AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್

ಕರ್ನಾಟಕದಲ್ಲಿ ಇಷ್ಟುದಿನ ಚಿತ್ರಮಂದಿರಗಳಲ್ಲಿ ಶೆ. 50 ಸೀಟುಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕರ್ನಾಟಕ ಸರ್ಕಾರ ಅಕ್ಟೋಬರ್ 1ರಿಂದ ಹೌಸ್​ಫುಲ್​ಗೆ ಅವಕಾಶ ನೀಡುತ್ತಿದೆ.

ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್
ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್
TV9 Web
| Edited By: |

Updated on:Sep 25, 2021 | 6:49 PM

Share

ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡ ನಂತರ ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಮುಚ್ಚಲಾಗಿತ್ತು. ಬಾಲಿವುಡ್​ನ ಮುಖ್ಯ ಹಬ್​ ಎಂದೇ ಕರೆಯಲ್ಪಡುವ ಮುಂಬೈನಲ್ಲಿ ಥಿಯೇಟರ್​ ಮುಚ್ಚಿದ್ದರಿಂದ ಬಾಲಿವುಡ್​ ಸ್ಟಾರ್​ ಸಿನಿಮಾಗಳು ಅಷ್ಟಾಗಿ ರಿಲೀಸ್​ ಆಗಿರಲಿಲ್ಲ. ಈಗ ಅಕ್ಟೋಬರ್​ 22ರಿಂದ ಚಿತ್ರಮಂದಿರ ರೀಓಪನ್​ಗೆ ಅವಕಾಶ ನೀಡಲಾಗಿದೆ. ಇದರಿಂದ ಬಾಲಿವುಡ್​ ಮತ್ತೆ ಕಳೆಗಟ್ಟುತ್ತಿದೆ. ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ಗೆ ರೆಡಿ ಆಗುತ್ತಿದೆ.

ಕರ್ನಾಟಕದಲ್ಲಿ ಇಷ್ಟುದಿನ ಚಿತ್ರಮಂದಿರಗಳಲ್ಲಿ ಶೆ. 50 ಸೀಟುಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕರ್ನಾಟಕ ಸರ್ಕಾರ ಅಕ್ಟೋಬರ್ 1ರಿಂದ ಹೌಸ್​ಫುಲ್​ಗೆ ಅವಕಾಶ ನೀಡುತ್ತಿದೆ. ಇದಾದ ಬೆನ್ನಲ್ಲೇ ಈಗ ಮಹಾರಾಷ್ಟ್ರದಲ್ಲೂ ಚಿತ್ರಮಂದಿರ ಓಪನ್​ ಮಾಡೋಕೆ ಅವಕಾಶ ನೀಡಲಾಗಿದೆ. ಅಕ್ಟೋಬರ್​ 22ರಿಂದ ಮಹಾರಾಷ್ಟ್ರದಲ್ಲಿ ಮತ್ತೆ ಸಿನಿಮಾ ರಿಲೀಸ್​ ಆಗಲಿದೆ.

ಈ ಬಗ್ಗೆ ಅಕ್ಷಯ್​ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ‘ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೆ ಸಾಕಷ್ಟು ಕುಟುಂಬಗಳು ಧನ್ಯವಾದ ಹೇಳುತ್ತವೆ. ಅಕ್ಟೋಬರ್​ 22ರಿಂದ ಚಿತ್ರಮಂದಿರ ಓಪನ್​ ಮಾಡೋಕೆ ಅವಕಾಶ ನೀಡಿದ್ದು ಉತ್ತಮ ಕೆಲಸ’ ಎಂದಿರುವ ಅಕ್ಷಯ್​ ಕುಮಾರ್​, ದೀಪಾವಳಿಗೆ ‘ಸೂರ್ಯವಂಶಿ’ ಸಿನಿಮಾ ಬರಲಿದೆ ಎಂಬುದನ್ನು ಘೋಷಿಸಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರನ್ನು ರೋಹಿತ್​ ಶೆಟ್ಟಿ ಭೇಟಿ ಮಾಡಿದ್ದಾರೆ. ಈ ಮೂಲಕ ಅವರು ವಿಶೇಷ ಧನ್ಯವಾದ ಹೇಳಿದ್ದಾರೆ.

ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್’ ಸಿನಿಮಾ ತೆರೆಗೆ ಬಂದಿತ್ತು. ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಓಪನ್​ ಇಲ್ಲ ಎಂಬುದು ಸಿನಿಮಾಗೆ ದೊಡ್ಡ ಪೆಟ್ಟು ನೀಡಿತ್ತು. ನೂರಾರು ಕೋಟಿ ರೂಪಾಯಿ ಬಾಚುವ ಅಕ್ಷಯ್​ ಕುಮಾರ್​ ಸಿನಿಮಾ ಕೆಲವೇ ಕೆಲವು ಕೋಟಿ ಗಳಿಸಿ ಥಿಯೇಟರ್​ನಿಂದ ಕಾಲ್ಕಿತ್ತಿತ್ತು. ಈಗ ಈ ಸಿನಿಮಾ ಅಮೇಜಾನ್​ ಪ್ರೈಮ್​ನಲ್ಲಿ ತೆರೆಗೆ ಬಂದು ಹೆಸರು ಮಾಡುತ್ತಿದೆ.

ಇದನ್ನೂ ಓದಿ: ಥಿಯೇಟರ್​ ಹೌಸ್​ಫುಲ್​ಗೆ ಅವಕಾಶ; ಷರತ್ತುಗಳೇನು?

ಅಕ್ಷಯ್​ ಕುಮಾರ್​ ನಂಬಿಕಸ್ಥ ಬಾಡಿಗಾರ್ಡ್ ಶ್ರೇಯಸ್​​ಗೆ 1.2 ಕೋಟಿ ರೂ. ಸಂಬಳ; ಈ ವ್ಯಕ್ತಿಯ ಕೆಲಸಗಳೇನು?

Published On - 6:48 pm, Sat, 25 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್