AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುರೋಪ್​ಗೆ ಹಾರಿದ ಆಲಿಯಾ, ​ರಾಮ್ ಚರಣ್​, ಜ್ಯೂ. ಎನ್​ಟಿಆರ್, ರಾಜಮೌಳಿ

ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಾಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ.

ಯುರೋಪ್​ಗೆ ಹಾರಿದ ಆಲಿಯಾ, ​ರಾಮ್ ಚರಣ್​, ಜ್ಯೂ. ಎನ್​ಟಿಆರ್, ರಾಜಮೌಳಿ
ರಾಮ್​ ಚರಣ್​ - ಆಲಿಯಾ ಭಟ್​
TV9 Web
| Edited By: |

Updated on: Aug 02, 2021 | 6:08 PM

Share

ಆರ್​ಆರ್​ಆರ್​ ಸಿನಿಮಾ ದೊಡ್ಡಮಟ್ಟದಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಫ್ರೆಂಡ್​ಶಿಪ್​ ಡೇ ದಿನ ರಿಲೀಸ್​ ಆದ ಈ ಚಿತ್ರದ ಹಾಡು ಲಕ್ಷಲಕ್ಷ ವೀಕ್ಷಣೆ ಕಾಣುತ್ತಿರುವಾಗಲೇ ಇಡೀ ಚಿತ್ರತಂಡ ಯುರೋಪ್​ಗೆ ಪ್ರಯಾಣ ಬೆಳೆಸಿದೆ. ಇಂದು ಮುಂಜಾನೆಯೇ ಆಲಿಯಾ ಭಟ್​, ರಾಮ್​ ಚರಣ್​, ಜ್ಯೂ.ಎನ್​ಟಿಆರ್​, ರಾಜಮೌಳಿ ಹಾಗೂ ಆರ್​ಆರ್​ಆರ್​ ತಂಡ ಪೂರ್ವ ಯುರೋಪ್​ಗೆ ಪ್ರಯಾಣ ಬೆಳೆಸಿದೆ.

ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಾಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚುತ್ತಿದ್ದಾರೆ. ಆಲಿಯಾ ಭಟ್​ಗೆ ಸೀತಾ ಎಂಬ ಪಾತ್ರ ನೀಡಲಾಗಿದೆ. ಈ ಚಿತ್ರದಲ್ಲಿ ವಿಶೇಷ ಹಾಡೊಂದು ಬರಲಿದ್ದು, ಇದರ ಶೂಟಿಂಗ್​ ಯುರೋಪ್​ನಲ್ಲಿ ನಡೆಯಲಿದೆ.

ಇಂದು ಮುಂಜಾನೆ ಆರ್​​ಆರ್​ಆರ್​ ತಂಡ ವಿಮಾನ ಏರಿದೆ. ಸದ್ಯ, ಭಾರತದಲ್ಲಿ ಕೊವಿಡ್​ ಪ್ರಕರಣ ಹೆಚ್ಚುತ್ತಿದೆ. ಮತ್ತೆ ಲಾಕ್​ಡೌನ್​ ಆಗುವ ಭಯವೂ ಚಿತ್ರತಂಡಕ್ಕೆ ಕಾಡಿದೆ. ಈ ಕಾರಣಕ್ಕೆ ಕೊಂಚ ಬೇಗವೇ ಚಿತ್ರತಂಡ ಯುರೋಪ್​ ವಿಮಾನ ಏರಿದೆ ಎನ್ನಲಾಗಿದೆ. ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡಿದ್ದರಿಂದ ಸಿನಿಮಾ ಶೂಟಿಂಗ್​ ವಿಳಂಬವಾಗಿತ್ತು. ಈಗ ಕೊನೆಯ ಹಂತದ ಚಿತ್ರೀಕರಣಕ್ಕೆ ಸಿನಿಮಾ ತಂಡ ಚುರುಕುಮುಟ್ಟಿಸಿದೆ.

ಅಕ್ಟೋಬರ್​ 13ರಂದು ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಆಗಸ್ಟ್ 1ರಂದು ದೋಸ್ತಿ ಹಾಡು ರಿಲೀಸ್​ ಆಗಿತ್ತು. ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಹಾಡು ಮೂಡಿಬಂದಿದೆ. ಎಲ್ಲ ಭಾಷೆಯಲ್ಲೂ ಬೇರೆ ಬೇರೆ ಗಾಯಕರು ಹಾಡಿದ್ದಾರೆ. ಕನ್ನಡ ವರ್ಷನ್​ಗೆ ಯಾಸಿನ್​ ನಿಜಾರ್​ ಧ್ವನಿ ನೀಡಿದ್ದಾರೆ. ಅವರು ಮೂಲತಃ ಕನ್ನಡದವರಲ್ಲ. ಈವರೆಗೂ ಕನ್ನಡದ ಕೆಲವೇ ಕೆಲವು ಹಾಡುಗಳನ್ನು ಅವರು ಹಾಡಿದ್ದಾರಷ್ಟೇ. ಹಾಗಾಗಿ ‘ದೋಸ್ತಿ’ ಗೀತೆಯಲ್ಲಿ ಹೆಚ್ಚು ಕನ್ನಡದ ಫ್ಲೇವರ್​ ಕೇಳಿಸುತ್ತಿಲ್ಲ ಎಂದು ಕೆಲವು ಸಿನಿಪ್ರಿಯರು ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಫ್ರೆಂಡ್​ಶಿಪ್​ ಡೇ ಪ್ರಯುಕ್ತ RRR​ ಚಿತ್ರದ ‘ದೋಸ್ತಿ’ ಹಾಡು ರಿಲೀಸ್​; ಕನ್ನಡಿಗರಿಗೆ ಕಾಡಿದೆ ಒಂದು ಕೊರತೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್