Akshay Kumar: ಭಾರತದ ಭೂಪಟ ತುಳಿದ ಅಕ್ಷಯ್​ ಕುಮಾರ್​; ವೈರಲ್​ ವಿಡಿಯೋ ನೋಡಿ ತರಾಟೆಗೆ ತೆಗೆದುಕೊಂಡ ನೆಟ್ಟಿಗರು

Akshay Kumar New Advertisement: ಭಾರತದ ಭೂಪಟವನ್ನು ತುಳಿದಿರುವ ಅಕ್ಷಯ್​ ಕುಮಾರ್​ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ‘ದೇಶಕ್ಕೆ ಸ್ವಲ್ಪವಾದರೂ ಗೌರವ ಕೊಡಿ’ ಎಂದು ಅನೇಕರು ಕ್ಲಾಸ್​ ತೆಗೆದುಕೊಂಡಿದ್ದಾರೆ.

Akshay Kumar: ಭಾರತದ ಭೂಪಟ ತುಳಿದ ಅಕ್ಷಯ್​ ಕುಮಾರ್​; ವೈರಲ್​ ವಿಡಿಯೋ ನೋಡಿ ತರಾಟೆಗೆ ತೆಗೆದುಕೊಂಡ ನೆಟ್ಟಿಗರು
ಅಕ್ಷಯ್ ಕುಮಾರ್

Updated on: Feb 06, 2023 | 7:50 PM

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ವಿವಾದಕ್ಕೆ ಸಿಲುಕಿದ್ದಾರೆ. ಅವರು ಕಾಣಿಸಿಕೊಂಡಿರುವ ಹೊಸ ಜಾಹೀರಾತಿನ ದೃಶ್ಯ ಕಂಡು ನೆಟ್ಟಿಗರು ಸಿಟ್ಟಾಗಿದ್ದಾರೆ. ವಿಮಾನಯಾನ ಸಂಸ್ಥೆಯೊಂದಕ್ಕೆ ಅಕ್ಷಯ್​ ಕುಮಾರ್​ ರಾಯಭಾರಿ ಆಗಿದ್ದಾರೆ. ಅದರ ಜಾಹೀರಾತಿನಲ್ಲಿ ನಟಿಸಿರುವ ಅವರು ಭಾರತದ ಭೂಪಟದ (India map) ಮೇಲೆ ಕಾಲು ಇಟ್ಟಿದ್ದಾರೆ. ಇದು ಸರಿಯಾದ ವರ್ತನೆ ಅಲ್ಲ ಎಂದು ಜನರು ಕಿಡಿಕಾರಿದ್ದಾರೆ. ಈ ಬಗ್ಗೆ ಅಕ್ಷಯ್​ ಕುಮಾರ್​ ಏನು ಹೇಳುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಈ ಜಾಹೀರಾತು (Akshay Kumar Ad) ವೈರಲ್​ ಆಗಿದೆ. ಇದರಲ್ಲಿ ದಿಶಾ ಪಟಾಣಿ, ಮೌನಿ ರಾಯ್​, ಸೋನಮ್​ ಬಾಜ್ವಾ, ನೋರಾ ಫತೇಹಿ ಕೂಡ ನಟಿಸಿದ್ದಾರೆ. ಆದರೆ ಅವರು ಯಾರೂ ಕೂಡ ಭಾರತದ ಭೂಪಟದ ಮೇಲೆ ಕಾಲಿಟ್ಟಿಲ್ಲ. ಅಕ್ಷಯ್​ ಕುಮಾರ್​ ಮಾತ್ರ ಆ ತಪ್ಪು ಮಾಡಿದ್ದಾರೆ!

ಸ್ಟಾರ್​ ನಟರು ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ. ಜಾಹೀರಾತಿನ ಕಾನ್ಸೆಪ್ಟ್​ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಅದರಿಂದ ಯಾರ ಭಾವನೆಗಾದರೂ ಧಕ್ಕೆ ಉಂಟಾಗುವಂತಿದ್ದರೆ ಹೆಚ್ಚಿನ ಜಾಗರೂಕತೆ ವಹಿಸಬೇಕು. ಅದರಲ್ಲೂ ದೇಶದ ವಿಚಾರದಲ್ಲಿ ಎಷ್ಟು ಹುಷಾರಾಗಿದ್ದರೂ ಸಾಲದು. ಈ ವಿಚಾರದಲ್ಲಿ ಅಕ್ಷಯ್​ ಕುಮಾರ್​ ಎಡವಿದ್ದಾರೆ.

ಇದನ್ನೂ ಓದಿ
Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?
Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ

Akshay Kumar: ಸತತ ಸೋಲಿನ ಬಳಿಕ ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾ ಮಾಡಲು ಮುಂದಾದ ನಟ ಅಕ್ಷಯ್​ ಕುಮಾರ್​

ಭಾರತದ ಭೂಪಟವನ್ನು ತುಳಿದಿರುವ ಅಕ್ಷಯ್​ ಕುಮಾರ್​ ಅವರ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ‘ನಮ್ಮ ದೇಶಕ್ಕೆ ಸ್ವಲ್ಪವಾದರೂ ಗೌರವ ಕೊಡಿ’ ಎಂದು ಅನೇಕರು ಕ್ಲಾಸ್​ ತೆಗೆದುಕೊಂಡಿದ್ದಾರೆ. ‘ಇಂಥ ಐಡಿಯಾ ಯಾರದ್ದು? ಇದರಿಂದ ನೀವು ಏನು ಸಾಧಿಸಿದಂತಾಯಿತು? ಎಂಥ ಅಹಂಕಾರಿ ನಟ’ ಎಂಬಿತ್ಯಾದಿ ಕಮೆಂಟ್​ಗಳು ಕೂಡ ಬಂದಿವೆ.

Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ

ಅಕ್ಷಯ್​ ಕುಮಾರ್​ ನಟನೆಯ ‘ಸೆಲ್ಫಿ’ ಸಿನಿಮಾ ಫೆಬ್ರವರಿ 24ರಂದು ರಿಲೀಸ್​ ಆಗಲಿದೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ತೊಡಗಿಕೊಂಡಿದ್ದಾರೆ. ಆದರೆ ಈಗ ಅವರ ಹೊಸ ಜಾಹೀರಾತಿನಿಂದ ವಿವಾದ ಸೃಷ್ಟಿ ಆಗಿದೆ. ಇದರಿಂದ ಸಿನಿಮಾಗೆ ಬಹಿಷ್ಕಾರದ ಬಿಸಿ ತಟ್ಟಿದರೂ ಅಚ್ಚರಿ ಏನಿಲ್ಲ. ‘ಸೆಲ್ಫಿ’ ಸಿನಿಮಾದಲ್ಲಿ ಇಮ್ರಾನ್​ ಹಷ್ಮಿ, ನುಸ್ರತ್​ ಬರುಚಾ ಮುಂತಾದವರು ನಟಿಸಿದ್ದಾರೆ.

ಜಾಹೀರಾತಿನ ವಿಚಾರದಲ್ಲಿ ಅಕ್ಷಯ್​ ಕುಮಾರ್​ ಅವರು ಜನರ ಕೆಂಗಣ್ಣಿಗೆ ಗುರಿ ಆಗಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಅವರು ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದನ್ನು ಅಭಿಮಾನಿಗಳು ತೀವ್ರವಾಗಿ ವಿರೋಧಿಸಿದ್ದರು. ಜಾಹೀರಾತಿನಲ್ಲಿ ನಟಿಸಿದರೆ ಕೋಟ್ಯಂತರ ರೂಪಾಯಿ ಸಂಭಾವನೆ ಸಿಗುತ್ತದೆ ಎಂಬುದು ನಿಜ. ಆದರೆ ಜವಾಬ್ದಾರಿ ಕೂಡ ಅಷ್ಟೇ ಇರುತ್ತದೆ ಎಂಬುದನ್ನು ಸೆಲೆಬ್ರಿಟಿಗಳು ಮರೆಯುವಂತಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:50 pm, Mon, 6 February 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us