AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಟಿಂಗ್ ಸಿಕ್ಕರೂ ಅಕ್ಷಯ್ ಕುಮಾರ್ ಚಿತ್ರಕ್ಕಿಲ್ಲ ಗೆಲುವು; ಕುಸಿಯಿತು ಮಾರುಕಟ್ಟೆ

ಅಕ್ಷಯ್ ಕುಮಾರ್ ನಟನೆಯ ‘ಕೇಸರಿ ಚಾಪ್ಟರ್ 2’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆ ಮೀರಿ ಹಿನ್ನಡೆ ಅನುಭವಿಸುತ್ತಿದೆ. ಉತ್ತಮ ರೇಟಿಂಗ್ ಪಡೆದಿದ್ದರೂ, ಚಿತ್ರದ ಕಡಿಮೆ ಗಳಿಕೆ ಅಕ್ಷಯ್ ಕುಮಾರ್ ಅವರ ಖ್ಯಾತಿಗೆ ಧಕ್ಕೆ ತಂದಿದೆ. ಬಾಲಿವುಡ್‌ನಲ್ಲಿ ಯಶಸ್ವಿ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿರುವ ಈ ಸಮಯದಲ್ಲಿ, ‘ಕೇಸರಿ 2’ ಸಹ ಅದೇ ಹಾದಿಯಲ್ಲಿ ಸಾಗುತ್ತಿದೆ ಎಂದು ಚಿತ್ರರಂಗ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ರೇಟಿಂಗ್ ಸಿಕ್ಕರೂ ಅಕ್ಷಯ್ ಕುಮಾರ್ ಚಿತ್ರಕ್ಕಿಲ್ಲ ಗೆಲುವು; ಕುಸಿಯಿತು ಮಾರುಕಟ್ಟೆ
ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on: Apr 20, 2025 | 10:55 AM

Share

ಅಕ್ಷಯ್ ಕುಮಾರ್ (Akshay Kumar) ಅವರು ಇತ್ತೀಚೆಗೆ ಸಾಲು ಸಾಲು ಸೋಲು ಕಾಣುತ್ತಿದ್ದಾರೆ. ಅವರ ಚಿತ್ರಗಳು ಎರಡಂಕಿ ಕಾಣದೆ ಹಲವು ವರ್ಷಗಳೇ ಕಳೆದು ಹೋಗಿವೆ. ಈಗ ಅವರ ನಟನೆಯ ‘ಕೇಸರಿ ಚಾಪ್ಟರ್ 2’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಕೂಡ ಬಾಕ್ಸ್ ಆಫೀಸ್​ನಲ್ಲಿ ಮಕಾಡೆ ಮಲಗುವ ಸೂಚನೆ ಸಿಕ್ಕಿದೆ. ಅಕ್ಷಯ್ ಕುಮಾರ್, ಆರ್​ ಮಾಧವನ್, ಅನನ್ಯಾ ಪಾಂಡೆ ನಟನೆಯ ಈ ಚಿತ್ರ ನಿತ್ಯ ಒಂದಂಕಿ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರ ಎರಡು ದಿನಕ್ಕೆ ಗಳಿಕೆ ಮಾಡಿದ್ದು ಕೇವಲ 17.25 ಕೋಟಿ ರೂಪಾಯಿ.

ಅಕ್ಷಯ್ ಕುಮಾರ್ ಅವರ ‘ಕೇಸರಿ’ ಸಿನಿಮಾ ಯಶಸ್ಸು ಕಂಡಿತ್ತು. 2019ರಲ್ಲಿ ಬಂದ ಚಿತ್ರದ ಸೀಕ್ವೆಲ್ ಇದಾಗಿದೆ. ಈ ಸಿನಿಮಾ ಮೊದಲ ದಿನ 7.75 ಕೋಟಿ ರೂಪಾಯಿ ಹಾಗೂ ಎರಡನೇ ದಿನ 9.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸದ್ಯ ಈಗ ಆಗುತ್ತಿರುವ ಕಲೆಕ್ಷನ್ ಅಕ್ಷಯ್ ಕುಮಾರ್ ಪಡೆಯುವ ಸಂಭಾವನೆಗೂ ಸಾಕಾಗುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇತ್ತೀಚೆಗೆ ಬಾಲಿವುಡ್​ನಲ್ಲಿ ಯಾವುದೇ ದೊಡ್ಡ ಸಿನಿಮಾಗಳು ಗೆಲ್ಲುತ್ತಿಲ್ಲ. ನೂರರಲ್ಲಿ ಒಂದು ಸಿನಿಮಾ ಮಾತ್ರ ಗೆಲ್ಲುತ್ತಿದೆ. ಅಕ್ಷಯ್ ಕುಮಾರ್ ಅವರಂಥ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಕಲೆಕ್ಷನ್ ಮಾಡಲು ಒದ್ದಾಡುತ್ತಿವೆ. ಮುಂಬೈ, ಬೆಂಗಳೂರು ಸೇರಿದಂತೆ ಎಲ್ಲ ಕಡೆಗಳಲ್ಲಿ ಸಿನಿಮಾ ಸಾಧಾರಣ ಗಳಿಕೆ ಮಾಡುತ್ತಿದೆ.

ಇದನ್ನೂ ಓದಿ
Image
ಭೀಕರ ಅಪಘಾತಕ್ಕೆ ಒಳಗಾದ ನಟ ಅಜಿತ್ ಕುಮಾರ್; ಶಾಕಿಂಗ್ ವಿಡಿಯೋ ವೈರಲ್
Image
ಉಪೇಂದ್ರ ಮಗಳಿಗೆ ಹುಟ್ಟುಹಬ್ಬದ ಸಂಭ್ರಮ; ಐಶ್ವರ್ಯಾಗೆ ಈಗೆಷ್ಟು ವರ್ಷ?
Image
ಬಿಗ್ ಬಾಸ್ ಮನೆಯಲ್ಲಿದ್ದಾಗ ವೋಟ್ ಹಾಕಿದ ಫ್ಯಾನ್ಸ್​ಗೆ ತ್ರಿವಿಕ್ರಂ ಅವಮಾನ
Image
ಪ್ರಿಯಾಂಕಾ ಪತಿ ನಿಕ್ ಜೋನಸ್​ನ ಭೇಟಿ ಮಾಡಿದ ಸಿತಾರಾ ಕುಟುಂಬ

‘ಬುಕ್ ಮೈ ಶೋ’ನಲ್ಲಿ ‘ಕೇಸರಿ ಚಾಪ್ಟರ್ 2’ ಸಿನಿಮಾ ಒಳ್ಳೆಯ ರೇಟಿಂಗ್ ಪಡೆದಿದೆ. ಆರುವರೆ ಸಾವಿರ ಜನರು ಇದಕ್ಕೆ ವೋಟ್ ಮಾಡಿದ್ದು 9.4 ರೇಟಿಂಗ್ ನೀಡಿದ್ದಾರೆ. ಆದಾಗ್ಯೂ ಸಿನಿಮಾ ಮಾತ್ರ ಗೆಲ್ಲುವ ಸೂಚನೆ ಸಿಗುತ್ತಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ.

ಇದನ್ನೂ ಓದಿ: ಮೊದಲ ದಿನ ‘ಕೇಸರಿ 2’ ಗಳಿಸಿದ್ದೆಷ್ಟು? ಗೆದ್ದರಾ ಅಕ್ಷಯ್ ಕುಮಾರ್

ಕರಣ್ ಸಿಂಗ್ ತ್ಯಾಗಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಹೀರೂ ಜೋಹರ್, ಅರುಣಾ ಭಾಟಿಯಾ, ಕರಣ್ ಜೋಹರ್, ಅಪೂರ್ವ ಮೆಹ್ತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ಈ ಚಿತ್ರ ಸೋತರೆ ಅಕ್ಷಯ್ ಕುಮಾರ್ ಸಂಭಾವನೆ ಪಡೆಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು