AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು

ಈ ಕಹಿ ಘಟನೆ ನಡೆದಾಗ ಅಕ್ಷಯ್​ ಕುಮಾರ್​ ಅವರಿಗೆ ಕೇವಲ 6 ವರ್ಷ ವಯಸ್ಸು. ಅವರ ಜೊತೆ ಲಿಫ್ಟ್​ ಮ್ಯಾನ್​ ಅಸಭ್ಯವಾಗಿ ನಡೆದುಕೊಂಡಿದ್ದ. ಅದರಿಂದ ಅಕ್ಷಯ್​ ಮನಸ್ಸು ಘಾಸಿಗೊಂಡಿತ್ತು.

ಅಕ್ಷಯ್​ ಕುಮಾರ್​ಗೂ ಆಗಿತ್ತು ಲೈಂಗಿಕ ಕಿರುಕುಳ; ಲಿಫ್ಟ್​ನಲ್ಲಿ ನಡೆದ ಕರಾಳ ಘಟನೆ ಬಗ್ಗೆ ಅಕ್ಕಿ ಮಾತು
ಅಕ್ಷಯ್​ ಕುಮಾರ್​
TV9 Web
| Edited By: |

Updated on: Oct 24, 2021 | 9:07 AM

Share

ಬಾಲ್ಯದಲ್ಲಿ ತಮ್ಮ ಮೇಲೆ ಆದ ಲೈಂಗಿಕ ದೌರ್ಜನ್ಯದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಬಾಯಿ ಬಿಟ್ಟಿದ್ದಾರೆ. ಸ್ಟಾರ್​ ನಟ ಅಕ್ಷಯ್​ ಕುಮಾರ್​ ಕೂಡ ಈ ಬಗ್ಗೆ ಹೇಳಿಕೊಂಡಿದ್ದುಂಟು. ಬಾಲ್ಯದಲ್ಲಿದ್ದಾಗಲೇ ಅವರ ಮೇಲೆ ಲೈಂಗಿಕ ಶೋಷಣೆ ಆಗಿತ್ತು. ಆ ಘಟನೆಯಿಂದ ಅವರು ತುಂಬ ವಿಚಲಿತರಾಗಿದ್ದರು. ಅಲ್ಲದೇ ಪೊಲೀಸರಿಗೆ ದೂರು ಕೂಡ ನೀಡಲಾಗಿತ್ತು. ಈ ಶಾಕಿಂಗ್ ಸಂಗತಿಯ ಬಗ್ಗೆ ಅಕ್ಷಯ್​ ಕುಮಾರ್​ ಈ ಹಿಂದೆ ಮಾಹಿತಿ ಹಂಚಿಕೊಂಡಿದ್ದರು.​

ಈ ಕಹಿ ಘಟನೆ ನಡೆದಾಗ ಅಕ್ಷಯ್​ ಕುಮಾರ್​ ಅವರಿಗೆ ಕೇವಲ 6 ವರ್ಷ ವಯಸ್ಸು. ‘ನಾನು ಲಿಫ್ಟ್​ ಮೂಲಕ ನಮ್ಮ ಪಕ್ಕದ ಮನೆಗೆ ತೆರಳುತ್ತಿದ್ದೆ. ಆ ಸಂದರ್ಭದಲ್ಲಿ ನನ್ನ ಜೊತೆ ಲಿಫ್ಟ್​ ಮ್ಯಾನ್​ ಅಸಭ್ಯವಾಗಿ ನಡೆದುಕೊಂಡ. ಆತ ಕೆಟ್ಟ ರೀತಿಯಲ್ಲಿ ನನ್ನನ್ನು ಸ್ಪರ್ಶಿಸಿದ. ಇದರಿಂದ ನನ್ನ​ ಮನಸ್ಸು ಘಾಸಿಗೊಂಡಿತು. ನೇರವಾಗಿ ಹೋಗಿ ನಮ್ಮ ತಂದೆಯ ಬಳಿ ಅಳಲು ತೋಡಿಕೊಂಡೆ. ಅಪ್ಪ ಹೋಗಿ ಪೊಲೀಸರಿಗೆ ದೂರು ನೀಡಿದರು’ ಎಂದು ಆ ಕಹಿ ಘಟನೆಯನ್ನು ಅಕ್ಷಯ್​ ಕುಮಾರ್​ ವಿವರಿಸಿದ್ದರು.

‘ತನಿಖೆ ನಡೆದಾಗ ಗೊತ್ತಾಗಿದ್ದು ಏನೆಂದರೆ ಆ ಲಿಫ್ಟ್​ ಮ್ಯಾನ್​ಗೆ ಇಂಥ ಛಾಳಿ ಮೊದಲಿನಿಂದಲೂ ಇತ್ತು. ಪೊಲೀಸರು ಕ್ರಮ ಕೈಗೊಂಡು ಆತನನ್ನು ಬಂಧಿಸಿದರು. ಚಿಕ್ಕ ವಯಸ್ಸಿನಲ್ಲಿ ನಾನು ನಾಚಿಕೆ ಸ್ವಭಾವದವನಾಗಿದ್ದೆ. ತಂದೆ-ತಾಯಿ ಬಳಿ ಈ ವಿಚಾರ ಹೇಳಿಕೊಂಡೆ. ಇಂದಿಗೂ ಕೂಡ ಒಂದು ಕೆಟ್ಟ ಪದ ಮಾತನಾಡುವುದು ನನಗೆ ಕಷ್ಟ ಆಗುತ್ತದೆ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದರು.

ಅನೇಕ ಕಲಾವಿದರಿಗೆ ಈ ರೀತಿಯ ಕಹಿ ಘಟನೆಗಳು ಆಗಿವೆ. ನಟಿ ನೀನಾ ಗುಪ್ತಾ ಅವರು ತಮ್ಮ ಆತ್ಮಚರಿತ್ರೆ ‘ಸಚ್​ ಕಹೂ ತೋ’ ಪುಸ್ತಕದಲ್ಲಿ ಇಂಥ ಕೆಲವು ಸಂಗತಿಗಳನ್ನು ವಿವರಿಸಿದ್ದಾರೆ. ಬಾಲಕಿ ಆಗಿದ್ದಾಗ ಒಮ್ಮೆ ಅವರು ಕಣ್ಣಿನ ಆಸ್ಪತ್ರೆಗೆ ಹೋಗಿದ್ದರು. ಆರಂಭದಲ್ಲಿ ಕಣ್ಣು ಪರಿಶೀಲಿಸಿದ ವೈದ್ಯರು ನಂತರ ದೇಹದ ಇತರ ಭಾಗಗಳನ್ನು ನೋಡಲು ಆರಂಭಿಸಿದರಂತೆ. ಆ ಅಂಗಗಳು ಕಣ್ಣಿಗೆ ಸಂಬಂಧಿಸಿರಲಿಲ್ಲ. ಆಸ್ಪತ್ರೆಯಿಂದ ಮನೆಗೆ ಬಂದ ಬಳಿಕ ನೀನಾ ಗುಪ್ತಾ ಒಬ್ಬರೇ ಕುಳಿತು ಅತ್ತಿದ್ದರು. ಒಂದು ವೇಳೆ ತಾಯಿ ಬಳಿ ಹೇಳಿಕೊಂಡರೇ ತಮ್ಮದೇ ಏನೂ ತಪ್ಪಿರಬಹುದು ಅಂತ ಹೇಳಬಹುದು ಎಂಬ ಭಯದಲ್ಲಿ ಆ ವಿಚಾರವನ್ನು ನೀನಾ ಗುಪ್ತಾ ಮುಚ್ಚಿಟ್ಟರು.

ಇದನ್ನೂ ಓದಿ:

OMG 2: ‘ಓಹ್​ ಮೈ ಗಾಡ್​ 2’ ಪೋಸ್ಟರ್​ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ ಅಕ್ಷಯ್​ ಕುಮಾರ್​; ಹೇಗಿದೆ ಹೊಸ ಗೆಟಪ್​?

‘ತಪ್ಪಾಗಿ ಈ ಡ್ಯಾನ್ಸ್​ ಮಾಡಿದ್ರೆ ನಿಮ್ಮ ಭವಿಷ್ಯಕ್ಕೆ ತೊಂದರೆ ಆಗಬಹುದು’: ಅಕ್ಷಯ್​ ಕುಮಾರ್​ ವಾರ್ನಿಂಗ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?