AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ರೂಪಾಯಿ ಬಾಡಿಗೆ ಮನೆ ಖರೀದಿಸಲಿರುವ ಅಕ್ಷಯ್​ ಕುಮಾರ್​; ಕಾರಣ ಏನು?

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಅವರು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಚಿತ್ರ ಏಪ್ರಿಲ್​ 10ರಂದು ಬಿಡುಗಡೆ ಆಗಲಿದೆ. ಆ ಪ್ರಯುಕ್ತ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಅಕ್ಷಯ್​ ಕುಮಾರ್​ ಹಂಚಿಕೊಂಡಿದ್ದಾರೆ. 500 ರೂಪಾಯಿ ಬಾಡಿಗೆ ಮನೆಯ ಬಗ್ಗೆಯೂ ಅವರು ಮಾತಾಡಿದ್ದಾರೆ.

500 ರೂಪಾಯಿ ಬಾಡಿಗೆ ಮನೆ ಖರೀದಿಸಲಿರುವ ಅಕ್ಷಯ್​ ಕುಮಾರ್​; ಕಾರಣ ಏನು?
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Apr 08, 2024 | 8:44 PM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಬಹುಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಹಲವು ಕಡೆಗಳಲ್ಲಿ ಅವರು ಪ್ರಾಪರ್ಟಿ ಖರೀದಿಸಿದ್ದಾರೆ. ಅಚ್ಚರಿ ಏನೆಂದರೆ, ಈಗ ಅವರು ಒಂದು ಹಳೇ ಕಟ್ಟಡವನ್ನು ಕೊಂಡುಕೊಳ್ಳಲು ಬಯಸಿದ್ದಾರೆ. ಒಂದು ಕಾಲದಲ್ಲಿ ಅದಕ್ಕೆ 500 ರೂಪಾಯಿ ಬಾಡಿಗೆ ನೀಡಲಾಗುತ್ತಿತ್ತು. ಈಗ ಆ ಮನೆಯನ್ನು (Rented House) ಖರೀದಿಸಲು ಅಕ್ಷಯ್​ ಕುಮಾರ್​ ಅವರು ಉತ್ಸಾಹ ತೋರಿಸಿದ್ದಾರೆ. ದೊಡ್ಡ ದೊಡ್ಡ ಬಂಗಲೆ ಹೊಂದಿರುವ ಅಕ್ಷಯ್​ ಕುಮಾರ್​ ಅವರು ಆ ಚಿಕ್ಕ ಮನೆ (Akshay Kumar House) ಖರೀದಿಸಲು ಮುಂದಾಗಿರುವುದು ಯಾಕೆ ಎಂಬುದು ಕುತೂಹಲದ ಪ್ರಶ್ನೆ. ಆ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಅಕ್ಷಯ್​ ಕುಮಾರ್​ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ಈಗ ಅವರಿಗೆ ಬಾಲ್ಯದ ನೆನಪು ಖುಷಿ ನೀಡುತ್ತಿದೆ. ಬಾಲ್ಯದಲ್ಲಿ ತಂದೆ-ತಾಯಿ, ಸಹೋದರಿ ಜೊತೆ ಅಕ್ಷಯ್​ ಕುಮಾರ್​ ಅವರು ವಾಸಿಸುತ್ತಿದ್ದ ಮನೆಯ ನೆನಪನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕು ಎಂಬುದು ಅಕ್ಷಯ್​ ಕುಮಾರ್​ ಅವರ ಆಸೆ. ಆ ಹಳೇ ಮನೆಯ ಬಗ್ಗೆ ಅವರು ಕೆಲವು ಅಪರೂಪದ ವಿಚಾರಗಳನ್ನು ಹಂಚಿಕೊಂಡಿದ್ದಾರೆ

‘ಆ ಮನಸ್ಥಿತಿ ಏನು ಎಂಬುದು ನನಗೆ ಅರ್ಥ ಆಗಿಲ್ಲ. ಬಾಲ್ಯದಲ್ಲಿ ದಿನ ಕಳೆದ ಜಾಗಗಳಿಗೆ ಹೋಗಲು ಖುಷಿ ಆಗುತ್ತದೆ. ನನ್ನ ಹಳೇ ಮನೆಗೆ ಹೋಗುವುದು ನನಗೆ ಇಷ್ಟ. ನಾವು ಆ ಮನೆಗೆ 500 ರೂಪಾಯಿ ಬಾಡಿಗೆ ನೀಡುತ್ತಿದ್ದೆವು. ಆ ಕಟ್ಟಡವನ್ನು ಈಗ ರಿನೋವೇಟ್​ ಮಾಡುತ್ತಿದ್ದಾರೆ ಎಂಬುದು ಗೊತ್ತಾಯಿತು. ನಾನು ಮೂರನೇ ಮಹಡಿಯನ್ನು ಕೊಂಡುಕೊಳ್ಳುತ್ತೇನೆ ಎಂದು ಅವರಿಗೆ ಹೇಳಿದ್ದೇನೆ. ನಾವು ಅಲ್ಲಿ ವಾಸಿಸುತ್ತಿದ್ದೆವು. 2 ಬೆಡ್​ ರೂಮ್​ನ ಫ್ಲಾಟ್​ ನಿರ್ಮಾಣ ಆಗುತ್ತಿದೆ ಅಲ್ಲಿ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: ‘ಬದುಕುವ ಸಾಧ್ಯತೆ ಶೇ.30 ಮಾತ್ರ’: ಇದು ಅಕ್ಷಯ್​ ಕುಮಾರ್​ ಜೀವನದ ಅಪಾಯಕಾರಿ ಸ್ಟಂಟ್

‘ಈಗ ಅಲ್ಲಿ ನಮ್ಮವರು ಯಾರೂ ಇಲ್ಲ. ಆದರೂ ಆ ಮನೆಯನ್ನು ಉಳಿಸಿಕೊಳ್ಳಬೇಕು ಅಂತ ಬಯಸಿದ್ದೇನೆ. ನಮ್ಮ ತಂದೆ 9 ಗಂಟೆಯಿಂದ 6 ಗಂಟೆ ತನಕ ಕೆಲಸಕ್ಕೆ ಹೋಗುತ್ತಿದ್ದರು. ಅವರು ವಾಪಸ್​ ಬರುವುದನ್ನು ನಾನು ಮತ್ತು ನನ್ನ ಸಹೋದರಿ ಕಾಯುತ್ತಿದ್ದ ದಿನಗಳು ಈಗಲೂ ನನಗೆ ನೆನಪಿದೆ. ಆ ದೃಶ್ಯ ಹಾಗೆಯೇ ಇದೆ. ಅಲ್ಲೊಂದು ಪೇರಲ ಮರ ಇತ್ತು. ಹಣ್ಣುಗಳನ್ನು ನಾವು ಕೀಳುತ್ತಿದ್ದೆವು. ಈಗಲೂ ನಾನು ಪ್ರತಿ ತಿಂಗಳು ಅಲ್ಲಿಗೆ ಹೋಗುತ್ತೇನೆ. ಅಲ್ಲಿಂದ ಕೆಲವು ಹೂವು ಮತ್ತು ಪೇರಲ ಹಣ್ಣು ತರುತ್ತೇನೆ. ಆ ಸಂಗತಿಗಳೊಂದಿಗೆ ಇರಲು ನಾನು ಬಯಸುತ್ತೇನೆ. ಅಲ್ಲಿಂದಲೇ ನಾನು ಬಂದಿದ್ದು’ ಎಂದಿದ್ದಾರೆ ಅಕ್ಷಯ್​ ಕುಮಾರ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್