AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಕುಮಾರ್​ ಸಿನಿಮಾದ 14 ಸೆಕೆಂಡ್​ ದೃಶ್ಯ ಬ್ಲರ್​ ಮಾಡಲು ಸೂಚಿಸಿದ ಸೆನ್ಸಾರ್​ ಮಂಡಳಿ

ಏ.10ರಂದು ‘ಬಡೆ ಮಿಯಾ ಚೋಟೆ ಮಿಯಾ’ ಚಿತ್ರ ರಿಲೀಸ್​ ಆಗಲಿದೆ. ಈದ್​ ಹಬ್ಬದ ರಜೆಯ ಲಾಭ ಪಡೆಯಲು ಅಕ್ಷಯ್​ ಕುಮಾರ್ ಹಾಗೂ ಟೈಗರ್​ ಶ್ರಾಫ್​ ತಯಾರಾಗಿದ್ದಾರೆ. ಈ ಸಿನಿಮಾಗೆ ಮೊದಲ ದಿನ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈಗಾಗಲೇ ಸಿನಿಮಾದ ಟ್ರೇಲರ್​ ಗಮನ ಸೆಳೆದಿದೆ.

ಅಕ್ಷಯ್​ ಕುಮಾರ್​ ಸಿನಿಮಾದ 14 ಸೆಕೆಂಡ್​ ದೃಶ್ಯ ಬ್ಲರ್​ ಮಾಡಲು ಸೂಚಿಸಿದ ಸೆನ್ಸಾರ್​ ಮಂಡಳಿ
ಅಕ್ಷಯ್​ ಕುಮಾರ್​, ಟೈಗರ್​ ಶ್ರಾಫ್​
ಮದನ್​ ಕುಮಾರ್​
|

Updated on: Apr 04, 2024 | 4:06 PM

Share

ಬಾಲಿವುಡ್​ನ ಆ್ಯಕ್ಷನ್​ ಹೀರೋಗಳಾದ ಅಕ್ಷಯ್​ ಕುಮಾರ್​ (Akshay Kumar) ಮತ್ತು ಟೈಗರ್​ ಶ್ರಾಫ್​ ಅವರು ಜೊತೆಯಾಗಿ ನಟಿಸಿರುವ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಈಗ ಸೆನ್ಸಾರ್​ ಪ್ರಕ್ರಿಯೆ ಕೂಡ ಮುಗಿದಿದೆ. ಸಿನಿಮಾ ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರು ಈ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ನೀಡಿದ್ದಾರೆ. ‘ಬಡೆ ಮಿಯಾ ಚೋಟೆ ಮಿಯಾ’ (Bade Miyan Chote Miyan) ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳು ಇರಲಿವೆ. ಒಟ್ಟಾರೆ ಸಿನಿಮಾದಲ್ಲಿ ಬರುವ 14 ಸೆಕೆಂಡ್​ನ ದೃಶ್ಯವನ್ನು ಬ್ಲರ್​ ಮಾಡುವಂತೆ ಸೆನ್ಸಾರ್​ ಮಂಡಳಿ (Censor Board) ಸದಸ್ಯರು ಸೂಚನೆ ನೀಡಿದ್ದಾರೆ ಎಂದು ವರದಿ ಆಗಿದೆ.

ಏಪ್ರಿಲ್ 10ರಂದು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ಬಿಡುಗಡೆ ಆಗಲಿದೆ. ಈದ್​ ಹಬ್ಬದ ರಜೆಯ ಲಾಭ ಪಡೆಯಲು ಅಕ್ಷಯ್​ ಕುಮಾರ್ ಮತ್ತು ಟೈಗರ್​ ಶ್ರಾಫ್​ ತಯಾರಾಗಿದ್ದಾರೆ. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಅಲಿ ಅಬ್ಬಾಸ್​ ಜಫರ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರದ ಟ್ರೇಲರ್​ ಗಮನ ಸೆಳೆದಿದೆ.

ಇದನ್ನೂ ಓದಿ: ಕೌಟುಂಬಿಕ ಚಿತ್ರದಲ್ಲೂ ಕೆಟ್ಟ ಬೈಗುಳ? ‘ಫ್ಯಾಮಿಲಿ ಸ್ಟಾರ್​’ಗೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ

ಸೆನ್ಸಾರ್​ ಮಂಡಳಿ ಸೂಚಿಸಿದ ಕಡೆ ಕತ್ತರಿ ಹಾಕಿದ ಬಳಿಕ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದ ಒಟ್ಟು ಅವಧಿ 2 ಗಂಟೆ 44 ನಿಮಿಷ ಆಗಿದೆ. ಸೆನ್ಸಾರ್ ಅಧಿಕಾರಿಗಳ ಸೂಚನೆ ಮೇರೆಗೆ ಸಿನಿಮಾದಲ್ಲಿ ಬರುವ ಕೆಲವು ಬ್ರ್ಯಾಂಡ್​ ಹೆಸರುಗಳನ್ನು ಬದಲಾಯಿಸಲಾಗಿದೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಅಕ್ಷಯ್​ ಕುಮಾರ್​ ಅವರಿಗೆ ಈ ಚಿತ್ರದಿಂದ ಗೆಲ್ಲಬೇಕಾದ ಅನಿವಾರ್ಯತೆ ಇದೆ.

‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ವಿಲನ್​ ಆಗಿ ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್​ ಸುಕುಮಾರನ್​ ಅವರು ನಟಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ, ವಿವಿಧ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಸೈನ್ಸ್​ ಫಿಕ್ಷನ್​ ಅಂಶಗಳು ಕೂಡ ಈ ಚಿತ್ರದ ಕಥೆಯಲ್ಲಿ ಇರಲಿವೆ. ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್​ ಮೊದಲಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್