AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಕುಮಾರ್​ ಸಿನಿಮಾದ 14 ಸೆಕೆಂಡ್​ ದೃಶ್ಯ ಬ್ಲರ್​ ಮಾಡಲು ಸೂಚಿಸಿದ ಸೆನ್ಸಾರ್​ ಮಂಡಳಿ

ಏ.10ರಂದು ‘ಬಡೆ ಮಿಯಾ ಚೋಟೆ ಮಿಯಾ’ ಚಿತ್ರ ರಿಲೀಸ್​ ಆಗಲಿದೆ. ಈದ್​ ಹಬ್ಬದ ರಜೆಯ ಲಾಭ ಪಡೆಯಲು ಅಕ್ಷಯ್​ ಕುಮಾರ್ ಹಾಗೂ ಟೈಗರ್​ ಶ್ರಾಫ್​ ತಯಾರಾಗಿದ್ದಾರೆ. ಈ ಸಿನಿಮಾಗೆ ಮೊದಲ ದಿನ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈಗಾಗಲೇ ಸಿನಿಮಾದ ಟ್ರೇಲರ್​ ಗಮನ ಸೆಳೆದಿದೆ.

ಅಕ್ಷಯ್​ ಕುಮಾರ್​ ಸಿನಿಮಾದ 14 ಸೆಕೆಂಡ್​ ದೃಶ್ಯ ಬ್ಲರ್​ ಮಾಡಲು ಸೂಚಿಸಿದ ಸೆನ್ಸಾರ್​ ಮಂಡಳಿ
ಅಕ್ಷಯ್​ ಕುಮಾರ್​, ಟೈಗರ್​ ಶ್ರಾಫ್​
Follow us
ಮದನ್​ ಕುಮಾರ್​
|

Updated on: Apr 04, 2024 | 4:06 PM

ಬಾಲಿವುಡ್​ನ ಆ್ಯಕ್ಷನ್​ ಹೀರೋಗಳಾದ ಅಕ್ಷಯ್​ ಕುಮಾರ್​ (Akshay Kumar) ಮತ್ತು ಟೈಗರ್​ ಶ್ರಾಫ್​ ಅವರು ಜೊತೆಯಾಗಿ ನಟಿಸಿರುವ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಈಗ ಸೆನ್ಸಾರ್​ ಪ್ರಕ್ರಿಯೆ ಕೂಡ ಮುಗಿದಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ಈ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ನೀಡಿದ್ದಾರೆ. ‘ಬಡೆ ಮಿಯಾ ಚೋಟೆ ಮಿಯಾ’ (Bade Miyan Chote Miyan) ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳು ಇರಲಿವೆ. ಒಟ್ಟಾರೆ ಸಿನಿಮಾದಲ್ಲಿ ಬರುವ 14 ಸೆಕೆಂಡ್​ನ ದೃಶ್ಯವನ್ನು ಬ್ಲರ್​ ಮಾಡುವಂತೆ ಸೆನ್ಸಾರ್​ ಮಂಡಳಿ (Censor Board) ಸದಸ್ಯರು ಸೂಚನೆ ನೀಡಿದ್ದಾರೆ ಎಂದು ವರದಿ ಆಗಿದೆ.

ಏಪ್ರಿಲ್ 10ರಂದು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಬಿಡುಗಡೆ ಆಗಲಿದೆ. ಈದ್​ ಹಬ್ಬದ ರಜೆಯ ಲಾಭ ಪಡೆಯಲು ಅಕ್ಷಯ್​ ಕುಮಾರ್ ಮತ್ತು ಟೈಗರ್​ ಶ್ರಾಫ್​ ತಯಾರಾಗಿದ್ದಾರೆ. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಅಲಿ ಅಬ್ಬಾಸ್​ ಜಫರ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರದ ಟ್ರೇಲರ್​ ಗಮನ ಸೆಳೆದಿದೆ.

ಇದನ್ನೂ ಓದಿ: ಕೌಟುಂಬಿಕ ಚಿತ್ರದಲ್ಲೂ ಕೆಟ್ಟ ಬೈಗುಳ? ‘ಫ್ಯಾಮಿಲಿ ಸ್ಟಾರ್​’ಗೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ

ಸೆನ್ಸಾರ್​ ಮಂಡಳಿ ಸೂಚಿಸಿದ ಕಡೆ ಕತ್ತರಿ ಹಾಕಿದ ಬಳಿಕ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ಒಟ್ಟು ಅವಧಿ 2 ಗಂಟೆ 44 ನಿಮಿಷ ಆಗಿದೆ. ಸೆನ್ಸಾರ್ ಅಧಿಕಾರಿಗಳ ಸೂಚನೆ ಮೇರೆಗೆ ಸಿನಿಮಾದಲ್ಲಿ ಬರುವ ಕೆಲವು ಬ್ರ್ಯಾಂಡ್​ ಹೆಸರುಗಳನ್ನು ಬದಲಾಯಿಸಲಾಗಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಅಕ್ಷಯ್​ ಕುಮಾರ್​ ಅವರಿಗೆ ಈ ಚಿತ್ರದಿಂದ ಗೆಲ್ಲಬೇಕಾದ ಅನಿವಾರ್ಯತೆ ಇದೆ.

‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ವಿಲನ್​ ಆಗಿ ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ನಟಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ, ವಿವಿಧ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಸೈನ್ಸ್​ ಫಿಕ್ಷನ್​ ಅಂಶಗಳು ಕೂಡ ಈ ಚಿತ್ರದ ಕಥೆಯಲ್ಲಿ ಇರಲಿವೆ. ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್​ ಮೊದಲಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ