ್​ 22ರಿಂದ ಚಿತ್ರಮಂದಿರ ರೀಓಪನ್​ಗೆ ಅವಕಾಶ ನೀಡಲಾಗಿದೆ. ಇದರಿಂದ ಬಾಲಿವುಡ್​ ಮತ್ತೆ ಕಳೆಗಟ್ಟುತ್ತಿದೆ. ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ಗೆ ರೆಡಿ ಆಗುತ್ತಿದೆ.

ಕರ್ನಾಟಕದಲ್ಲಿ ಇಷ್ಟುದಿನ ಚಿತ್ರಮಂದಿರಗಳಲ್ಲಿ ಶೆ. 50 ಸೀಟುಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕರ್ನಾಟಕ ಸರ್ಕಾರ ಅಕ್ಟೋಬರ್ 1ರಿಂದ ಹೌಸ್​ಫುಲ್​ಗೆ ಅವಕಾಶ ನೀಡುತ್ತಿದೆ. ಇದಾದ ಬೆನ್ನಲ್ಲೇ ಈಗ ಮಹಾರಾಷ್ಟ್ರದಲ್ಲೂ ಚಿತ್ರಮಂದಿರ ಓಪನ್​ ಮಾಡೋಕೆ ಅವಕಾಶ ನೀಡಲಾಗಿದೆ. ಅಕ್ಟೋಬರ್​ 22ರಿಂದ ಮಹಾರಾಷ್ಟ್ರದಲ್ಲಿ ಮತ್ತೆ ಸಿನಿಮಾ ರಿಲೀಸ್​ ಆಗಲಿದೆ.

ಈ ಬಗ್ಗೆ ಅಕ್ಷಯ್​ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ‘ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೆ ಸಾಕಷ್ಟು ಕುಟುಂಬಗಳು ಧನ್ಯವಾದ ಹೇಳುತ್ತವೆ. ಅಕ್ಟೋಬರ್​ 22ರಿಂದ ಚಿತ್ರಮಂದಿರ ಓಪನ್​ ಮಾಡೋಕೆ ಅವಕಾಶ ನೀಡಿದ್ದು ಉತ್ತಮ ಕೆಲಸ’ ಎಂದಿರುವ ಅಕ್ಷಯ್​ ಕುಮಾರ್​, ದೀಪಾವಳಿಗೆ ‘ಸೂರ್ಯವಂಶಿ’ ಸಿನಿಮಾ ಬರಲಿದೆ ಎಂಬುದನ್ನು ಘೋಷಿಸಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರನ್ನು ರೋಹಿತ್​ ಶೆಟ್ಟಿ ಭೇಟಿ ಮಾಡಿದ್ದಾರೆ. ಈ ಮೂಲಕ ಅವರು ವಿಶೇಷ ಧನ್ಯವಾದ ಹೇಳಿದ್ದಾರೆ.

ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್’ ಸಿನಿಮಾ ತೆರೆಗೆ ಬಂದಿತ್ತು. ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಓಪನ್​ ಇಲ್ಲ ಎಂಬುದು ಸಿನಿಮಾಗೆ ದೊಡ್ಡ ಪೆಟ್ಟು ನೀಡಿತ್ತು. ನೂರಾರು ಕೋಟಿ ರೂಪಾಯಿ ಬಾಚುವ ಅಕ್ಷಯ್​ ಕುಮಾರ್​ ಸಿನಿಮಾ ಕೆಲವೇ ಕೆಲವು ಕೋಟಿ ಗಳಿಸಿ ಥಿಯೇಟರ್​ನಿಂದ ಕಾಲ್ಕಿತ್ತಿತ್ತು. ಈಗ ಈ ಸಿನಿಮಾ ಅಮೇಜಾನ್​ ಪ್ರೈಮ್​ನಲ್ಲಿ ತೆರೆಗೆ ಬಂದು ಹೆಸರು ಮಾಡುತ್ತಿದೆ.

ಇದನ್ನೂ ಓದಿ: ಥಿಯೇಟರ್​ ಹೌಸ್​ಫುಲ್​ಗೆ ಅವಕಾಶ; ಷರತ್ತುಗಳೇನು?

ಅಕ್ಷಯ್​ ಕುಮಾರ್​ ನಂಬಿಕಸ್ಥ ಬಾಡಿಗಾರ್ಡ್ ಶ್ರೇಯಸ್​​ಗೆ 1.2 ಕೋಟಿ ರೂ. ಸಂಬಳ; ಈ ವ್ಯಕ್ತಿಯ ಕೆಲಸಗಳೇನು?

Published On - 6:48 pm, Sat, 25 September 21

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ