AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಸರ್ಜರಿಗೆ ಒಳಗಾದ ಅಕ್ಷಯ್ ಕುಮಾರ್; ಅಂಥದ್ದೇನಾಯ್ತು?

ಬಾಲಿವುಡ್ ನಟ ಅಕ್ಷಯ್ ಕುಮಾರ್‌ಗೆ ಮೇ 6ರಂದು ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿದ್ದು, ಸದ್ಯ ಅವರು ಚಿತ್ರೀಕರಣದಿಂದ ವಿರಾಮ ಪಡೆದಿದ್ದಾರೆ. ಕೇರಳದಲ್ಲಿ ಅನೀಸ್ ಬಾಜ್ಮಿ ಚಿತ್ರದ ಶೂಟಿಂಗ್ ಮುಗಿದ ನಂತರ ಈ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿರುವ ಅಕ್ಷಯ್, 'ಭೂತ್ ಬಂಗ್ಲಾ' ಯಶಸ್ಸಿನ ನಂತರ ಈ ಬ್ರೇಕ್ ತೆಗೆದುಕೊಂಡಿದ್ದಾರೆ.

ಏಕಾಏಕಿ ಸರ್ಜರಿಗೆ ಒಳಗಾದ ಅಕ್ಷಯ್ ಕುಮಾರ್; ಅಂಥದ್ದೇನಾಯ್ತು?
ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on:May 07, 2026 | 9:04 AM

Share

ಬಾಲಿವುಡ್‌ನ ನಟ ಅಕ್ಷಯ್ ಕುಮಾರ್ (Akshay Kumar) ಸದಾ ಸಿನಿಮಾ ರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಒಂದು ದಿನವೂ ಬಿಡದೇ ಶೂಟ್ ಮಾಡುತ್ತಾರೆ. ಆದರೆ, ಈಗ ಅವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಸದ್ಯ ಅವರು ಚಿತ್ರೀಕರಣದಿಂದ ವಿರಾಮ ಪಡೆದಿದ್ದಾರೆ. ಪ್ರಿಯದರ್ಶನ್ ನಿರ್ದೇಶನದ ‘ಭೂತ್ ಬಂಗ್ಲಾ’ ಚಿತ್ರದ ಯಶಸ್ಸಿನ ಅಲೆಯಲ್ಲಿರುವ ಅಕ್ಷಯ್, ಒಂದು ಬ್ರೇಕ್ ಪಡೆದಿದ್ದಾರೆ. ಅನೀಸ್ ಬಾಜ್ಮಿ ನಿರ್ದೇಶನದ ಮುಂದಿನ ಚಿತ್ರದ ಶೂಟ್​​ಗೂ ಮೊದಲು ಅವರು ಈ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.

1.ಮೇ 6ರಂದು ಅಕ್ಷಯ್ ಕುಮಾರ್‌ಗೆ ಕಣ್ಣಿನ ಶಸ್ತ್ರಚಿಕಿತ್ಸೆ

2.ಕೇರಳದಲ್ಲಿ ಅನೀಸ್ ಬಾಜ್ಮಿ ಚಿತ್ರದ ಶೂಟಿಂಗ್ ಮುಕ್ತಾಯ.

3. 15 ವರ್ಷಗಳಿಂದ ಸಮೋಸಾ ತ್ಯಜಿಸಿರುವ ‘ಖಿಲಾಡಿ’ ನಟ

ಮೇ 6ರ ಬೆಳಿಗ್ಗೆ ಅಕ್ಷಯ್ ಕುಮಾರ್ ಅವರಿಗೆ ದೃಷ್ಟಿ ದೋಷ ನಿವಾರಣೆಗಾಗಿ ಸಣ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಕೇರಳದಲ್ಲಿ ನಡೆಯುತ್ತಿದ್ದ ಶೂಟಿಂಗ್ ಮುಗಿದ ಬಳಿಕೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ವೈದ್ಯರ ಸಲಹೆಯಂತೆ ಚೇತರಿಸಿಕೊಳ್ಳಲು ಅವರಿಗೆ ಕೆಲ ದಿನಗಳ ವಿಶ್ರಾಂತಿಯ ಅಗತ್ಯವಿದೆ. ಇತ್ತೀಚೆಗೆ ಕೆರಳದ ಗ್ಯಾಪ್ ರೋಡ್ ಅಲ್ಲಿ ಅವರು ಸಿನಿಮಾ ಶೂಟ್ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು.

ಶಸ್ತ್ರಚಿಕಿತ್ಸೆಗೆ ಒಂದು ದಿನ ಮೊದಲಷ್ಟೇ ಅಕ್ಷಯ್ ಕುಮಾರ್ ಅವರು ಕೇರಳದ ಶೂಟಿಂಗ್ ಪೂರ್ಣಗೊಂಡ ಬಗ್ಗೆ ಟ್ವಿಟರ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ‘ಸುಂದರವಾದ ಜಾಗದಲ್ಲಿ ಒಳ್ಳೆಯ ಜನರೊಂದಿಗೆ ಕೆಲಸ ಮಾಡುವುದು ಅದ್ಭುತ ಅನುಭವ. ನಿರ್ದೇಶಕ ಅನೀಸ್ ಬಾಜ್ಮಿ, ವಿದ್ಯಾ ಬಾಲನ್, ರಾಶಿ ಖನ್ನಾ ಮತ್ತು ಇಡೀ ತಂಡಕ್ಕೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದರು.

ತಮ್ಮ ಶಿಸ್ತುಬದ್ಧ ಜೀವನಶೈಲಿಯ ಬಗ್ಗೆ ಮಾತನಾಡಿರುವ ಅಕ್ಷಯ್ ಕುಮಾರ್, ಕಳೆದ 15 ವರ್ಷಗಳಿಂದ ತಾವು ಸಮೋಸಾವನ್ನೇ ತಿಂದಿಲ್ಲ ಎಂಬ ಕುತೂಹಲಕಾರಿ ವಿಷಯವನ್ನು ಬಿಚ್ಚಿಟ್ಟಿದ್ದರು. ಇದು ಅವರು ತಮ್ಮ ಫಿಟ್ನೆಸ್​​ಗೆ ಎಷ್ಟು ಒತ್ತು ಕೊಡುತ್ತಾರೆ ಎಂಬುದಕ್ಕೆ ಕೊಡಬಹುದಾದ ಒಳ್ಳೆಯ ಉದಾಹರಣೆ.

ಇದನ್ನೂ ಓದಿ: ಶೂಟಿಂಗ್ ವೇಳೆ ಕೆಟ್ಟದಾಗಿ ಪ್ರ್ಯಾಂಕ್ ಮಾಡಿ ನಟಿಗೆ ಆಘಾತ ಉಂಟುಮಾಡಿದ್ದ ಅಕ್ಷಯ್ ಕುಮಾರ್

ಅಕ್ಷಯ್ ಕುಮಾರ್ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಿದ್ದಾರೆ. ಅವರ ಬಳಿ ‘ವೆಲ್ಕಮ್ ಟು ದಿ ಜಂಗಲ್’, ‘ಹೈವಾನ್’ ಮತ್ತು ‘ಗೋಲ್‌ಮಾಲ್ 5’ ಚಿತ್ರಗಳು ಇವೆ. ಇತ್ತೀಚೆಗೆ ಅವರು ಬ್ಯಾಕ್​ ಟು ಬ್ಯಾಕ್ ಸೋಲು ಕಂಡಿದ್ದರು. ಅವರಿಗೆ ‘ಭೂತ್ ಬಂಗ್ಲಾ’ ಸಿನಿಮಾ ಕೊಂಚ ರಿಲೀಫ್ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:03 am, Thu, 7 May 26

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು