AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು

ಈ ಕಹಿ ಘಟನೆ ನಡೆದಾಗ ಅಕ್ಷಯ್​ ಕುಮಾರ್​ ಅವರಿಗೆ ಕೇವಲ 6 ವರ್ಷ ವಯಸ್ಸು. ಅವರ ಜೊತೆ ಲಿಫ್ಟ್​ ಮ್ಯಾನ್​ ಅಸಭ್ಯವಾಗಿ ನಡೆದುಕೊಂಡಿದ್ದ. ಅದರಿಂದ ಅಕ್ಷಯ್​ ಮನಸ್ಸು ಘಾಸಿಗೊಂಡಿತ್ತು.

ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು
ಅಕ್ಷಯ್​ ಕುಮಾರ್​
TV9 Web
| Edited By: |

Updated on: Oct 24, 2021 | 9:07 AM

Share

ಬಾಲ್ಯದಲ್ಲಿ ತಮ್ಮ ಮೇಲೆ ಆದ ಲೈಂಗಿಕ ದೌರ್ಜನ್ಯದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಬಾಯಿ ಬಿಟ್ಟಿದ್ದಾರೆ. ಸ್ಟಾರ್​ ನಟ ಅಕ್ಷಯ್​ ಕುಮಾರ್​ ಕೂಡ ಈ ಬಗ್ಗೆ ಹೇಳಿಕೊಂಡಿದ್ದುಂಟು. ಬಾಲ್ಯದಲ್ಲಿದ್ದಾಗಲೇ ಅವರ ಮೇಲೆ ಲೈಂಗಿಕ ಶೋಷಣೆ ಆಗಿತ್ತು. ಆ ಘಟನೆಯಿಂದ ಅವರು ತುಂಬ ವಿಚಲಿತರಾಗಿದ್ದರು. ಅಲ್ಲದೇ ಪೊಲೀಸರಿಗೆ ದೂರು ಕೂಡ ನೀಡಲಾಗಿತ್ತು. ಈ ಶಾಕಿಂಗ್ ಸಂಗತಿಯ ಬಗ್ಗೆ ಅಕ್ಷಯ್​ ಕುಮಾರ್​ ಈ ಹಿಂದೆ ಮಾಹಿತಿ ಹಂಚಿಕೊಂಡಿದ್ದರು.​

ಈ ಕಹಿ ಘಟನೆ ನಡೆದಾಗ ಅಕ್ಷಯ್​ ಕುಮಾರ್​ ಅವರಿಗೆ ಕೇವಲ 6 ವರ್ಷ ವಯಸ್ಸು. ‘ನಾನು ಲಿಫ್ಟ್​ ಮೂಲಕ ನಮ್ಮ ಪಕ್ಕದ ಮನೆಗೆ ತೆರಳುತ್ತಿದ್ದೆ. ಆ ಸಂದರ್ಭದಲ್ಲಿ ನನ್ನ ಜೊತೆ ಲಿಫ್ಟ್​ ಮ್ಯಾನ್​ ಅಸಭ್ಯವಾಗಿ ನಡೆದುಕೊಂಡ. ಆತ ಕೆಟ್ಟ ರೀತಿಯಲ್ಲಿ ನನ್ನನ್ನು ಸ್ಪರ್ಶಿಸಿದ. ಇದರಿಂದ ನನ್ನ​ ಮನಸ್ಸು ಘಾಸಿಗೊಂಡಿತು. ನೇರವಾಗಿ ಹೋಗಿ ನಮ್ಮ ತಂದೆಯ ಬಳಿ ಅಳಲು ತೋಡಿಕೊಂಡೆ. ಅಪ್ಪ ಹೋಗಿ ಪೊಲೀಸರಿಗೆ ದೂರು ನೀಡಿದರು’ ಎಂದು ಆ ಕಹಿ ಘಟನೆಯನ್ನು ಅಕ್ಷಯ್​ ಕುಮಾರ್​ ವಿವರಿಸಿದ್ದರು.

‘ತನಿಖೆ ನಡೆದಾಗ ಗೊತ್ತಾಗಿದ್ದು ಏನೆಂದರೆ ಆ ಲಿಫ್ಟ್​ ಮ್ಯಾನ್​ಗೆ ಇಂಥ ಛಾಳಿ ಮೊದಲಿನಿಂದಲೂ ಇತ್ತು. ಪೊಲೀಸರು ಕ್ರಮ ಕೈಗೊಂಡು ಆತನನ್ನು ಬಂಧಿಸಿದರು. ಚಿಕ್ಕ ವಯಸ್ಸಿನಲ್ಲಿ ನಾನು ನಾಚಿಕೆ ಸ್ವಭಾವದವನಾಗಿದ್ದೆ. ತಂದೆ-ತಾಯಿ ಬಳಿ ಈ ವಿಚಾರ ಹೇಳಿಕೊಂಡೆ. ಇಂದಿಗೂ ಕೂಡ ಒಂದು ಕೆಟ್ಟ ಪದ ಮಾತನಾಡುವುದು ನನಗೆ ಕಷ್ಟ ಆಗುತ್ತದೆ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದರು.

ಅನೇಕ ಕಲಾವಿದರಿಗೆ ಈ ರೀತಿಯ ಕಹಿ ಘಟನೆಗಳು ಆಗಿವೆ. ನಟಿ ನೀನಾ ಗುಪ್ತಾ ಅವರು ತಮ್ಮ ಆತ್ಮಚರಿತ್ರೆ ‘ಸಚ್​ ಕಹೂ ತೋ’ ಪುಸ್ತಕದಲ್ಲಿ ಇಂಥ ಕೆಲವು ಸಂಗತಿಗಳನ್ನು ವಿವರಿಸಿದ್ದಾರೆ. ಬಾಲಕಿ ಆಗಿದ್ದಾಗ ಒಮ್ಮೆ ಅವರು ಕಣ್ಣಿನ ಆಸ್ಪತ್ರೆಗೆ ಹೋಗಿದ್ದರು. ಆರಂಭದಲ್ಲಿ ಕಣ್ಣು ಪರಿಶೀಲಿಸಿದ ವೈದ್ಯರು ನಂತರ ದೇಹದ ಇತರ ಭಾಗಗಳನ್ನು ನೋಡಲು ಆರಂಭಿಸಿದರಂತೆ. ಆ ಅಂಗಗಳು ಕಣ್ಣಿಗೆ ಸಂಬಂಧಿಸಿರಲಿಲ್ಲ. ಆಸ್ಪತ್ರೆಯಿಂದ ಮನೆಗೆ ಬಂದ ಬಳಿಕ ನೀನಾ ಗುಪ್ತಾ ಒಬ್ಬರೇ ಕುಳಿತು ಅತ್ತಿದ್ದರು. ಒಂದು ವೇಳೆ ತಾಯಿ ಬಳಿ ಹೇಳಿಕೊಂಡರೇ ತಮ್ಮದೇ ಏನೂ ತಪ್ಪಿರಬಹುದು ಅಂತ ಹೇಳಬಹುದು ಎಂಬ ಭಯದಲ್ಲಿ ಆ ವಿಚಾರವನ್ನು ನೀನಾ ಗುಪ್ತಾ ಮುಚ್ಚಿಟ್ಟರು.

ಇದನ್ನೂ ಓದಿ:

OMG 2: ‘ಓಹ್​ ಮೈ ಗಾಡ್​ 2’ ಪೋಸ್ಟರ್​ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ ಅಕ್ಷಯ್​ ಕುಮಾರ್​; ಹೇಗಿದೆ ಹೊಸ ಗೆಟಪ್​?

‘ತಪ್ಪಾಗಿ ಈ ಡ್ಯಾನ್ಸ್​ ಮಾಡಿದ್ರೆ ನಿಮ್ಮ ಭವಿಷ್ಯಕ್ಕೆ ತೊಂದರೆ ಆಗಬಹುದು’: ಅಕ್ಷಯ್​ ಕುಮಾರ್​ ವಾರ್ನಿಂಗ್​

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ