500 ರೂಪಾಯಿ ಬಾಡಿಗೆ ಮನೆ ಖರೀದಿಸಲಿರುವ ಅಕ್ಷಯ್​ ಕುಮಾರ್​; ಕಾರಣ ಏನು?

ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಅವರು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಚಿತ್ರ ಏಪ್ರಿಲ್​ 10ರಂದು ಬಿಡುಗಡೆ ಆಗಲಿದೆ. ಆ ಪ್ರಯುಕ್ತ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಅಕ್ಷಯ್​ ಕುಮಾರ್​ ಹಂಚಿಕೊಂಡಿದ್ದಾರೆ. 500 ರೂಪಾಯಿ ಬಾಡಿಗೆ ಮನೆಯ ಬಗ್ಗೆಯೂ ಅವರು ಮಾತಾಡಿದ್ದಾರೆ.

500 ರೂಪಾಯಿ ಬಾಡಿಗೆ ಮನೆ ಖರೀದಿಸಲಿರುವ ಅಕ್ಷಯ್​ ಕುಮಾರ್​; ಕಾರಣ ಏನು?
ಅಕ್ಷಯ್​ ಕುಮಾರ್​
Follow us
|

Updated on: Apr 08, 2024 | 8:44 PM

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಬಹುಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಹಲವು ಕಡೆಗಳಲ್ಲಿ ಅವರು ಪ್ರಾಪರ್ಟಿ ಖರೀದಿಸಿದ್ದಾರೆ. ಅಚ್ಚರಿ ಏನೆಂದರೆ, ಈಗ ಅವರು ಒಂದು ಹಳೇ ಕಟ್ಟಡವನ್ನು ಕೊಂಡುಕೊಳ್ಳಲು ಬಯಸಿದ್ದಾರೆ. ಒಂದು ಕಾಲದಲ್ಲಿ ಅದಕ್ಕೆ 500 ರೂಪಾಯಿ ಬಾಡಿಗೆ ನೀಡಲಾಗುತ್ತಿತ್ತು. ಈಗ ಆ ಮನೆಯನ್ನು (Rented House) ಖರೀದಿಸಲು ಅಕ್ಷಯ್​ ಕುಮಾರ್​ ಅವರು ಉತ್ಸಾಹ ತೋರಿಸಿದ್ದಾರೆ. ದೊಡ್ಡ ದೊಡ್ಡ ಬಂಗಲೆ ಹೊಂದಿರುವ ಅಕ್ಷಯ್​ ಕುಮಾರ್​ ಅವರು ಆ ಚಿಕ್ಕ ಮನೆ (Akshay Kumar House) ಖರೀದಿಸಲು ಮುಂದಾಗಿರುವುದು ಯಾಕೆ ಎಂಬುದು ಕುತೂಹಲದ ಪ್ರಶ್ನೆ. ಆ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಅಕ್ಷಯ್​ ಕುಮಾರ್​ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ಈಗ ಅವರಿಗೆ ಬಾಲ್ಯದ ನೆನಪು ಖುಷಿ ನೀಡುತ್ತಿದೆ. ಬಾಲ್ಯದಲ್ಲಿ ತಂದೆ-ತಾಯಿ, ಸಹೋದರಿ ಜೊತೆ ಅಕ್ಷಯ್​ ಕುಮಾರ್​ ಅವರು ವಾಸಿಸುತ್ತಿದ್ದ ಮನೆಯ ನೆನಪನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕು ಎಂಬುದು ಅಕ್ಷಯ್​ ಕುಮಾರ್​ ಅವರ ಆಸೆ. ಆ ಹಳೇ ಮನೆಯ ಬಗ್ಗೆ ಅವರು ಕೆಲವು ಅಪರೂಪದ ವಿಚಾರಗಳನ್ನು ಹಂಚಿಕೊಂಡಿದ್ದಾರೆ

‘ಆ ಮನಸ್ಥಿತಿ ಏನು ಎಂಬುದು ನನಗೆ ಅರ್ಥ ಆಗಿಲ್ಲ. ಬಾಲ್ಯದಲ್ಲಿ ದಿನ ಕಳೆದ ಜಾಗಗಳಿಗೆ ಹೋಗಲು ಖುಷಿ ಆಗುತ್ತದೆ. ನನ್ನ ಹಳೇ ಮನೆಗೆ ಹೋಗುವುದು ನನಗೆ ಇಷ್ಟ. ನಾವು ಆ ಮನೆಗೆ 500 ರೂಪಾಯಿ ಬಾಡಿಗೆ ನೀಡುತ್ತಿದ್ದೆವು. ಆ ಕಟ್ಟಡವನ್ನು ಈಗ ರಿನೋವೇಟ್​ ಮಾಡುತ್ತಿದ್ದಾರೆ ಎಂಬುದು ಗೊತ್ತಾಯಿತು. ನಾನು ಮೂರನೇ ಮಹಡಿಯನ್ನು ಕೊಂಡುಕೊಳ್ಳುತ್ತೇನೆ ಎಂದು ಅವರಿಗೆ ಹೇಳಿದ್ದೇನೆ. ನಾವು ಅಲ್ಲಿ ವಾಸಿಸುತ್ತಿದ್ದೆವು. 2 ಬೆಡ್​ ರೂಮ್​ನ ಫ್ಲಾಟ್​ ನಿರ್ಮಾಣ ಆಗುತ್ತಿದೆ ಅಲ್ಲಿ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: ‘ಬದುಕುವ ಸಾಧ್ಯತೆ ಶೇ.30 ಮಾತ್ರ’: ಇದು ಅಕ್ಷಯ್​ ಕುಮಾರ್​ ಜೀವನದ ಅಪಾಯಕಾರಿ ಸ್ಟಂಟ್

‘ಈಗ ಅಲ್ಲಿ ನಮ್ಮವರು ಯಾರೂ ಇಲ್ಲ. ಆದರೂ ಆ ಮನೆಯನ್ನು ಉಳಿಸಿಕೊಳ್ಳಬೇಕು ಅಂತ ಬಯಸಿದ್ದೇನೆ. ನಮ್ಮ ತಂದೆ 9 ಗಂಟೆಯಿಂದ 6 ಗಂಟೆ ತನಕ ಕೆಲಸಕ್ಕೆ ಹೋಗುತ್ತಿದ್ದರು. ಅವರು ವಾಪಸ್​ ಬರುವುದನ್ನು ನಾನು ಮತ್ತು ನನ್ನ ಸಹೋದರಿ ಕಾಯುತ್ತಿದ್ದ ದಿನಗಳು ಈಗಲೂ ನನಗೆ ನೆನಪಿದೆ. ಆ ದೃಶ್ಯ ಹಾಗೆಯೇ ಇದೆ. ಅಲ್ಲೊಂದು ಪೇರಲ ಮರ ಇತ್ತು. ಹಣ್ಣುಗಳನ್ನು ನಾವು ಕೀಳುತ್ತಿದ್ದೆವು. ಈಗಲೂ ನಾನು ಪ್ರತಿ ತಿಂಗಳು ಅಲ್ಲಿಗೆ ಹೋಗುತ್ತೇನೆ. ಅಲ್ಲಿಂದ ಕೆಲವು ಹೂವು ಮತ್ತು ಪೇರಲ ಹಣ್ಣು ತರುತ್ತೇನೆ. ಆ ಸಂಗತಿಗಳೊಂದಿಗೆ ಇರಲು ನಾನು ಬಯಸುತ್ತೇನೆ. ಅಲ್ಲಿಂದಲೇ ನಾನು ಬಂದಿದ್ದು’ ಎಂದಿದ್ದಾರೆ ಅಕ್ಷಯ್​ ಕುಮಾರ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ