AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು

ಈ ಕಹಿ ಘಟನೆ ನಡೆದಾಗ ಅಕ್ಷಯ್​ ಕುಮಾರ್​ ಅವರಿಗೆ ಕೇವಲ 6 ವರ್ಷ ವಯಸ್ಸು. ಅವರ ಜೊತೆ ಲಿಫ್ಟ್​ ಮ್ಯಾನ್​ ಅಸಭ್ಯವಾಗಿ ನಡೆದುಕೊಂಡಿದ್ದ. ಅದರಿಂದ ಅಕ್ಷಯ್​ ಮನಸ್ಸು ಘಾಸಿಗೊಂಡಿತ್ತು.

ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು
ಅಕ್ಷಯ್​ ಕುಮಾರ್​
TV9 Web
| Edited By: |

Updated on: Oct 24, 2021 | 9:07 AM

Share

ಬಾಲ್ಯದಲ್ಲಿ ತಮ್ಮ ಮೇಲೆ ಆದ ಲೈಂಗಿಕ ದೌರ್ಜನ್ಯದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಬಾಯಿ ಬಿಟ್ಟಿದ್ದಾರೆ. ಸ್ಟಾರ್​ ನಟ ಅಕ್ಷಯ್​ ಕುಮಾರ್​ ಕೂಡ ಈ ಬಗ್ಗೆ ಹೇಳಿಕೊಂಡಿದ್ದುಂಟು. ಬಾಲ್ಯದಲ್ಲಿದ್ದಾಗಲೇ ಅವರ ಮೇಲೆ ಲೈಂಗಿಕ ಶೋಷಣೆ ಆಗಿತ್ತು. ಆ ಘಟನೆಯಿಂದ ಅವರು ತುಂಬ ವಿಚಲಿತರಾಗಿದ್ದರು. ಅಲ್ಲದೇ ಪೊಲೀಸರಿಗೆ ದೂರು ಕೂಡ ನೀಡಲಾಗಿತ್ತು. ಈ ಶಾಕಿಂಗ್ ಸಂಗತಿಯ ಬಗ್ಗೆ ಅಕ್ಷಯ್​ ಕುಮಾರ್​ ಈ ಹಿಂದೆ ಮಾಹಿತಿ ಹಂಚಿಕೊಂಡಿದ್ದರು.​

ಈ ಕಹಿ ಘಟನೆ ನಡೆದಾಗ ಅಕ್ಷಯ್​ ಕುಮಾರ್​ ಅವರಿಗೆ ಕೇವಲ 6 ವರ್ಷ ವಯಸ್ಸು. ‘ನಾನು ಲಿಫ್ಟ್​ ಮೂಲಕ ನಮ್ಮ ಪಕ್ಕದ ಮನೆಗೆ ತೆರಳುತ್ತಿದ್ದೆ. ಆ ಸಂದರ್ಭದಲ್ಲಿ ನನ್ನ ಜೊತೆ ಲಿಫ್ಟ್​ ಮ್ಯಾನ್​ ಅಸಭ್ಯವಾಗಿ ನಡೆದುಕೊಂಡ. ಆತ ಕೆಟ್ಟ ರೀತಿಯಲ್ಲಿ ನನ್ನನ್ನು ಸ್ಪರ್ಶಿಸಿದ. ಇದರಿಂದ ನನ್ನ​ ಮನಸ್ಸು ಘಾಸಿಗೊಂಡಿತು. ನೇರವಾಗಿ ಹೋಗಿ ನಮ್ಮ ತಂದೆಯ ಬಳಿ ಅಳಲು ತೋಡಿಕೊಂಡೆ. ಅಪ್ಪ ಹೋಗಿ ಪೊಲೀಸರಿಗೆ ದೂರು ನೀಡಿದರು’ ಎಂದು ಆ ಕಹಿ ಘಟನೆಯನ್ನು ಅಕ್ಷಯ್​ ಕುಮಾರ್​ ವಿವರಿಸಿದ್ದರು.

‘ತನಿಖೆ ನಡೆದಾಗ ಗೊತ್ತಾಗಿದ್ದು ಏನೆಂದರೆ ಆ ಲಿಫ್ಟ್​ ಮ್ಯಾನ್​ಗೆ ಇಂಥ ಛಾಳಿ ಮೊದಲಿನಿಂದಲೂ ಇತ್ತು. ಪೊಲೀಸರು ಕ್ರಮ ಕೈಗೊಂಡು ಆತನನ್ನು ಬಂಧಿಸಿದರು. ಚಿಕ್ಕ ವಯಸ್ಸಿನಲ್ಲಿ ನಾನು ನಾಚಿಕೆ ಸ್ವಭಾವದವನಾಗಿದ್ದೆ. ತಂದೆ-ತಾಯಿ ಬಳಿ ಈ ವಿಚಾರ ಹೇಳಿಕೊಂಡೆ. ಇಂದಿಗೂ ಕೂಡ ಒಂದು ಕೆಟ್ಟ ಪದ ಮಾತನಾಡುವುದು ನನಗೆ ಕಷ್ಟ ಆಗುತ್ತದೆ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದರು.

ಅನೇಕ ಕಲಾವಿದರಿಗೆ ಈ ರೀತಿಯ ಕಹಿ ಘಟನೆಗಳು ಆಗಿವೆ. ನಟಿ ನೀನಾ ಗುಪ್ತಾ ಅವರು ತಮ್ಮ ಆತ್ಮಚರಿತ್ರೆ ‘ಸಚ್​ ಕಹೂ ತೋ’ ಪುಸ್ತಕದಲ್ಲಿ ಇಂಥ ಕೆಲವು ಸಂಗತಿಗಳನ್ನು ವಿವರಿಸಿದ್ದಾರೆ. ಬಾಲಕಿ ಆಗಿದ್ದಾಗ ಒಮ್ಮೆ ಅವರು ಕಣ್ಣಿನ ಆಸ್ಪತ್ರೆಗೆ ಹೋಗಿದ್ದರು. ಆರಂಭದಲ್ಲಿ ಕಣ್ಣು ಪರಿಶೀಲಿಸಿದ ವೈದ್ಯರು ನಂತರ ದೇಹದ ಇತರ ಭಾಗಗಳನ್ನು ನೋಡಲು ಆರಂಭಿಸಿದರಂತೆ. ಆ ಅಂಗಗಳು ಕಣ್ಣಿಗೆ ಸಂಬಂಧಿಸಿರಲಿಲ್ಲ. ಆಸ್ಪತ್ರೆಯಿಂದ ಮನೆಗೆ ಬಂದ ಬಳಿಕ ನೀನಾ ಗುಪ್ತಾ ಒಬ್ಬರೇ ಕುಳಿತು ಅತ್ತಿದ್ದರು. ಒಂದು ವೇಳೆ ತಾಯಿ ಬಳಿ ಹೇಳಿಕೊಂಡರೇ ತಮ್ಮದೇ ಏನೂ ತಪ್ಪಿರಬಹುದು ಅಂತ ಹೇಳಬಹುದು ಎಂಬ ಭಯದಲ್ಲಿ ಆ ವಿಚಾರವನ್ನು ನೀನಾ ಗುಪ್ತಾ ಮುಚ್ಚಿಟ್ಟರು.

ಇದನ್ನೂ ಓದಿ:

OMG 2: ‘ಓಹ್​ ಮೈ ಗಾಡ್​ 2’ ಪೋಸ್ಟರ್​ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ ಅಕ್ಷಯ್​ ಕುಮಾರ್​; ಹೇಗಿದೆ ಹೊಸ ಗೆಟಪ್​?

‘ತಪ್ಪಾಗಿ ಈ ಡ್ಯಾನ್ಸ್​ ಮಾಡಿದ್ರೆ ನಿಮ್ಮ ಭವಿಷ್ಯಕ್ಕೆ ತೊಂದರೆ ಆಗಬಹುದು’: ಅಕ್ಷಯ್​ ಕುಮಾರ್​ ವಾರ್ನಿಂಗ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ