AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ 102 ದಿನ ರಜೆ ಪಡೆಯಲಿರುವ ಅಕ್ಷಯ್​ ಕುಮಾರ್​; ಇಲ್ಲಿದೆ ನೋಡಿ ಪ್ಲ್ಯಾನ್​

ಅಕ್ಷಯ್​ ಕುಮಾರ್​ ಅವರ ದಿನಚರಿ ತುಂಬ ಕಟ್ಟುನಿಟ್ಟಾಗಿ ಇರುತ್ತದೆ. ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ತನಕ ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಈ ವರ್ಷ ಬರೋಬ್ಬರಿ 5 ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. 20ಕ್ಕೂ ಅಧಿಕ ಬ್ರ್ಯಾಂಡ್​ಗಳ ಜಾಹೀರಾತು ಚಿತ್ರೀಕರಣದಲ್ಲೂ ಅವರು ಭಾಗಿಯಾಗಬೇಕಿದೆ.

2024ರಲ್ಲಿ 102 ದಿನ ರಜೆ ಪಡೆಯಲಿರುವ ಅಕ್ಷಯ್​ ಕುಮಾರ್​; ಇಲ್ಲಿದೆ ನೋಡಿ ಪ್ಲ್ಯಾನ್​
ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jan 05, 2024 | 11:13 AM

Share

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಾರೆ. ಸಿನಿಮಾ ಕೆಲಸಗಳನ್ನು ಅತಿ ವೇಗವಾಗಿ ಮುಗಿಸುವಲ್ಲಿ ಅವರಿಗೆ ಬೇರೆ ಯಾರೂ ಸಾಟಿ ಇಲ್ಲ. ವರ್ಷಕ್ಕೆ ಅವರ 3-4 ಸಿನಿಮಾಗಳು ಬಿಡುಗಡೆ ಆಗುತ್ತವೆ. ಕೆಲಸದ ಅವಧಿ ಬಗ್ಗೆ ಅವರು ಹೆಚ್ಚು ಕಟ್ಟುನಿಟ್ಟಾಗಿದ್ದಾರೆ. ಉಳಿದ ಸಮಯವನ್ನು ಅವರು ಫ್ಯಾಮಿಲಿಗಾಗಿ ಮೀಸಲಿಡುತ್ತಾರೆ. ಅಚ್ಚರಿ ಏನೆಂದರೆ 2024ರಲ್ಲಿ ಅಕ್ಷಯ್​ ಕುಮಾರ್​ ಅವರು ಬರೋಬ್ಬರಿ 102 ದಿನಗಳ ಕಾಲ ರಜೆ (Holiday) ಪಡೆಯಲಿದ್ದಾರೆ. ಅವರ ಪ್ಲ್ಯಾನ್​ ಏನು ಎಂಬ ಬಗ್ಗೆ ಇಲ್ಲಿದೆ ವಿವರ..

102 ದಿನಗಳು ಎಂದರೆ ಅಕ್ಷಯ್​ ಕುಮಾರ್​ ಅವರು ಸತತವಾಗಿ ಮೂರು ತಿಂಗಳು ಕೆಲಸಕ್ಕೆ ಚಕ್ಕರ್​ ಹಾಕುವುದಿಲ್ಲ. ಶೂಟಿಂಗ್​ ನಡುವೆಯೇ ತಮಗೆ ಅಗತ್ಯ ಇರುವ ದಿನಗಳಲ್ಲಿ ಅವರು ರಜೆ ಪಡೆಯುತ್ತಾರೆ. 52 ಭಾನುವಾರ, 30 ದಿನ ಬೇಸಿಗೆ ರಜೆ, ಆಪ್ತರ ಜನ್ಮದಿನ ಸೆಲೆಬ್ರೇಟ್​ ಮಾಡಲು 10 ದಿನ, ದೀಪಾವಳಿ ಹಬ್ಬದ ಸಂಭ್ರಮಕ್ಕೆ 10 ದಿನಗಳ ಕಾಲ ರಜೆ ಪಡೆಯುತ್ತಾರೆ. ಹೀಗೆ ಒಟ್ಟು 102 ದಿನಗಳ ಕಾಲ ಸಿನಿಮಾ ಕೆಲಸಗಳಿಂದ ದೂರ ಉಳಿಯಲಿದ್ದಾರೆ.

ಅಕ್ಷಯ್​ ಕುಮಾರ್​ ಅವರ ದಿನಚರಿ ತುಂಬ ಕಟ್ಟುನಿಟ್ಟಾಗಿ ಇರುತ್ತದೆ. ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ತನಕ ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಈ ವರ್ಷ ಬರೋಬ್ಬರಿ 5 ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. 20ಕ್ಕೂ ಅಧಿಕ ಬ್ರ್ಯಾಂಡ್​ಗಳ ಜಾಹೀರಾತು ಚಿತ್ರೀಕರಣದಲ್ಲೂ ಅವರು ಭಾಗಿಯಾಗಬೇಕಿದೆ. ಇಷ್ಟೆಲ್ಲ ಬ್ಯುಸಿ ಇದ್ದರೂ ಕೂಡ ಕುಟುಂಬಕ್ಕಾಗಿ ಸಮಯ ಮೀಸಲಿಡುವುದನ್ನು ಅವರು ತಪ್ಪಿಸುವುದಿಲ್ಲ.

ಇದನ್ನೂ ಓದಿ: ಬೇರೆ ಹೀರೋಗಳ ಸಿನಿಮಾ ಸಾವಿರ ಕೋಟಿ ರೂ. ಗಳಿಸಿದ್ದಕ್ಕೆ ಅಕ್ಷಯ್​ ಕುಮಾರ್​ ಹೇಳೋದೇನು?

ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ನಿರೀಕ್ಷಿತ ಮಟ್ಟದ ಗೆಲುವು ಸಿಕ್ಕಿಲ್ಲ. ಅವಸರದಲ್ಲಿ ಸಿನಿಮಾ ಮಾಡುವುದೇ ಇದಕ್ಕೆ ಕಾರಣ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಸಿನಿಮಾಗಳ ಸಂಖ್ಯೆ ಜಾಸ್ತಿ ಮಾಡುವುದಕ್ಕಿಂತ ಗುಣಮಟ್ಟದ ಸಿನಿಮಾ ಮಾಡುವಲ್ಲಿ ಅಕ್ಷಯ್​ ಕುಮಾರ್​ ಗಮನ ಹರಿಸಬೇಕು ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್