AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ 102 ದಿನ ರಜೆ ಪಡೆಯಲಿರುವ ಅಕ್ಷಯ್​ ಕುಮಾರ್​; ಇಲ್ಲಿದೆ ನೋಡಿ ಪ್ಲ್ಯಾನ್​

ಅಕ್ಷಯ್​ ಕುಮಾರ್​ ಅವರ ದಿನಚರಿ ತುಂಬ ಕಟ್ಟುನಿಟ್ಟಾಗಿ ಇರುತ್ತದೆ. ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ತನಕ ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಈ ವರ್ಷ ಬರೋಬ್ಬರಿ 5 ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. 20ಕ್ಕೂ ಅಧಿಕ ಬ್ರ್ಯಾಂಡ್​ಗಳ ಜಾಹೀರಾತು ಚಿತ್ರೀಕರಣದಲ್ಲೂ ಅವರು ಭಾಗಿಯಾಗಬೇಕಿದೆ.

2024ರಲ್ಲಿ 102 ದಿನ ರಜೆ ಪಡೆಯಲಿರುವ ಅಕ್ಷಯ್​ ಕುಮಾರ್​; ಇಲ್ಲಿದೆ ನೋಡಿ ಪ್ಲ್ಯಾನ್​
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jan 05, 2024 | 11:13 AM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಾರೆ. ಸಿನಿಮಾ ಕೆಲಸಗಳನ್ನು ಅತಿ ವೇಗವಾಗಿ ಮುಗಿಸುವಲ್ಲಿ ಅವರಿಗೆ ಬೇರೆ ಯಾರೂ ಸಾಟಿ ಇಲ್ಲ. ವರ್ಷಕ್ಕೆ ಅವರ 3-4 ಸಿನಿಮಾಗಳು ಬಿಡುಗಡೆ ಆಗುತ್ತವೆ. ಕೆಲಸದ ಅವಧಿ ಬಗ್ಗೆ ಅವರು ಹೆಚ್ಚು ಕಟ್ಟುನಿಟ್ಟಾಗಿದ್ದಾರೆ. ಉಳಿದ ಸಮಯವನ್ನು ಅವರು ಫ್ಯಾಮಿಲಿಗಾಗಿ ಮೀಸಲಿಡುತ್ತಾರೆ. ಅಚ್ಚರಿ ಏನೆಂದರೆ 2024ರಲ್ಲಿ ಅಕ್ಷಯ್​ ಕುಮಾರ್​ ಅವರು ಬರೋಬ್ಬರಿ 102 ದಿನಗಳ ಕಾಲ ರಜೆ (Holiday) ಪಡೆಯಲಿದ್ದಾರೆ. ಅವರ ಪ್ಲ್ಯಾನ್​ ಏನು ಎಂಬ ಬಗ್ಗೆ ಇಲ್ಲಿದೆ ವಿವರ..

102 ದಿನಗಳು ಎಂದರೆ ಅಕ್ಷಯ್​ ಕುಮಾರ್​ ಅವರು ಸತತವಾಗಿ ಮೂರು ತಿಂಗಳು ಕೆಲಸಕ್ಕೆ ಚಕ್ಕರ್​ ಹಾಕುವುದಿಲ್ಲ. ಶೂಟಿಂಗ್​ ನಡುವೆಯೇ ತಮಗೆ ಅಗತ್ಯ ಇರುವ ದಿನಗಳಲ್ಲಿ ಅವರು ರಜೆ ಪಡೆಯುತ್ತಾರೆ. 52 ಭಾನುವಾರ, 30 ದಿನ ಬೇಸಿಗೆ ರಜೆ, ಆಪ್ತರ ಜನ್ಮದಿನ ಸೆಲೆಬ್ರೇಟ್​ ಮಾಡಲು 10 ದಿನ, ದೀಪಾವಳಿ ಹಬ್ಬದ ಸಂಭ್ರಮಕ್ಕೆ 10 ದಿನಗಳ ಕಾಲ ರಜೆ ಪಡೆಯುತ್ತಾರೆ. ಹೀಗೆ ಒಟ್ಟು 102 ದಿನಗಳ ಕಾಲ ಸಿನಿಮಾ ಕೆಲಸಗಳಿಂದ ದೂರ ಉಳಿಯಲಿದ್ದಾರೆ.

ಅಕ್ಷಯ್​ ಕುಮಾರ್​ ಅವರ ದಿನಚರಿ ತುಂಬ ಕಟ್ಟುನಿಟ್ಟಾಗಿ ಇರುತ್ತದೆ. ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ತನಕ ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಈ ವರ್ಷ ಬರೋಬ್ಬರಿ 5 ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. 20ಕ್ಕೂ ಅಧಿಕ ಬ್ರ್ಯಾಂಡ್​ಗಳ ಜಾಹೀರಾತು ಚಿತ್ರೀಕರಣದಲ್ಲೂ ಅವರು ಭಾಗಿಯಾಗಬೇಕಿದೆ. ಇಷ್ಟೆಲ್ಲ ಬ್ಯುಸಿ ಇದ್ದರೂ ಕೂಡ ಕುಟುಂಬಕ್ಕಾಗಿ ಸಮಯ ಮೀಸಲಿಡುವುದನ್ನು ಅವರು ತಪ್ಪಿಸುವುದಿಲ್ಲ.

ಇದನ್ನೂ ಓದಿ: ಬೇರೆ ಹೀರೋಗಳ ಸಿನಿಮಾ ಸಾವಿರ ಕೋಟಿ ರೂ. ಗಳಿಸಿದ್ದಕ್ಕೆ ಅಕ್ಷಯ್​ ಕುಮಾರ್​ ಹೇಳೋದೇನು?

ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ನಿರೀಕ್ಷಿತ ಮಟ್ಟದ ಗೆಲುವು ಸಿಕ್ಕಿಲ್ಲ. ಅವಸರದಲ್ಲಿ ಸಿನಿಮಾ ಮಾಡುವುದೇ ಇದಕ್ಕೆ ಕಾರಣ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಸಿನಿಮಾಗಳ ಸಂಖ್ಯೆ ಜಾಸ್ತಿ ಮಾಡುವುದಕ್ಕಿಂತ ಗುಣಮಟ್ಟದ ಸಿನಿಮಾ ಮಾಡುವಲ್ಲಿ ಅಕ್ಷಯ್​ ಕುಮಾರ್​ ಗಮನ ಹರಿಸಬೇಕು ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ?
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ಮನೆ ಬಳಿಯೇ ಬಾಂಬ್​​ ಸ್ಫೋಟ
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ!
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
ಡಿಕೆಶಿ​ಗೆ ಶುಭಸುದ್ದಿ ಸಿಗುತ್ತೆ ಎಂಬ ಮಾತಿಗೆ ಮಾಜಿ ಸಚಿವ ರಾಜಣ್ಣ ಏನಂದ್ರು?
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್
‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್