ಸತತ ಸೋಲಿನ ಬೆನ್ನಲ್ಲೇ ಹಾದಿ ಬದಲಿಸಿದ ನಟ ಅಕ್ಷಯ್ ಕುಮಾರ್; ಹೊಸ ಚಿತ್ರಕ್ಕೆ ಹಳೆಯ ಥಿಯರಿ

ನೂರಾರು ಕೋಟಿ ಬಜೆಟ್​ನಲ್ಲಿ ರೆಡಿ ಆದ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡಲಿಲ್ಲ. ಇದರಿಂದ ನಿರ್ಮಾಪಕರಿಗೆ ನಷ್ಟ ಉಂಟಾಗಿದೆ. ಹೀಗಾಗಿ, ಹಳೆಯ ಥಿಯರಿ ಫಾಲೋ ಮಾಡಲು ಅಕ್ಷಯ್ ಕುಮಾರ್ ಮುಂದಾಗಿದ್ದಾರೆ.

ಸತತ ಸೋಲಿನ ಬೆನ್ನಲ್ಲೇ ಹಾದಿ ಬದಲಿಸಿದ ನಟ ಅಕ್ಷಯ್ ಕುಮಾರ್; ಹೊಸ ಚಿತ್ರಕ್ಕೆ ಹಳೆಯ ಥಿಯರಿ
ಅಕ್ಷಯ್ ಕುಮಾರ್
Edited By:

Updated on: Jun 21, 2022 | 6:59 AM

ಅಕ್ಷಯ್ ಕುಮಾರ್ ಅವರು ಬಾಲಿವುಡ್​ನ (Bollywood) ಖ್ಯಾತ ನಾಮರಲ್ಲಿ ಒಬ್ಬರು. ಅವರ ಸಿನಿಮಾಗಳಿಗೆ ದುಡ್ಡು ಹಾಕಿದರೆ ಲಾಸ್ ಆಗುವುದೇ ಇಲ್ಲ ಎನ್ನುವ ಕಾಲ ಒಂದು ಇತ್ತು. ಆದರೆ, ಇತ್ತೀಚೆಗೆ ಈ ಥಿಯರಿ ಯಾಕೋ ಕೆಲಸ ಮಾಡುತ್ತಿಲ್ಲ. ಅಕ್ಷಯ್ ಕುಮಾರ್(Akshay Kumar) ಸಿನಿಮಾಗಳು ಸತತ ಸೋಲು ಕಾಣುತ್ತಿವೆ. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡ ಚಿತ್ರಗಳು ಕೆಲವೇ ಕೋಟಿ ಕಲೆಕ್ಷನ್ ಮಾಡಿ ಪ್ರದರ್ಶನ ನಿಲ್ಲಿಸುತ್ತಿವೆ. ಇದು ನಿರ್ಮಾಪಕರ ಚಿಂತೆಗೆ ಕಾರಣವಾಗಿದೆ. ಈಗ ಸತತ ಸೋಲಿನ ಬೆನ್ನಲ್ಲೇ ಅಕ್ಷಯ್ ಟ್ರ್ಯಾಕ್ ಬದಲಿಸಿದ್ದಾರೆ. ಈ ಮೊದಲು ಗೆಲುವು ಕಂಡಿದ್ದ ಸಿನಿಮಾಗಳ ರೀತಿಯ ಪ್ರಾಜೆಕ್ಟ್​​ಗಳನ್ನು ಅವರು ಒಪ್ಪಿಕೊಳ್ಳಲು ಮುಂದಾಗಿದ್ದಾರೆ.

ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆದ ಅಕ್ಷಯ್ ಕುಮಾರ್ ನಟನೆಯ ‘ಅತ್ರಂಗಿ ರೇ’ ವಿಮರ್ಶಕರಿಂದ ನೆಗೆಟಿವ್ ವಿಮರ್ಶೆ ಪಡೆಯಿತು. ಚಿತ್ರಮಂದಿರದಲ್ಲಿ ರಿಲೀಸ್ ಆದ ‘ಬಚ್ಚನ್​ ಪಾಂಡೆ’ ಸಿನಿಮಾ ಸೋಲು ಕಂಡಿತು. ನೂರಾರು ಕೋಟಿ ಬಜೆಟ್​ನಲ್ಲಿ ರೆಡಿ ಆದ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡಲಿಲ್ಲ. ಇದರಿಂದ ನಿರ್ಮಾಪಕರಿಗೆ ನಷ್ಟ ಉಂಟಾಗಿದೆ. ಹೀಗಾಗಿ, ಹಳೆಯ ಥಿಯರಿ ಫಾಲೋ ಮಾಡಲು ಅಕ್ಷಯ್ ಕುಮಾರ್ ಮುಂದಾಗಿದ್ದಾರೆ.

ಈಗಾಗಲೇ ಅಕ್ಷಯ್ ಕುಮಾರ್ ಅವರು ಸೇನಾಧಿಕಾರಿ ಹಾಗೂ ನೌಕಾಪಡೆಯ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ಜನರು ಇಷ್ಟಪಟ್ಟಿದ್ದರು. ಈ ಬಾರಿ ಅವರು ವಾಯುಪಡೆಯ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ನೈಜ ಘಟನೆ ಆಧಾರಿತ ಸಿನಿಮಾ ಅನ್ನೋದು ವಿಶೇಷ.

ಇದನ್ನೂ ಓದಿ
Akshay Kumar: ‘ಗುಟ್ಕಾ ತಿಂದರೂ ಅಕ್ಷಯ್​ ಕುಮಾರ್​ ಇಷ್ಟೊಂದು ಫಿಟ್​’: ಲೇವಡಿ ಮಾಡಿದ ನೆಟ್ಟಿಗರು
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ

ಇದನ್ನೂ ಓದಿ: ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’

‘ಸ್ತ್ರೀ’ ನಿರ್ದೇಶಕ ದಿನೇಶ್​ ವಿಜನ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರ 2023ರ ಮೊದಲಾರ್ಧದಲ್ಲಿ ಸೆಟ್ಟೇರಲಿದೆ. ಈಗಾಗಲೇ ಅಕ್ಷಯ್ ಕುಮಾರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಕಾರಣಕ್ಕೆ ಅವರು ಮುಂದಿನ ವರ್ಷ ಈ ಚಿತ್ರದ ಕೆಲಸ ಆರಂಭಿಸಲಿದ್ದಾರೆ. ಭಾರತೀಯ ವಾಯುಪಡೆಯಲ್ಲಿ ಕಾರ್ಯ ನಿರ್ವಹಿಸಿದ ದಕ್ಷ ಅಧಿಕಾರಿಯ ಕಥೆ ಇದಾಗಿರಲಿದೆ ಎಂಬ ಮಾಹಿತಿಯಷ್ಟೇ ಸದ್ಯ ರಿವೀಲ್ ಆಗಿದೆ.

ಅಕ್ಷಯ್ ಕುಮಾರ್ ನಟನೆಯ ‘ರಕ್ಷಾ ಬಂಧನ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಅದಾದ ಬಳಿಕ ‘ರಾಮ್ ಸೇತು’ ಸಿನಿಮಾ ತೆರೆಗೆ ಬರಲಿದೆ.   ಇನ್ನೂ ಹಲವು ಚಿತ್ರಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.