AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್

ಕರ್ನಾಟಕದಲ್ಲಿ ಇಷ್ಟುದಿನ ಚಿತ್ರಮಂದಿರಗಳಲ್ಲಿ ಶೆ. 50 ಸೀಟುಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕರ್ನಾಟಕ ಸರ್ಕಾರ ಅಕ್ಟೋಬರ್ 1ರಿಂದ ಹೌಸ್​ಫುಲ್​ಗೆ ಅವಕಾಶ ನೀಡುತ್ತಿದೆ.

ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್
ಸ್ಯಾಂಡಲ್​ವುಡ್​ ನಂತರ ಬಾಲಿವುಡ್​ಗೂ ಸಿಕ್ತು ಗುಡ್​ ನ್ಯೂಸ್​; ಸಂಭ್ರಮಿಸಿದ ಅಕ್ಷಯ್​ ಕುಮಾರ್
TV9 Web
| Edited By: |

Updated on:Sep 25, 2021 | 6:49 PM

Share

ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡ ನಂತರ ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಮುಚ್ಚಲಾಗಿತ್ತು. ಬಾಲಿವುಡ್​ನ ಮುಖ್ಯ ಹಬ್​ ಎಂದೇ ಕರೆಯಲ್ಪಡುವ ಮುಂಬೈನಲ್ಲಿ ಥಿಯೇಟರ್​ ಮುಚ್ಚಿದ್ದರಿಂದ ಬಾಲಿವುಡ್​ ಸ್ಟಾರ್​ ಸಿನಿಮಾಗಳು ಅಷ್ಟಾಗಿ ರಿಲೀಸ್​ ಆಗಿರಲಿಲ್ಲ. ಈಗ ಅಕ್ಟೋಬರ್​ 22ರಿಂದ ಚಿತ್ರಮಂದಿರ ರೀಓಪನ್​ಗೆ ಅವಕಾಶ ನೀಡಲಾಗಿದೆ. ಇದರಿಂದ ಬಾಲಿವುಡ್​ ಮತ್ತೆ ಕಳೆಗಟ್ಟುತ್ತಿದೆ. ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ಗೆ ರೆಡಿ ಆಗುತ್ತಿದೆ.

ಕರ್ನಾಟಕದಲ್ಲಿ ಇಷ್ಟುದಿನ ಚಿತ್ರಮಂದಿರಗಳಲ್ಲಿ ಶೆ. 50 ಸೀಟುಭರ್ತಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕರ್ನಾಟಕ ಸರ್ಕಾರ ಅಕ್ಟೋಬರ್ 1ರಿಂದ ಹೌಸ್​ಫುಲ್​ಗೆ ಅವಕಾಶ ನೀಡುತ್ತಿದೆ. ಇದಾದ ಬೆನ್ನಲ್ಲೇ ಈಗ ಮಹಾರಾಷ್ಟ್ರದಲ್ಲೂ ಚಿತ್ರಮಂದಿರ ಓಪನ್​ ಮಾಡೋಕೆ ಅವಕಾಶ ನೀಡಲಾಗಿದೆ. ಅಕ್ಟೋಬರ್​ 22ರಿಂದ ಮಹಾರಾಷ್ಟ್ರದಲ್ಲಿ ಮತ್ತೆ ಸಿನಿಮಾ ರಿಲೀಸ್​ ಆಗಲಿದೆ.

ಈ ಬಗ್ಗೆ ಅಕ್ಷಯ್​ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ‘ಮುಖ್ಯಮಂತ್ರಿ ಉದ್ಧವ್​ ಠಾಕ್ರೆಗೆ ಸಾಕಷ್ಟು ಕುಟುಂಬಗಳು ಧನ್ಯವಾದ ಹೇಳುತ್ತವೆ. ಅಕ್ಟೋಬರ್​ 22ರಿಂದ ಚಿತ್ರಮಂದಿರ ಓಪನ್​ ಮಾಡೋಕೆ ಅವಕಾಶ ನೀಡಿದ್ದು ಉತ್ತಮ ಕೆಲಸ’ ಎಂದಿರುವ ಅಕ್ಷಯ್​ ಕುಮಾರ್​, ದೀಪಾವಳಿಗೆ ‘ಸೂರ್ಯವಂಶಿ’ ಸಿನಿಮಾ ಬರಲಿದೆ ಎಂಬುದನ್ನು ಘೋಷಿಸಿದ್ದಾರೆ. ಈ ಮಧ್ಯೆ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರನ್ನು ರೋಹಿತ್​ ಶೆಟ್ಟಿ ಭೇಟಿ ಮಾಡಿದ್ದಾರೆ. ಈ ಮೂಲಕ ಅವರು ವಿಶೇಷ ಧನ್ಯವಾದ ಹೇಳಿದ್ದಾರೆ.

ಅಕ್ಷಯ್​ ಕುಮಾರ್​ ನಟನೆಯ ‘ಬೆಲ್​ ಬಾಟಮ್’ ಸಿನಿಮಾ ತೆರೆಗೆ ಬಂದಿತ್ತು. ಮಹಾರಾಷ್ಟ್ರದಲ್ಲಿ ಚಿತ್ರಮಂದಿರ ಓಪನ್​ ಇಲ್ಲ ಎಂಬುದು ಸಿನಿಮಾಗೆ ದೊಡ್ಡ ಪೆಟ್ಟು ನೀಡಿತ್ತು. ನೂರಾರು ಕೋಟಿ ರೂಪಾಯಿ ಬಾಚುವ ಅಕ್ಷಯ್​ ಕುಮಾರ್​ ಸಿನಿಮಾ ಕೆಲವೇ ಕೆಲವು ಕೋಟಿ ಗಳಿಸಿ ಥಿಯೇಟರ್​ನಿಂದ ಕಾಲ್ಕಿತ್ತಿತ್ತು. ಈಗ ಈ ಸಿನಿಮಾ ಅಮೇಜಾನ್​ ಪ್ರೈಮ್​ನಲ್ಲಿ ತೆರೆಗೆ ಬಂದು ಹೆಸರು ಮಾಡುತ್ತಿದೆ.

ಇದನ್ನೂ ಓದಿ: ಥಿಯೇಟರ್​ ಹೌಸ್​ಫುಲ್​ಗೆ ಅವಕಾಶ; ಷರತ್ತುಗಳೇನು?

ಅಕ್ಷಯ್​ ಕುಮಾರ್​ ನಂಬಿಕಸ್ಥ ಬಾಡಿಗಾರ್ಡ್ ಶ್ರೇಯಸ್​​ಗೆ 1.2 ಕೋಟಿ ರೂ. ಸಂಬಳ; ಈ ವ್ಯಕ್ತಿಯ ಕೆಲಸಗಳೇನು?

Published On - 6:48 pm, Sat, 25 September 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು