ಹೀರೋ ಆಗಿ ಸಿಗುತ್ತಿಲ್ಲ ಯಶಸ್ಸು; ವಿಲನ್ ಪಾತ್ರ ಒಪ್ಪಿಕೊಂಡ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದ್ದ ಕಾಲ ಒಂದಿತ್ತು. ಆದರೆ, ಈಗ ಕಾಲ ಬದಲಾಗಿದೆ. ಅವರಿಗೆ ಕಷ್ಟದ ಸಮಯ ಬಂದಿದೆ. ಮಾಡಿದ ಸಿನಿಮಾಗಳೆಲ್ಲವೂ ಫ್ಲಾಪ್ ಸಾಲಿಗೆ ಸೇರುತ್ತಿವೆ. ಈ ವರ್ಷ ಅವರ ನಟನೆಯ 3 ಸಿನಿಮಾಗಳು ರಿಲೀಸ್ ಆಗಿವೆ. ಈ ಮೂರು ಚಿತ್ರಗಳು ಫ್ಲಾಪ್ ಎನಿಸಿಕೊಂಡಿವೆ. ಈಗ ಅವರು ವಿಲನ್ ಪಾತ್ರ ಒಪ್ಪಿಕೊಂಡಿದ್ದಾರೆ.

ಹೀರೋ ಆಗಿ ಸಿಗುತ್ತಿಲ್ಲ ಯಶಸ್ಸು; ವಿಲನ್ ಪಾತ್ರ ಒಪ್ಪಿಕೊಂಡ ಅಕ್ಷಯ್ ಕುಮಾರ್
ಅಕ್ಷಯ್
Follow us
|

Updated on: Aug 26, 2024 | 12:07 PM

ಅಕ್ಷಯ್ ಕುಮಾರ್ ಅವರಿಗೆ ಹೀರೋ ಆಗಿ ಯಶಸ್ಸು ಸಿಗುತ್ತಿಲ್ಲ. ಅವರು ಮಾಡಿದ ಸಾಲು ಸಾಲು ಸಿನಿಮಾಗಳು ಫ್ಲಾಪ್ ಆಗುತ್ತಿವೆ. ಈ ಕಾರಣಕ್ಕೆ ಅವರು ವಿಲನ್ ಆಗಲು ಹೊರಟಿದ್ದಾರೆ. ಹೌದು, ಅಕ್ಷಯ್ ಕುಮಾರ್ ಹಿಂದಿಯ ‘ಸ್ತ್ರೀ 3’ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ‘ಸ್ತ್ರೀ 2’ ಚಿತ್ರದ ಕ್ಲೈಮ್ಯಾಕ್ಸ್ ನೋಡಿದ ಅನೇಕರಿಗೆ ಹೀಗೊಂದು ಅನುಮಾನ ಶುರುವಾಗಿದೆ.

‘ಸ್ತ್ರೀ’ ಸಿನಿಮಾ 2018ರಲ್ಲಿ ರಿಲೀಸ್ ಆಗಿತ್ತು. ಅದರ ಮುಂದುವರಿದ ಭಾಗವಾಗಿ ‘ಸ್ತ್ರೀ 2’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಸರ್ಕಟ್ ಹೆಸರಿನ ದೆವ್ವದ ಪಾತ್ರ ಗಮನ ಸೆಳೆದಿದೆ. (Spoiler Alert: ಸ್ತ್ರೀ 2 ಸಿನಿಮಾ ಇನ್ನೂ ನೋಡಿಲ್ಲ ಎಂದಾದರೆ ಮುಂದೆ ಓದಬೇಡಿ). ‘ಸ್ತ್ರೀ 2’ ಸಿನಿಮಾ ಕ್ಲೈಮ್ಯಾಕ್ಸ್​​ನಲ್ಲಿ ಸರ್ಕಟ್​ನ ಆತ್ಮ ಅಕ್ಷಯ್ ಕುಮಾರ್ ದೇಹ ಸೇರುತ್ತದೆ. ಈ ಮೂಲಕ ಅಕ್ಷಯ್ ಕುಮಾರ್ ಅವರ ಪಾತ್ರ ಬದಲಾಗುತ್ತದೆ. ಈ ರೀತಿಯಲ್ಲಿ ‘ಸ್ತ್ರೀ 2’ ಕ್ಲೈಮ್ಯಾಕ್ಸ್ ಇದೆ. ‘ಸ್ತ್ರೀ 2’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿರೋ ಅಕ್ಷಯ್ ಮೂರನೇ ಪಾರ್ಟ್​ನಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಸ್ತ್ರೀ 3’ ಸಿನಿಮಾಗೆ ಈಗಾಗಲೇ ಸ್ಕ್ರಿಪ್ಟ್ ಬರೆಯಲಾಗಿದೆ ಎಂದು ‘ಸ್ತ್ರೀ 2’ ನಿರ್ದೇಶಕ ಅಮರ್ ಕೌಶಿಕ್ ಅವರು ಈ ಮೊದಲು ಘೋಷಣೆ ಮಾಡಿದ್ದರು. ‘ಸ್ತ್ರೀ’ ಸಿನಿಮಾ 2018ರಲ್ಲಿ ರಿಲೀಸ್ ಆಗಿತ್ತು. ‘ಸ್ತ್ರೀ 2’ ಸಿನಿಮಾ ರಿಲೀಸ್ ಆಗೋಕೆ ಆರು ವರ್ಷಗಳು ಬೇಕಾದವು. ಈಗ ಮೂರನೇ ಪಾರ್ಟ್​ಗೆ ಅಷ್ಟೊಂದು ಸಮಯ ಹಿಡಿಯವುದಿಲ್ಲ ಎಂದು ನಿರ್ದೇಶಕರು ಹೇಳಿದ್ದಾರೆ.

ಇದನ್ನೂ ಓದಿ: ಅಕ್ಷಯ್ ಕುಮಾರ್ ಸಿನಿಮಾ ಆಯ್ಕೆ ಬಗ್ಗೆ ಆಪ್ತರಿಂದಲೇ ಮೂಡಿದೆ ಪ್ರಶ್ನೆ; ಬೇಸರ ಹೊರಹಾಕಿದ ನಟ

‘ಸ್ತ್ರೀ 2’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 11 ದಿನಕ್ಕೆ 384 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಹಾರರ್ ಶೈಲಿಯಲ್ಲಿ ಮೂಡಿ ಬಂದ ಈ ಸಿನಿಮಾ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಈ ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ‘ಸ್ತ್ರೀ 2’ ಚಿತ್ರದಲ್ಲಿ ಭರ್ಜರಿ ಹಾಸ್ಯ ಇದೆ. ಇದು ಸಿನಿಮಾಗೆ ಸಹಕಾರಿ ಆಗಿದೆ. ಹಾರರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ