AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ 102 ದಿನ ರಜೆ ಪಡೆಯಲಿರುವ ಅಕ್ಷಯ್​ ಕುಮಾರ್​; ಇಲ್ಲಿದೆ ನೋಡಿ ಪ್ಲ್ಯಾನ್​

ಅಕ್ಷಯ್​ ಕುಮಾರ್​ ಅವರ ದಿನಚರಿ ತುಂಬ ಕಟ್ಟುನಿಟ್ಟಾಗಿ ಇರುತ್ತದೆ. ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ತನಕ ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಈ ವರ್ಷ ಬರೋಬ್ಬರಿ 5 ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. 20ಕ್ಕೂ ಅಧಿಕ ಬ್ರ್ಯಾಂಡ್​ಗಳ ಜಾಹೀರಾತು ಚಿತ್ರೀಕರಣದಲ್ಲೂ ಅವರು ಭಾಗಿಯಾಗಬೇಕಿದೆ.

2024ರಲ್ಲಿ 102 ದಿನ ರಜೆ ಪಡೆಯಲಿರುವ ಅಕ್ಷಯ್​ ಕುಮಾರ್​; ಇಲ್ಲಿದೆ ನೋಡಿ ಪ್ಲ್ಯಾನ್​
ಅಕ್ಷಯ್​ ಕುಮಾರ್​
Follow us
ಮದನ್​ ಕುಮಾರ್​
|

Updated on: Jan 05, 2024 | 11:13 AM

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಾರೆ. ಸಿನಿಮಾ ಕೆಲಸಗಳನ್ನು ಅತಿ ವೇಗವಾಗಿ ಮುಗಿಸುವಲ್ಲಿ ಅವರಿಗೆ ಬೇರೆ ಯಾರೂ ಸಾಟಿ ಇಲ್ಲ. ವರ್ಷಕ್ಕೆ ಅವರ 3-4 ಸಿನಿಮಾಗಳು ಬಿಡುಗಡೆ ಆಗುತ್ತವೆ. ಕೆಲಸದ ಅವಧಿ ಬಗ್ಗೆ ಅವರು ಹೆಚ್ಚು ಕಟ್ಟುನಿಟ್ಟಾಗಿದ್ದಾರೆ. ಉಳಿದ ಸಮಯವನ್ನು ಅವರು ಫ್ಯಾಮಿಲಿಗಾಗಿ ಮೀಸಲಿಡುತ್ತಾರೆ. ಅಚ್ಚರಿ ಏನೆಂದರೆ 2024ರಲ್ಲಿ ಅಕ್ಷಯ್​ ಕುಮಾರ್​ ಅವರು ಬರೋಬ್ಬರಿ 102 ದಿನಗಳ ಕಾಲ ರಜೆ (Holiday) ಪಡೆಯಲಿದ್ದಾರೆ. ಅವರ ಪ್ಲ್ಯಾನ್​ ಏನು ಎಂಬ ಬಗ್ಗೆ ಇಲ್ಲಿದೆ ವಿವರ..

102 ದಿನಗಳು ಎಂದರೆ ಅಕ್ಷಯ್​ ಕುಮಾರ್​ ಅವರು ಸತತವಾಗಿ ಮೂರು ತಿಂಗಳು ಕೆಲಸಕ್ಕೆ ಚಕ್ಕರ್​ ಹಾಕುವುದಿಲ್ಲ. ಶೂಟಿಂಗ್​ ನಡುವೆಯೇ ತಮಗೆ ಅಗತ್ಯ ಇರುವ ದಿನಗಳಲ್ಲಿ ಅವರು ರಜೆ ಪಡೆಯುತ್ತಾರೆ. 52 ಭಾನುವಾರ, 30 ದಿನ ಬೇಸಿಗೆ ರಜೆ, ಆಪ್ತರ ಜನ್ಮದಿನ ಸೆಲೆಬ್ರೇಟ್​ ಮಾಡಲು 10 ದಿನ, ದೀಪಾವಳಿ ಹಬ್ಬದ ಸಂಭ್ರಮಕ್ಕೆ 10 ದಿನಗಳ ಕಾಲ ರಜೆ ಪಡೆಯುತ್ತಾರೆ. ಹೀಗೆ ಒಟ್ಟು 102 ದಿನಗಳ ಕಾಲ ಸಿನಿಮಾ ಕೆಲಸಗಳಿಂದ ದೂರ ಉಳಿಯಲಿದ್ದಾರೆ.

ಅಕ್ಷಯ್​ ಕುಮಾರ್​ ಅವರ ದಿನಚರಿ ತುಂಬ ಕಟ್ಟುನಿಟ್ಟಾಗಿ ಇರುತ್ತದೆ. ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ತನಕ ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಈ ವರ್ಷ ಬರೋಬ್ಬರಿ 5 ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. 20ಕ್ಕೂ ಅಧಿಕ ಬ್ರ್ಯಾಂಡ್​ಗಳ ಜಾಹೀರಾತು ಚಿತ್ರೀಕರಣದಲ್ಲೂ ಅವರು ಭಾಗಿಯಾಗಬೇಕಿದೆ. ಇಷ್ಟೆಲ್ಲ ಬ್ಯುಸಿ ಇದ್ದರೂ ಕೂಡ ಕುಟುಂಬಕ್ಕಾಗಿ ಸಮಯ ಮೀಸಲಿಡುವುದನ್ನು ಅವರು ತಪ್ಪಿಸುವುದಿಲ್ಲ.

ಇದನ್ನೂ ಓದಿ: ಬೇರೆ ಹೀರೋಗಳ ಸಿನಿಮಾ ಸಾವಿರ ಕೋಟಿ ರೂ. ಗಳಿಸಿದ್ದಕ್ಕೆ ಅಕ್ಷಯ್​ ಕುಮಾರ್​ ಹೇಳೋದೇನು?

ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ನಿರೀಕ್ಷಿತ ಮಟ್ಟದ ಗೆಲುವು ಸಿಕ್ಕಿಲ್ಲ. ಅವಸರದಲ್ಲಿ ಸಿನಿಮಾ ಮಾಡುವುದೇ ಇದಕ್ಕೆ ಕಾರಣ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಸಿನಿಮಾಗಳ ಸಂಖ್ಯೆ ಜಾಸ್ತಿ ಮಾಡುವುದಕ್ಕಿಂತ ಗುಣಮಟ್ಟದ ಸಿನಿಮಾ ಮಾಡುವಲ್ಲಿ ಅಕ್ಷಯ್​ ಕುಮಾರ್​ ಗಮನ ಹರಿಸಬೇಕು ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು