AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲಿನ ಬೆನ್ನಲ್ಲೇ ಹಾದಿ ಬದಲಿಸಿದ ನಟ ಅಕ್ಷಯ್ ಕುಮಾರ್; ಹೊಸ ಚಿತ್ರಕ್ಕೆ ಹಳೆಯ ಥಿಯರಿ

ನೂರಾರು ಕೋಟಿ ಬಜೆಟ್​ನಲ್ಲಿ ರೆಡಿ ಆದ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡಲಿಲ್ಲ. ಇದರಿಂದ ನಿರ್ಮಾಪಕರಿಗೆ ನಷ್ಟ ಉಂಟಾಗಿದೆ. ಹೀಗಾಗಿ, ಹಳೆಯ ಥಿಯರಿ ಫಾಲೋ ಮಾಡಲು ಅಕ್ಷಯ್ ಕುಮಾರ್ ಮುಂದಾಗಿದ್ದಾರೆ.

ಸತತ ಸೋಲಿನ ಬೆನ್ನಲ್ಲೇ ಹಾದಿ ಬದಲಿಸಿದ ನಟ ಅಕ್ಷಯ್ ಕುಮಾರ್; ಹೊಸ ಚಿತ್ರಕ್ಕೆ ಹಳೆಯ ಥಿಯರಿ
ಅಕ್ಷಯ್ ಕುಮಾರ್
TV9 Web
| Edited By: |

Updated on: Jun 21, 2022 | 6:59 AM

Share

ಅಕ್ಷಯ್ ಕುಮಾರ್ ಅವರು ಬಾಲಿವುಡ್​ನ (Bollywood) ಖ್ಯಾತ ನಾಮರಲ್ಲಿ ಒಬ್ಬರು. ಅವರ ಸಿನಿಮಾಗಳಿಗೆ ದುಡ್ಡು ಹಾಕಿದರೆ ಲಾಸ್ ಆಗುವುದೇ ಇಲ್ಲ ಎನ್ನುವ ಕಾಲ ಒಂದು ಇತ್ತು. ಆದರೆ, ಇತ್ತೀಚೆಗೆ ಈ ಥಿಯರಿ ಯಾಕೋ ಕೆಲಸ ಮಾಡುತ್ತಿಲ್ಲ. ಅಕ್ಷಯ್ ಕುಮಾರ್(Akshay Kumar) ಸಿನಿಮಾಗಳು ಸತತ ಸೋಲು ಕಾಣುತ್ತಿವೆ. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡ ಚಿತ್ರಗಳು ಕೆಲವೇ ಕೋಟಿ ಕಲೆಕ್ಷನ್ ಮಾಡಿ ಪ್ರದರ್ಶನ ನಿಲ್ಲಿಸುತ್ತಿವೆ. ಇದು ನಿರ್ಮಾಪಕರ ಚಿಂತೆಗೆ ಕಾರಣವಾಗಿದೆ. ಈಗ ಸತತ ಸೋಲಿನ ಬೆನ್ನಲ್ಲೇ ಅಕ್ಷಯ್ ಟ್ರ್ಯಾಕ್ ಬದಲಿಸಿದ್ದಾರೆ. ಈ ಮೊದಲು ಗೆಲುವು ಕಂಡಿದ್ದ ಸಿನಿಮಾಗಳ ರೀತಿಯ ಪ್ರಾಜೆಕ್ಟ್​​ಗಳನ್ನು ಅವರು ಒಪ್ಪಿಕೊಳ್ಳಲು ಮುಂದಾಗಿದ್ದಾರೆ.

ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆದ ಅಕ್ಷಯ್ ಕುಮಾರ್ ನಟನೆಯ ‘ಅತ್ರಂಗಿ ರೇ’ ವಿಮರ್ಶಕರಿಂದ ನೆಗೆಟಿವ್ ವಿಮರ್ಶೆ ಪಡೆಯಿತು. ಚಿತ್ರಮಂದಿರದಲ್ಲಿ ರಿಲೀಸ್ ಆದ ‘ಬಚ್ಚನ್​ ಪಾಂಡೆ’ ಸಿನಿಮಾ ಸೋಲು ಕಂಡಿತು. ನೂರಾರು ಕೋಟಿ ಬಜೆಟ್​ನಲ್ಲಿ ರೆಡಿ ಆದ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡಲಿಲ್ಲ. ಇದರಿಂದ ನಿರ್ಮಾಪಕರಿಗೆ ನಷ್ಟ ಉಂಟಾಗಿದೆ. ಹೀಗಾಗಿ, ಹಳೆಯ ಥಿಯರಿ ಫಾಲೋ ಮಾಡಲು ಅಕ್ಷಯ್ ಕುಮಾರ್ ಮುಂದಾಗಿದ್ದಾರೆ.

ಈಗಾಗಲೇ ಅಕ್ಷಯ್ ಕುಮಾರ್ ಅವರು ಸೇನಾಧಿಕಾರಿ ಹಾಗೂ ನೌಕಾಪಡೆಯ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ಜನರು ಇಷ್ಟಪಟ್ಟಿದ್ದರು. ಈ ಬಾರಿ ಅವರು ವಾಯುಪಡೆಯ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ನೈಜ ಘಟನೆ ಆಧಾರಿತ ಸಿನಿಮಾ ಅನ್ನೋದು ವಿಶೇಷ.

ಇದನ್ನೂ ಓದಿ
Image
Akshay Kumar: ‘ಗುಟ್ಕಾ ತಿಂದರೂ ಅಕ್ಷಯ್​ ಕುಮಾರ್​ ಇಷ್ಟೊಂದು ಫಿಟ್​’: ಲೇವಡಿ ಮಾಡಿದ ನೆಟ್ಟಿಗರು
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ

ಇದನ್ನೂ ಓದಿ: ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’

‘ಸ್ತ್ರೀ’ ನಿರ್ದೇಶಕ ದಿನೇಶ್​ ವಿಜನ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರ 2023ರ ಮೊದಲಾರ್ಧದಲ್ಲಿ ಸೆಟ್ಟೇರಲಿದೆ. ಈಗಾಗಲೇ ಅಕ್ಷಯ್ ಕುಮಾರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಮುಂದಿನ ವರ್ಷ ಈ ಚಿತ್ರದ ಕೆಲಸ ಆರಂಭಿಸಲಿದ್ದಾರೆ. ಭಾರತೀಯ ವಾಯುಪಡೆಯಲ್ಲಿ ಕಾರ್ಯ ನಿರ್ವಹಿಸಿದ ದಕ್ಷ ಅಧಿಕಾರಿಯ ಕಥೆ ಇದಾಗಿರಲಿದೆ ಎಂಬ ಮಾಹಿತಿಯಷ್ಟೇ ಸದ್ಯ ರಿವೀಲ್ ಆಗಿದೆ.

ಅಕ್ಷಯ್ ಕುಮಾರ್ ನಟನೆಯ ‘ರಕ್ಷಾ ಬಂಧನ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅದಾದ ಬಳಿಕ ‘ರಾಮ್ ಸೇತು’ ಸಿನಿಮಾ ತೆರೆಗೆ ಬರಲಿದೆ.   ಇನ್ನೂ ಹಲವು ಚಿತ್ರಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು