AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್

ಕರ್ನಾಟಕದಲ್ಲಿ ಇಷ್ಟುದಿನ ಚಿತ್ರಮಂದಿರಗಳಲ್ಲಿ ಶೆ. 50 ಸೀಟುಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕರ್ನಾಟಕ ಸರ್ಕಾರ ಅಕ್ಟೋಬರ್ 1ರಿಂದ ಹೌಸ್​ಫುಲ್​ಗೆ ಅವಕಾಶ ನೀಡುತ್ತಿದೆ.

ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್
ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್
TV9 Web
| Edited By: |

Updated on:Sep 25, 2021 | 6:49 PM

Share

ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡ ನಂತರ ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಮುಚ್ಚಲಾಗಿತ್ತು. ಬಾಲಿವುಡ್​ನ ಮುಖ್ಯ ಹಬ್​ ಎಂದೇ ಕರೆಯಲ್ಪಡುವ ಮುಂಬೈನಲ್ಲಿ ಥಿಯೇಟರ್​ ಮುಚ್ಚಿದ್ದರಿಂದ ಬಾಲಿವುಡ್​ ಸ್ಟಾರ್​ ಸಿನಿಮಾಗಳು ಅಷ್ಟಾಗಿ ರಿಲೀಸ್​ ಆಗಿರಲಿಲ್ಲ. ಈಗ ಅಕ್ಟೋಬರ್​ 22ರಿಂದ ಚಿತ್ರಮಂದಿರ ರೀಓಪನ್​ಗೆ ಅವಕಾಶ ನೀಡಲಾಗಿದೆ. ಇದರಿಂದ ಬಾಲಿವುಡ್​ ಮತ್ತೆ ಕಳೆಗಟ್ಟುತ್ತಿದೆ. ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ಗೆ ರೆಡಿ ಆಗುತ್ತಿದೆ.

ಕರ್ನಾಟಕದಲ್ಲಿ ಇಷ್ಟುದಿನ ಚಿತ್ರಮಂದಿರಗಳಲ್ಲಿ ಶೆ. 50 ಸೀಟುಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕರ್ನಾಟಕ ಸರ್ಕಾರ ಅಕ್ಟೋಬರ್ 1ರಿಂದ ಹೌಸ್​ಫುಲ್​ಗೆ ಅವಕಾಶ ನೀಡುತ್ತಿದೆ. ಇದಾದ ಬೆನ್ನಲ್ಲೇ ಈಗ ಮಹಾರಾಷ್ಟ್ರದಲ್ಲೂ ಚಿತ್ರಮಂದಿರ ಓಪನ್​ ಮಾಡೋಕೆ ಅವಕಾಶ ನೀಡಲಾಗಿದೆ. ಅಕ್ಟೋಬರ್​ 22ರಿಂದ ಮಹಾರಾಷ್ಟ್ರದಲ್ಲಿ ಮತ್ತೆ ಸಿನಿಮಾ ರಿಲೀಸ್​ ಆಗಲಿದೆ.

ಈ ಬಗ್ಗೆ ಅಕ್ಷಯ್​ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ‘ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೆ ಸಾಕಷ್ಟು ಕುಟುಂಬಗಳು ಧನ್ಯವಾದ ಹೇಳುತ್ತವೆ. ಅಕ್ಟೋಬರ್​ 22ರಿಂದ ಚಿತ್ರಮಂದಿರ ಓಪನ್​ ಮಾಡೋಕೆ ಅವಕಾಶ ನೀಡಿದ್ದು ಉತ್ತಮ ಕೆಲಸ’ ಎಂದಿರುವ ಅಕ್ಷಯ್​ ಕುಮಾರ್​, ದೀಪಾವಳಿಗೆ ‘ಸೂರ್ಯವಂಶಿ’ ಸಿನಿಮಾ ಬರಲಿದೆ ಎಂಬುದನ್ನು ಘೋಷಿಸಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರನ್ನು ರೋಹಿತ್​ ಶೆಟ್ಟಿ ಭೇಟಿ ಮಾಡಿದ್ದಾರೆ. ಈ ಮೂಲಕ ಅವರು ವಿಶೇಷ ಧನ್ಯವಾದ ಹೇಳಿದ್ದಾರೆ.

ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್’ ಸಿನಿಮಾ ತೆರೆಗೆ ಬಂದಿತ್ತು. ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಓಪನ್​ ಇಲ್ಲ ಎಂಬುದು ಸಿನಿಮಾಗೆ ದೊಡ್ಡ ಪೆಟ್ಟು ನೀಡಿತ್ತು. ನೂರಾರು ಕೋಟಿ ರೂಪಾಯಿ ಬಾಚುವ ಅಕ್ಷಯ್​ ಕುಮಾರ್​ ಸಿನಿಮಾ ಕೆಲವೇ ಕೆಲವು ಕೋಟಿ ಗಳಿಸಿ ಥಿಯೇಟರ್​ನಿಂದ ಕಾಲ್ಕಿತ್ತಿತ್ತು. ಈಗ ಈ ಸಿನಿಮಾ ಅಮೇಜಾನ್​ ಪ್ರೈಮ್​ನಲ್ಲಿ ತೆರೆಗೆ ಬಂದು ಹೆಸರು ಮಾಡುತ್ತಿದೆ.

ಇದನ್ನೂ ಓದಿ: ಥಿಯೇಟರ್​ ಹೌಸ್​ಫುಲ್​ಗೆ ಅವಕಾಶ; ಷರತ್ತುಗಳೇನು?

ಅಕ್ಷಯ್​ ಕುಮಾರ್​ ನಂಬಿಕಸ್ಥ ಬಾಡಿಗಾರ್ಡ್ ಶ್ರೇಯಸ್​​ಗೆ 1.2 ಕೋಟಿ ರೂ. ಸಂಬಳ; ಈ ವ್ಯಕ್ತಿಯ ಕೆಲಸಗಳೇನು?

Published On - 6:48 pm, Sat, 25 September 21

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ