AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?

Laal Singh Chaddha Vs Raksha Bandhan: ಈ ಕ್ಲ್ಯಾಶ್​ ಬಗ್ಗೆ ಅಕ್ಷಯ್​ ಕುಮಾರ್​ ಅವರು ಮೌನ ಮುರಿದಿದ್ದಾರೆ. ಇದನ್ನು ಕ್ಲ್ಯಾಶ್​ ಎಂದು ಕರೆಯಲು ಅವರು ಸಿದ್ಧರಿಲ್ಲ.

ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?
ಅಕ್ಷಯ್ ಕುಮಾರ್, ಆಮಿರ್ ಖಾನ್
TV9 Web
| Edited By: |

Updated on:Jun 22, 2022 | 8:28 AM

Share

ಬಾಲಿವುಡ್​ನ ಬಹುಬೇಡಿಕೆಯ ನಟರಲ್ಲಿ ಅಕ್ಷಯ್​ ಕುಮಾರ್​ (Akshay Kumar) ಮತ್ತು ಆಮಿರ್​ ಖಾನ್​ ಕೂಡ ಮುಂಚೂಣಿಯಲ್ಲಿದ್ದಾರೆ. ಈ ಸ್ಟಾರ್​ ನಟರಿಬ್ಬರು ಈಗ ಬಾಕ್ಸ್​ ಆಫೀಸ್​ನಲ್ಲಿ ಮುಖಾಮುಖಿ ಆಗಲಿದ್ದಾರೆ. ಇಬ್ಬರ ಸಿನಿಮಾಗಳು ಒಂದೇ ದಿನ ರಿಲೀಸ್​ ಆಗುತ್ತಿವೆ. ಹೌದು, ಆಗಸ್ಟ್​ 11ರಂದು ‘ಲಾಲ್​ ಸಿಂಗ್​ ಚಡ್ಡಾ’ ಮತ್ತು ‘ರಕ್ಷಾ ಬಂಧನ್​’ ಚಿತ್ರಗಳು ಬಿಡುಗಡೆ ಆಗುತ್ತಿವೆ. ‘ರಕ್ಷಾ ಬಂಧನ್​’ (Raksha Bandhan) ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ನಟಿಸಿದ್ದರೆ, ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದಲ್ಲಿ ಆಮಿರ್​ ಖಾನ್​ (Aamir Khan) ಅಭಿನಯಿಸಿದ್ದಾರೆ. ಸಿನಿಪ್ರಿಯರಿಗೆ ಎರಡೂ ಸಿನಿಮಾಗಳ ಮೇಲೆ ನಿರೀಕ್ಷೆ ಇದೆ. ಆದರೆ ಯಾವ ಚಿತ್ರಕ್ಕೆ ಹೆಚ್ಚು ಕಲೆಕ್ಷನ್​ ಆಗಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ. ಈ ಕ್ಲ್ಯಾಶ್​ ಬಗ್ಗೆ ಸಿನಿಪ್ರಿಯರ ವಲಯದಲ್ಲಿ ಚರ್ಚೆ ಆಗುತ್ತಿದೆ.

ಈ ಎರಡೂ ಸಿನಿಮಾಗಳು ಟ್ರೇಲರ್​ ಮೂಲಕ ಗಮನ ಸೆಳೆದಿವೆ. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಮೂಡಿಬಂದಿದೆ. ಈ ಚಿತ್ರದಲ್ಲಿ ಆಮಿರ್​ ಖಾನ್​ಗೆ ಜೋಡಿಯಾಗಿ ಕರೀನಾ ಕಪೂರ್​ ಖಾನ್ ನಟಿಸಿದ್ದಾರೆ. ವಿವಿಧ ಗೆಟಪ್​ಗಳಲ್ಲಿ ಆಮಿರ್​ ಖಾನ್​ ಕಾಣಿಸಿಕೊಂಡಿದ್ದಾರೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಟಾಲಿವುಡ್​ ನಟ ಅಕ್ಕಿನೇನಿ ನಾಗ ಚೈತನ್ಯ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಲಾಲ್​ ಸಿಂಗ್​ ಚಡ್ಡಾ’ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ಆಮಿರ್​ ಖಾನ್​ ಮೇಲೆ ನಾಗ ಚೈತನ್ಯ ಫ್ಯಾನ್ಸ್​ ಬೇಸರ; ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​ನಿಂದ ನಿರಾಸೆ

ಇದನ್ನೂ ಓದಿ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ವಿಮಲ್​ ಜಾಹೀರಾತಿನಲ್ಲಿ ನಟಿಸಿದ ಅಕ್ಷಯ್​ ಕುಮಾರ್​ಗೆ ಜನರಿಂದ ಭಾರಿ ವಿರೋಧ; ಕ್ಷಮೆ ಕೇಳಿ ಹಿಂದೆ ಸರಿದ ನಟ
Image
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

‘ರಕ್ಷಾ ಬಂಧನ್​’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರು ಪಕ್ಕಾ ಫ್ಯಾಮಿಲಿ ಕಥೆಯನ್ನು ಹೇಳಲಿದ್ದಾರೆ. ನಾಲ್ಕು ತಂಗಿಯರ ಮದುವೆ ಮಾಡಿಸಲು ಕಷ್ಟಪಡುವ ಅಣ್ಣನಾಗಿ ಅಕ್ಷಯ್​ ಕುಮಾರ್​ ನಟಿಸಿದ್ದಾರೆ. ಟ್ರೇಲರ್​ ನೋಡಿ ಅಭಿಮಾನಿಗಳು ಎಮೋಷನಲ್​ ಆಗಿದ್ದಾರೆ. ಕೌಟುಂಬಿಕ ಪ್ರೇಕ್ಷಕರನ್ನು ಈ ಸಿನಿಮಾ ಹೆಚ್ಚಾಗಿ ಸೆಳೆದುಕೊಳ್ಳಲಿದೆ. ಜನರ ಪ್ರತಿಕ್ರಿಯೆಗಾಗಿ ಚಿತ್ರತಂಡ ಕಾದಿದೆ.

ಈ ಕ್ಲ್ಯಾಶ್​ ಬಗ್ಗೆ ಅಕ್ಷಯ್​ ಕುಮಾರ್​ ಅವರು ಮೌನ ಮುರಿದಿದ್ದಾರೆ. ಇದನ್ನು ಕ್ಲ್ಯಾಶ್​ ಎಂದು ಕರೆಯಲು ಅವರು ಸಿದ್ಧರಿಲ್ಲ. ‘ಇದೊಂದು ದೊಡ್ಡ ದಿನ. ಎರಡು ದೊಡ್ಡ ಸಿನಿಮಾಗಳು ಒಟ್ಟಿಗೆ ರಿಲೀಸ್​ ಆಗುತ್ತಿವೆ. ಅದು ಕ್ಲ್ಯಾಶ್ ಅಲ್ಲ. ಕೊವಿಡ್​ನಿಂದಾಗಿ ಅನೇಕ ಸಿನಿಮಾಗಳು ರಿಲೀಸ್​ ಆಗಿಲ್ಲ. ಇನ್ನೂ ಹಲವು ಸಿನಿಮಾಗಳು ರಿಲೀಸ್​ ಡೇಟ್​ಗಾಗಿ ಕಾಯುತ್ತಿವೆ. ಹಾಗಾಗಿ ಒಂದೇ ದಿನಾಂಕದಲ್ಲಿ ಹಲವು ಸಿನಿಮಾಗಳು ಬಿಡುಗಡೆ ಆಗುವುದು ಸಹಜ. ಎರಡೂ ಚಿತ್ರಗಳು ಚೆನ್ನಾಗಿ ಕಲೆಕ್ಷನ್​ ಮಾಡುತ್ತವೆ ಎಂಬ ಭರವಸೆ ನನಗಿದೆ’ ಎಂದು ಅಕ್ಷಯ್​ ಕುಮಾರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:28 am, Wed, 22 June 22

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ