Akshay Kumar: ‘ಗುಟ್ಕಾ ತಿಂದರೂ ಅಕ್ಷಯ್​ ಕುಮಾರ್​ ಇಷ್ಟೊಂದು ಫಿಟ್​’: ಲೇವಡಿ ಮಾಡಿದ ನೆಟ್ಟಿಗರು

Akshay Kumar Troll: ಅಕ್ಷಯ್​ ಕುಮಾರ್​ ಏನೇ ಮಾಡಿದರೂ ನೆಟ್ಟಿಗರು ವಿಮಲ್​ ಜಾಹೀರಾತನ್ನು ನೆನಪಿಸಿಕೊಳ್ಳುತ್ತಾರೆ. ಆ ಮೂಲಕ ಅವರನ್ನು ಸಿಕ್ಕಾಪಟ್ಟೆ ಟ್ರೋಲ್​ ಮಾಡುತ್ತಾರೆ.

Akshay Kumar: ‘ಗುಟ್ಕಾ ತಿಂದರೂ ಅಕ್ಷಯ್​ ಕುಮಾರ್​ ಇಷ್ಟೊಂದು ಫಿಟ್​’: ಲೇವಡಿ ಮಾಡಿದ ನೆಟ್ಟಿಗರು
ಅಕ್ಷಯ್ ಕುಮಾರ್
Follow us
| Updated By: ಮದನ್​ ಕುಮಾರ್​

Updated on:Jun 20, 2022 | 8:08 AM

ಖ್ಯಾತ ನಟ ಅಕ್ಷಯ್​ ಕುಮಾರ್​ (Akshay Kumar) ಅವರಿಗೆ ಈಗ 54 ವರ್ಷ ವಯಸ್ಸು. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಫಿಟ್ನೆಸ್​ ಬಗ್ಗೆ ಅವರಿಗೆ ಹೆಚ್ಚು ಕಾಳಜಿ ಇದೆ. ಪ್ರತಿ ದಿನ ಮುಂಜಾನೆ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಶಿಸ್ತಿನ ಜೀವನಕ್ಕೆ ಅವರು ಹೆಸರಾಗಿದ್ದಾರೆ. ಇತ್ತೀಚೆಗೆ ಅವರು ಮುಂಬೈ ಪೊಲೀಸರ ಜೊತೆ ಸೇರಿ ಒಂದು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಬೆಳ್ಳಂಬೆಳಗ್ಗೆ ರನ್ನಿಂಗ್​ ಮಾಡಿದರು. ಸೈಕ್ಲಿಂಗ್​ ಮಾಡಿಯೂ ಗಮನ ಸೆಳೆದರು. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅಕ್ಷಯ್​ ಕುಮಾರ್​ ಅವರ ಫಿಟ್ನೆಸ್ (Fitness)​ ಕಂಡು ಅನೇಕ ಅಭಿಮಾನಿಗಳು ಭೇಷ್​ ಎಂದಿದ್ದಾರೆ. ಅದರ ಜೊತೆಗೆ ಒಂದಷ್ಟು ಮಂದಿ ಟ್ರೋಲ್​ ಮಾಡಿದ್ದಾರೆ ಕೂಡ. ಹೌದು, ವಿಮಲ್​ ಜಾಹೀರಾತಿನಲ್ಲಿ ಕಾಣಿಸಿಕೊಂಡ ಕಾರಣಕ್ಕಾಗಿ ಅಕ್ಷಯ್​ ಕುಮಾರ್​​ ಅವರ ಬಗ್ಗೆ ವ್ಯಂಗ್ಯ ಮಾಡಲಾಗಿದೆ. ‘ಗುಟ್ಕಾ (Gutka) ತಿಂದರೂ ಇಷ್ಟೊಂದು ಫಿಟ್​ ಆಗಿದ್ದಾರೆ’ ಎಂಬ ಕಮೆಂಟ್​ಗಳು ಬಂದಿವೆ.

ಜಾಹೀರಾತುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಸೆಲೆಬ್ರಿಟಿಗಳು ಹೆಚ್ಚು ಎಚ್ಚರಿಕೆ ವಹಿಸಬೇಕು. ಈಗಾಗಲೇ ಶಾರುಖ್​ ಖಾನ್​ ಮತ್ತು ಅಜಯ್​ ದೇವಗನ್​ ಅವರು ವಿಮಲ್​ ಜಾಹೀರಾತಿನಲ್ಲಿ ನಟಿಸಿ ಟೀಕೆಗೆ ಗುರಿ ಆಗಿದ್ದಾರೆ. ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುವಂತಹ ಅಕ್ಷಯ್​ ಕುಮಾರ್ ಅವರು ಕೂಡ ಈ ಜಾಹೀರಾತಿನಲ್ಲಿ ನಟಿಸಿದ್ದು ಅನೇಕರಿಗೆ ಸಹಿಸಲು ಸಾಧ್ಯವಾಗಿಲ್ಲ. ಹಾಗಾಗಿ ಪ್ರತಿ ಬಾರಿಯೂ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ.

ಇದನ್ನೂ ಓದಿ: Akshay Kumar: ‘ರಾಮ್​ ಸೇತು’ ಬಗ್ಗೆ ಹಬ್ಬಿದ್ದ ಗಾಸಿಪ್​ಗೆ ಕಡೆಗೂ ಸಿಕ್ಕಿತು ಸ್ಪಷ್ಟನೆ; ಅಕ್ಷಯ್​ ಕುಮಾರ್​ ಫ್ಯಾನ್ಸ್​ಗೆ ಸಂತಸ

ಇದನ್ನೂ ಓದಿ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

ಇನ್ಮುಂದೆ ಇಂಥ ಜಾಹೀರಾತುಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಅಕ್ಷಯ್​ ಕುಮಾರ್​ ಈಗಾಗಲೇ ಭರವಸೆ ನೀಡಿದ್ದಾರೆ. ಹಾಗಿದ್ದರೂ ಕೂಡ ಅವರಿಗೆ ಟ್ರೋಲ್​ ಕಾಟ ತಪ್ಪುತ್ತಿಲ್ಲ. ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಅಕ್ಷಯ್​ ಕುಮಾರ್​ ಅವರಿಗೆ ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಸಿಗುತ್ತಿಲ್ಲ. ಅವರು ನಟಿಸಿದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಮೋಡಿ ಮಾಡಿಲ್ಲ. ಅದಕ್ಕೂ ಮುನ್ನ ತೆರೆಕಂಡಿದ್ದ ‘ಬಚ್ಚನ್​ ಪಾಂಡೆ’ ಸಿನಿಮಾ ಕೂಡ ಹೇಳಿಕೊಳ್ಳುವಷ್ಟು ಕಲೆಕ್ಷನ್​ ಮಾಡಿಲ್ಲ.

ಇದನ್ನೂ ಓದಿ: ಹಿಂಗೂ ಕಟ್ಟಿ ಹಾಕ್ತಾರಾ? ಸಿಲ್ಲಿ ಕಾರಣಕ್ಕೆ ಸಖತ್​ ಟ್ರೋಲ್​ ಆದ ಅಕ್ಷಯ್​ ಕುಮಾರ್​ ಚಿತ್ರ ‘ಸಾಮ್ರಾಟ್​ ಪೃಥ್ವಿರಾಜ್​’

ಸಾಲು ಸಾಲು ಸಿನಿಮಾಗಳಲ್ಲಿ ಅಕ್ಷಯ್​ ಕುಮಾರ್​ ನಟಿಸುತ್ತಿದ್ದಾರೆ. ಆಗಸ್ಟ್​ 11ರಂದು ‘ರಕ್ಷಾ ಬಂಧನ್​’ ಚಿತ್ರ ತೆರೆ ಕಾಣಲಿದೆ. ಆ ಬಳಿಕ ‘ರಾಮ್​ ಸೇತು’ ಸಿನಿಮಾ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:08 am, Mon, 20 June 22

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ