AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೃಶ್ಯಂ 3’ ಚಿತ್ರದಲ್ಲಿ ಜೈದೀಪ್ ಪಾತ್ರಕ್ಕೆ ದೊಡ್ಡ ಟ್ವಿಸ್ಟ್

ದೃಶ್ಯಂ 3 ಚಿತ್ರದಿಂದ ಅಕ್ಷಯ್ ಖನ್ನಾ ನಿರ್ಗಮನವು ದೊಡ್ಡ ವಿವಾದ ಸೃಷ್ಟಿಸಿದೆ. ನಿರ್ಮಾಪಕ ಕುಮಾರ್ ಮಂಗತ್, ಅಕ್ಷಯ್ ವೃತ್ತಿಪರರಲ್ಲ ಎಂದು ಕಾನೂನು ನೋಟಿಸ್ ನೀಡಿದ್ದಾರೆ. ನಿರ್ದೇಶಕ ಅಭಿಷೇಕ್ ಪಾಠಕ್, ಜೈದೀಪ್ ಅಹ್ಲಾವತ್ ಹೊಸ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ, ಅಕ್ಷಯ್ ಬದಲಿಗೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ದೃಶ್ಯಂ 3’ ಚಿತ್ರದಲ್ಲಿ ಜೈದೀಪ್ ಪಾತ್ರಕ್ಕೆ ದೊಡ್ಡ ಟ್ವಿಸ್ಟ್
ಜೈದೀಪ್-ಅಕ್ಷಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 31, 2025 | 8:38 AM

Share

‘ಧುರಂಧರ್’ ಚಿತ್ರದ ಯಶಸ್ಸಿನ ಬೆನ್ನಲ್ಲೇ ನಟ ಅಕ್ಷಯ್ ಖನ್ನಾ ‘ದೃಶ್ಯಂ 3’ ಚಿತ್ರದಿಂದ ಹಿಂದೆ ಸರಿದರು. ಶೂಟಿಂಗ್ ಪ್ರಾರಂಭವಾಗುವ ಕೆಲವೇ ದಿನಗಳ ಮೊದಲು ಚಿತ್ರದಿಂದ ಹೊರ ನಡೆದ ನಂತರ ನಿರ್ಮಾಪಕ ಕುಮಾರ್ ಮಂಗತ್ ಅಕ್ಷಯ್ ಮೇಲೆ ಕೋಪ ಹೊರಹಾಕಿದ್ದರು. ಅಕ್ಷಯ್ ಅವರನ್ನು ‘ವೃತ್ತಿಪರರಲ್ಲದ ವ್ಯಕ್ತಿ’ ಎಂದು ಟೀಕಿಸಿದರು. ಅಕ್ಷಯ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವರು ನೋಟಿಸ್ ಸಹ ನೀಡಿದ್ದಾರೆ. ಈಗ ಚಿತ್ರದಲ್ಲಿ ಅಕ್ಷಯ್ ಬದಲಿಗೆ ನಟ ಜೈದೀಪ್ ಅಹ್ಲಾವತ್ ಅವರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಂಪೂರ್ಣ ವಿವಾದದ ನಡುವೆ, ಚಿತ್ರದ ನಿರ್ದೇಶಕ ಅಭಿಷೇಕ್ ಪಾಠಕ್ ಪ್ರತಿಕ್ರಿಯಿಸಿದ್ದಾರೆ.

ಜೈದೀಪ್ ಅಹ್ಲಾವತ್ ಅವರಿಗೆ ಚಿತ್ರದಲ್ಲಿ ಮಹತ್ವದ ಪಾತ್ರ ನೀಡಲಾಗಿದ್ದರೂ, ಅವರು ಅಕ್ಷಯ್ ಖನ್ನಾ ಬದಲಿಗೆ ಬಂದಿಲ್ಲ ಎಂದು ಅಭಿಷೇಕ್ ಪಾಠಕ್ ಹೇಳಿದ್ದಾರೆ . ಜೈದೀಪ್ ಗಾಗಿ ಹೊಸ ಪಾತ್ರವನ್ನು ಬರೆಯಲಾಗಿದೆ. ಈ ಸಮಯದಲ್ಲಿ, ಅಕ್ಷಯ್ ಖನ್ನಾ ನಿರ್ಗಮನದ ಬಗ್ಗೆ ಅಜಯ್ ದೇವಗನ್ ಅವರ ಪ್ರತಿಕ್ರಿಯೆಯನ್ನು ಅಭಿಷೇಕ್ ಬಹಿರಂಗಪಡಿಸಿದರು.

‘ಅವರು (ಅಜಯ್) ಸಂಪೂರ್ಣ ನಿರ್ಧಾರವನ್ನು ನನಗೆ ವಹಿಸಿದ್ದಾರೆ. ಇದು ನನ್ನ, ಅಕ್ಷಯ್ ಖನ್ನಾ ಮತ್ತು ನಿರ್ಮಾಣದ ನಡುವಿನ ಸಮಸ್ಯೆ. ಶೂಟಿಂಗ್‌ಗೆ ಕೇವಲ ಐದು ದಿನಗಳ ಮೊದಲು ಅಕ್ಷಯ್ ಚಿತ್ರವನ್ನು ತೊರೆದರು. ಎಲ್ಲವನ್ನೂ ತಿಳಿದು ಅವರು ಹೀಗೆ ಮಾಡಿದರು’ ಎಂದಿದ್ದಾರೆ ಅಭಿಷೇಕ್.

‘ನನ್ನ ಚಿತ್ರ ಎಲ್ಲಿಂದ ಮುಗಿಯಿತೋ ಅಲ್ಲಿಂದ ಆರಂಭವಾಗುತ್ತದೆ. ನಾನು ಈಗಾಗಲೇ ಅವರಿಗೆ ವಿಗ್ ಬಗ್ಗೆ ವಿವರಿಸಿದ್ದೆ. ಅಕ್ಷಯ್ ಕೂಡ ಅದಕ್ಕೆ ಒಪ್ಪಿಕೊಂಡಿದ್ದರು. ಆದರೆ ಕೆಲವು ದಿನಗಳ ನಂತರ ಅವರು ಮತ್ತೆ ಅದೇ ಬೇಡಿಕೆಯೊಂದಿಗೆ ನನ್ನ ಬಳಿಗೆ ಬಂದರು. ಇದು ಅಸಾಧ್ಯವಾದ ಮಾತಾಗಿತ್ತು’ ಎಂದಿದ್ದಾರೆ ಅಭಿಷೇಕ್.

ಇದನ್ನೂ ಓದಿ: ‘ಧುರಂಧರ್’ ತಡೆಯೋರು ಯಾರೂ ಇಲ್ಲ: ಸಾವಿರ ಕೋಟಿ ರೂ. ದಾಟಿದರೂ ನಿಂತಿಲ್ಲ ಹವಾ

‘ದೃಶ್ಯಂ 3’ ಚಿತ್ರಕ್ಕೆ ಅಕ್ಷಯ್ 21 ಕೋಟಿ ಸಂಭಾವನೆ ಕೇಳಿದ್ದಾರೆಂಬ ಮಾತಿದೆ. ಈ ಬಗ್ಗೆ ಅಭಿಷೇಕ್ ಮಾತನಾಡಿದ್ದಾರೆ. ‘ನಿರ್ಧರಿಸಿದ ಸಂಭಾವನೆಯ ಬಗ್ಗೆ ನಾನು ಏನನ್ನೂ ಹೇಳಲು ಬಯಸುವುದಿಲ್ಲ. ನೀವು ಈಗ ಸೂಪರ್‌ಸ್ಟಾರ್ ಆಗಿದ್ದೀರಿ ಎಂದು ಆಪ್ತರು ಅಕ್ಷಯ್​​ಗೆ ಹೇಳಿರಬೇಕು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಡಿಕೆಶಿ​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ಆಪ್ತ ಸಚಿವರಿಗೆ ಆತಂಕ
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ!
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಪಟ್ಟದ ಪಗಡೆಯಾಟ ಕ್ಲೈಮ್ಯಾಕ್ಸ್​​ಗೆ ಹೊಸ ಟ್ವಿಸ್ಟ್​​
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಡಿಕೆಶಿಗೆ ಸಿಎಂ ಪಟ್ಟ!: ಸತ್ಯವಾಗುತ್ತಿದೆ ರಂಭಾಪುರಿ ಶ್ರೀಗಳ ಮಾತು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಬಂಡೀಪುರದಲ್ಲಿ ಚಲಿಸುವ ಕಾರಿಂದ ಬಿಯರ್ ಕ್ಯಾನ್, ಟಿಶ್ಯೂ ಎಸೆದ ಪ್ರವಾಸಿಗರು
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್
ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್